Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿವೃತ್ತ ಪ್ರಾಂಶುಪಾಲ ಸಿ.ಎಸ್. ಮಧ್ಯಸ್ಥ ಅವರಿಗೆ ಸನ್ಮಾನ
    ಕುಂದಾಪ್ರದ್ ಸುದ್ಧಿ

    ನಿವೃತ್ತ ಪ್ರಾಂಶುಪಾಲ ಸಿ.ಎಸ್. ಮಧ್ಯಸ್ಥ ಅವರಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Click Here

    ಕುಂದಾಪುರ: ಹೆಮ್ಮಾಡಿ ಶ್ರೀ.ವಿ.ವಿ.ವಿ.ಮಂಡಳಿ ಆಡಳಿತಕ್ಕೆ ಒಳಪಟ್ಟ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಏಳು ವರ್ಷ ಕಾಲ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ ಸೀತಾರಾಮ ಮಧ್ಯಸ್ಥ ಅವರನ್ನು ಶುಕ್ರವಾರ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು. ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಎಸ್.ಜನಾರ್ದನ ಮರವಂತೆ ಮತ್ತು ಅವರ ಧರ್ಮಪತ್ನಿ ನಿವೃತ್ತ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಐ.ವಸಂತ ಕುಮಾರಿ ಮಧ್ಯಸ್ಥ ಅವರನ್ನು ಸನ್ಮಾನಿಸಿದರು. ಸನ್ಮಾನಿಸಿದ ಎಸ್.ಜನಾರ್ದನ ಮರವಂತೆ ಮಾತನಾಡಿ, ಸರಳ ಸಜ್ಜನಿಕೆಯ ಸಾಕಾರ ಮೂರ್ತಿ ಮಧ್ಯಸ್ಥರ ಶಿಸ್ತು ಬಧ್ಧ ಆಡಳಿತದಿಂದ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಗ್ರಾಮೀಣ ಬಡ ವಿಧ್ಯಾರ್ಥಿಗಳ ಬಗ್ಗೆ ಅತೀವ ಕಾಳಜಿ ಹೊಂದಿದ ಪ್ರಾಮಾಣಿಕ ವ್ಯಕ್ತಿ ಇಂದಿನ ಸಮಾಜದಲ್ಲಿ ಸಿಗುವುದು ಬಹಳ ಅಪರೂಪ. ಪ್ರಸ್ತುತ ಶಿಕ್ಷಣ ಸಂಸ್ಥೆಗಳಿಗೆ ಮಧ್ಯಸ್ಥರಂತಹ ವ್ಯಕ್ತಿಗಳ ಸೇವೆ ಇನ್ನೂ ಅವಶ್ಯಕತೆ ಇದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಧ್ಯಸ್ಥರು ವೃತ್ತಿ ಜೀವನದಲ್ಲಿ ನನ್ನ ಪ್ರಾಮಾಣಿಕ ಸೇವೆ ಆತ್ಮ ಸಂತೃಪ್ತಿ ತಂದಿದೆ. ನನ್ನ ಸೇವೆಯಿಂದ ನಾಲ್ಕಾರು ಜನ ಪ್ರಯೋಜನ ಪಡೆದುಕೊಂಡರೆ ಅದುವೇ ನನ್ನ ಜೀವನದ ಸಾರ್ಥಕತೆ ಮತ್ತು ನನಗೆ ನೀಡಿದ ಗೌರವ ಎಂದರು.
    ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜನತಾ ಪ್ರೌಢ ಶಾಲಾ ಹಿರಿಯ ಶಿಕ್ಷಕ ದಿನಕರ.ಎಸ್ ಸಭೆಯಲ್ಲಿ ಉಪಸ್ಥಿತರಿದ್ದರು. ಸನ್ಮಾನಿತರ ಕುರಿತು ಉಪನ್ಯಾಸಕರಾದ ಗೀತಾ ಜೋಷಿ, ಜೆಸ್ಸಿ ಡಿಸಿಲ್ವ, ಮಂಜುನಾಥ.ಕೆ.ಎಸ್, ಮಂಜುನಾಥ ಚಂದನ್ ಮತ್ತು ವಿದ್ಯಾರ್ಥಿಗಳಾದ ಅವಿನಾಶ, ಅಭಿಷೇಕ, ರಂಜಿತ, ನಿತೇಶ್, ಅಶ್ವತ, ಅನುಷ, ಪ್ರಶಾಂತಿ, ಶ್ವೇತ, ಸುಕೇಶ ಸನ್ಮಾನಿತರ ಕುರಿತು ಮಾತನಾಡಿದರು. ಕನ್ನಡ ಭಾಷಾ ಉಪನ್ಯಾಸಕ ಮಂಜುನಾಥ.ಕೆ.ಎಸ್ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ ಚಂದನ್ ಕಾರ್ಯಕ್ರಮ ನಿರೂಪಿಸಿದರು. ಗಣಕ ವಿಜ್ಞಾನ ಉಪನ್ಯಾಸಕ ಹರೀಶ್ ಕಾಂಚನ್ ಅತಿಥಿಗಳನ್ನು ಗೌರವಿಸಿದರು. ಇತಿಹಾಸ ಉಪನ್ಯಾಸಕಿ ಗಿರಿಜಾ ಕೊಡೇರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಮರುಮೌಲ್ಯ ಮಾಪನದಿಂದ ಜನತಾ ಪಿಯು ಕಾಲೇಜಿನ 22 ವಿದ್ಯಾರ್ಥಿಗಳು ಟಾಪ್ 10 ರ‍್ಯಾಂಕ್‌ನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ

    30/04/2026

    ಜನತಾ ಪಿಯು ಕಾಲೇಜು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಜಿಲ್ಲೆಗೆ ಪ್ರಥಮ ರ‍್ಯಾಂಕ್‌, ಟಾಪ್ 10 ರಲ್ಲಿ 17 ರ‍್ಯಾಂಕ್‌

    13/04/2026

    ದ್ವಿತೀಯ ಪಿಯು ಫಲಿತಾಂಶ: ಜನತಾ ಪಿಯು ಕಾಲೇಜು ಹೆಮ್ಮಾಡಿಯ 15 ವಿದ್ಯಾರ್ಥಿಗಳು ಟಾಪರ್

    10/04/2026
    Leave A Reply Cancel Reply

    18 + twenty =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.