Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಕಡಲಿಗೆ ಇಳಿದ ಲಾರಿ
    ಅಪಘಾತ-ಅಪರಾಧ ಸುದ್ದಿ

    ಮರವಂತೆ: ಕಡಲಿಗೆ ಇಳಿದ ಲಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಮರವಂತೆಯ ಮೀನುಗಾರಿಕಾ ಹೊರಬಂದರು ಕಾಮಗಾರಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಲಾರಿಯೊಂದು ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಡಲಿಗೆ ಇಳಿದಿದೆ. ಲಾರಿಯ ಮುಂಭಾಗ ನೀರಿನಲ್ಲಿ ಮುಳುಗುವ ಮುನ್ನ ಚಾಲಕ ವಾಹನದಿಂದ ಹೊರಕ್ಕೆ ಜಿಗಿದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    Click Here

    Call us

    Click Here

    ಸುಮಾರು ಎಂಟು ವರ್ಷಗಳ ಹಿಂದೆ ಆರಂಭವಾದ ಬಂದರಿನ ಕಾಮಗಾರಿ ದೀರ್ಘ ಸಮಯದಿಂದ ಸ್ಥಗಿತವಾಗಿದೆ. ಮಾಡಿದ ಕಾಮಗಾರಿಯೂ ಸಮರ್ಪಕವಾಗಿಲ್ಲ ಎಂದು ಇಲ್ಲಿನ ಮೀನುಗಾರರು ದೂರುತ್ತಿದ್ದಾರೆ. ಕಾಮಗಾರಿಯ ವಿನ್ಯಾಸದಲ್ಲಿ ಬದಲಾವಣೆ ಮಾಡಿದ ಕಾರಣ ಅದಕ್ಕೆ ತಗಲುವ ಹಣವನ್ನು ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲವಾದ್ದರಿಂದ ಗುತ್ತಿಗೆ ವಹಿಸಿಕೊಂಡ ತಮಿಳುನಾಡಿನ ಎನ್‌ಎಸ್‌ಕೆ ಬಿಲ್ಡರ‍್ಸ್ ಎಂಬ ಸಂಸ್ಥೆ ಒಂದು ವರ್ಷದ ಹಿಂದೆಯೇ ಕೆಲಸ ನಿಲ್ಲಿಸಿತ್ತು. ಅದರ ಪರಿಣಾಮವಾಗಿ ಸಂಸ್ಥೆಯ ಯಂತ್ರೋಪಕರಣಗಳು, ವಾಹನಗಳು ತುಕ್ಕು ಹಿಡಿದು ಬಳಸಲಾರದ ಸ್ಥಿತಿಗೆ ತಲಪಿವೆ. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಸಂಸದ ಬಿ. ವೈ. ರಾಘವೇಂದ್ರ ಈ ಹಿಂದೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಗಳಿಗೆ ಹಾಗೂ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳಿಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಅಂದಾಜು ತಯಾರಿಸಿ ಸರ್ಕಾರದ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಚುನಾವಣಾ ನೀತಿ ಸಂಹಿತೆಯ ಅವಧಿ ಮುಗಿಯುತ್ತದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಡುವ ಸೂಚನೆಯ ಹಿನ್ನೆಲೆಯಲ್ಲಿ ಇದ್ದಬದ್ದ ಯಂತ್ರ ಮತ್ತು ವಾಹನ ಬಳಸಿ ಕಾಮಗಾರಿ ಮರಳಿ ಆರಂಭಿಸಲು ಗುತ್ತಿಗೆದಾರರು ಮುಂದಾದರು. ಸುಸ್ಥಿತಿಯಲ್ಲಿಲ್ಲದ ಲಾರಿಯನ್ನು ಬಳಸಿದ್ದರಿಂದ ಅದು ನಿಯಂತ್ರಣಕ್ಕೆ ಬಾರದೆ ಕಡಲಿಗೆ ಇಳಿಯಿತು ಎಂದು ಹೇಳಲಾಗುತ್ತಿದೆ. ಅದನ್ನು ಎತ್ತಲು ಅಗತ್ಯವಿರುವ ಯಂತ್ರಸಂಸ್ಥೆಯ ಬಳಿ ಇಲ್ಲದ್ದರಿಂದ ಬೇರೆಯವರಿಂದ ಪಡೆಯಲು ಯತ್ನಿಸಲಾಗುತ್ತಿದೆ ಎಂದು ಕೆಲಸಗಾರರು ಹೇಳುತ್ತಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.