Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಹಕಾರಿ ಸಂಸ್ಥೆಗಳ ಮೂಲಕ ಜನಸೇವೆ: ಡಾ. ಎಂ. ಎನ್. ರಾಜೇಂದ್ರಕುಮಾರ್
    ಊರ್ಮನೆ ಸಮಾಚಾರ

    ಸಹಕಾರಿ ಸಂಸ್ಥೆಗಳ ಮೂಲಕ ಜನಸೇವೆ: ಡಾ. ಎಂ. ಎನ್. ರಾಜೇಂದ್ರಕುಮಾರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಕಂಬದಕೋಣೆ ಶಾಖೆ ಲೋಕಾರ್ಪಣೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಸಹಕಾರ ಸಂಸ್ಥೆಗಳನ್ನು ಹುಟ್ಟುಹಾಕಿ ಮುನ್ನಡೆಸುವುದು ಅಧಿಕಾರದ ಆಸೆಯಿಂದ ಅಲ್ಲ. ಅವುಗಳ ಮೂಲಕ ಜನರ ಸೇವೆ ಮಾಡಲು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ ಹೇಳಿದರು.

    ಖಂಬದಕೋಣೆ ಉಡುಪ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸಲಿರುವ ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋಪರೇಟಿವ್‌ನ ಐದನೆ ಶಾಖೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಸೌಹಾರ್ದ ಪದ ಸರ್ವರನ್ನು ಒಳಗೊಂಡು ಮುಂದಡಿ ಇಡಬೇಕು ಎಂಬ ಅರ್ಥ ನೀಡುತ್ತದೆ. ಹತ್ತು ವರ್ಷಗಳ ಹಿಂದೆ ಸಹಕಾರಿ ರಂಗದ ಅನುಭವಿ ಎಸ್. ರಾಜು ಪೂಜಾರಿ ಅವರಿಂದ ಆರಂಭವಾದ ಶ್ರೀರಾಮ ಸೌಹಾರ್ದ ಕೋಪರೇಟಿವ್ ಆ ಮಾರ್ಗದಲ್ಲಿ ಮುನ್ನಡೆಯುತ್ತಿದೆ. ಆರಂಭದ ವರ್ಷದಿಂದಲೇ ಲಾಭ ಗಳಿಸಲಾರಂಭಿಸಿದ ಸಂಸ್ಥೆ ಈಗ ಐದು ಶಾಖೆಗಳೊಂದಿಗೆ ದಶಮಾನೋತ್ಸವ ಆಚರಿಸುವ ಹೊಸ್ತಿಲಲ್ಲಿ ನಿಂತಿದೆ. ಶೀಘ್ರ ರಾಜ್ಯದ ಸರ್ವಶ್ರೇಷ್ಠ ಸಂಸ್ಥೆಯಾಗಿ ಬೆಳೆಯಲಿ ಎಂದು ಅವರು ಹಾರೈಸಿದರು.

    ಭದ್ರತಾ ಕೊಠಡಿ ಉದ್ಘಾಟಿಸಿದ ಮಾಜಿ ಶಾಸಕ, ಬೈಂದೂರು ಸಾಗರ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಮುಖ್ಯ ಅತಿಥಿಗಳಾಗಿದ್ದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ ಕೆ. ಎಸ್, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಶುಭ ಹಾರೈಸಿದರು.

    ಸಂಸ್ಥೆಯ ಅಧ್ಯಕ್ಷ ಎಸ್. ರಾಜಯ ಪೂಜಾರಿ ಸ್ವಾಗತಿಸಿ ಸಂಸ್ಥೆ ನಡೆದುಬಂದ ದಾರಿಯ ಮೇಲೆ ಬೆಳಕು ಚೆಲ್ಲಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಸೀತಾರಾಮ ಮಡಿವಾಳ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು. ಉಪಾಧ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕರು, ಸದಸ್ಯರು, ಶಾಖಾ ವ್ಯವಸ್ಥಾಪಕ ರಾಜೇಂದ್ರ ಎಚ್, ಸಿಬ್ಬಂದಿ, ಹಿರಿಯ ಸಹಕಾರಿಗಳು, ಜನಪ್ರತಿನಿಧಿಗಳು ಇದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.