Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿಜಿಟಲ್ ಅಪರಾಧಗಳ ಬಗ್ಗೆ ಅರಿವು ಅಗತ್ಯ: ನ್ಯಾ. ಫಣೀಂದ್ರ
    ಉಡುಪಿ ಜಿಲ್ಲೆ

    ಡಿಜಿಟಲ್ ಅಪರಾಧಗಳ ಬಗ್ಗೆ ಅರಿವು ಅಗತ್ಯ: ನ್ಯಾ. ಫಣೀಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ಡಿಜಿಟಲ್ ಅಪರಾಧಗಳು ಮತ್ತು ಅವುಗಳ ತನಿಖಾ ವಿಧಾನ ಮತ್ತು ಸಾಕ್ಷ್ಯ ಸಂಗ್ರಹದ ಬಗ್ಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಅರಿವು ಹೊಂದಿರಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಗವರ್ನರ್ ನ್ಯಾ. ಕೆ.ಎನ್. ಫಣೀಂದ್ರ ಹೇಳಿದ್ದಾರೆ.

    Click Here

    Call us

    Click Here

    ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ನ್ಯಾಯಂಗ ಅಕಾಡೆಮಿ ಬೆಂಗಳೂರು, ಉಡುಪಿ ಜಿಲ್ಲಾ ನ್ಯಾಯಾಲಯ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ , ಜಿಲ್ಲೆಯ ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು , ವಕೀಲರು ಮತ್ತು ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳಿಗೆ ನಡೆದ ಎಲೆಕ್ಟ್ರಾನಿಕ್ಸ್ ಪುರಾವೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ದೇಶದಲ್ಲಿ ೨೦೦೦ ಇಸವಿಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಜಾರಿಗೆ ಬಂದಿದ್ದರೂ ಸಹ ಇದುವರೆಗೆ ಈ ಕುರಿತು ಸೂಕ್ತ ಅರಿವು ಇಲ್ಲದಿರುವುದರಿಂದ , ತಂತ್ರಜ್ಞಾನದ ಮೂಲಕ ನಡೆಯುತ್ತಿರುವ ಅಪರಾಧಗಳನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಾಧ್ಯವಾಗುತ್ತಿಲ್ಲ , ಡಿಜಿಟಲ್ ಮೂಲಕ ನಡೆಯುವ ವಿವಿಧ ರೀತಿಯ ಅಪರಾಧಗಳ ಬಗ್ಗೆ ಸಂಪೂರ್ಣ ಮಾಹಿತಿ, ಸಾಕ್ಷ್ಯಗಳ ಸಂಗ್ರಹ, ಅವುಗಳನ್ನು ನ್ಯಾಯಾಲಯದಲ್ಲಿ ಪ್ರಸ್ತುತ ಪಡಿಸುವ ವಿಧಾನ , ಅವುಗಳ ಸಂರಕ್ಷಣೆ ಕುರಿತಂತೆ ಪೊಲೀಸ್ ಹಾಗೂ ನ್ಯಾಯಾಂಗ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಅರಿವು ನೀಡುವ ಉದ್ದೇಶದಿಂದ ರಾಜ್ಯಾದ್ಯಾಂತ ಕಾರ್ಯಗಾರವನ್ನು ಏರ್ಪಡಿಸಲಾಗುತ್ತಿದೆ ಎಂದು ನ್ಯಾ. ಫಣೀಂದ್ರ ತಿಳಿಸಿದರು.

    ಪ್ರಸ್ತುತ ಇಂಟರ್ನೆಟ್ ಮೂಲಕ ಯಾವುದೇ ಸುಳಿವು ನೀಡದ ರೀತಿಯಲ್ಲಿ ಡಿಜಿಟಲ್ ಅಪರಾಧಗಳು ನಡೆಯುತ್ತಿದ್ದು, ಈ ಅಪರಾಧಗಳನ್ನು ಭೇಧಿಸುವ ನೈಪುಣ್ಯತೆ ಹಾಗೂ ತನಿಖೆಯ ವಿಧಾನ, ಸಾಕ್ಷ್ಯಗಳ ಸಂಗ್ರಹ ಮತ್ತು ಜವಾಬ್ದಾರಿ ಹಾಗೂ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಈ ಕಾರ್ಯಗಾರಗಳ ಮೂಲಕ ತಿಳಿಸಲಾಗುತ್ತಿದೆ, ಇಂತಹ ಅಪರಾಧಗಳ ಕುರಿತು ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಇತರೆ ನ್ಯಾಯಾಲಯಗಳು ತೀರ್ಪು ನೀಡಿದ್ದು, ಡಿಜಿಟಲ್ ಅಪರಾಧ ತಡೆಯುವಲ್ಲಿ ನ್ಯಾಯಾಂಗ ಮತ್ತು ಪೊಲೀಸ್ ಇಲಾಖೆಗಳ ನಡುವೆ ಯಾವುದೇ ಸಮನ್ವಯದ ಕೊರತೆ ಇರಬಾರದು, ಪರಸ್ಪರ ಸಹಕಾರದೊಂದಿಗೆ ಇಂತಹ ಅಪರಾಧ ತಡೆಯಬೇಕು ಎಂದು ನ್ಯಾ.ಫಣೀಂದ್ರ ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಉಡುಪಿ ನ್ಯಾಯಾಲಯದ ಆಡಳಿತ ನ್ಯಾಯಾಧೀಶ ನ್ಯಾ. ಬಿ.ಎ.ಪಾಟೀಲ್ ಮಾತನಾಡಿ, ಡಿಜಿಟಲ್ ಅಪರಾಧ ಸಂದರ್ಭದಲ್ಲಿ , ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿ, ಸತ್ಯದ ಅನ್ವೇಷಣೆ ನಡೆದು ಸಂಬಂದಪಟ್ಟವರಿಗೆ ಶಿಕ್ಷೆ ಆಗಬೇಕು, ಡಿಜಿಟಲ್ ಪುರಾವೆಗಳ ಸಂಗ್ರಹ ಮತ್ತು ರಕ್ಷಣೆ ಕುರಿತು ಅರಿವು ಅಗತ್ಯ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಗದೀಶ್, ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಹಿರಿಯ ಸದಸ್ಯ ಭೃಂಗೇಶ್, ಸೈಬರ್ ಸೆಕ್ಯುರಿಟಿ ಟ್ರೈನರ್ ಡಾ. ಅನಂತ ಪ್ರಭು, ಬೆಂಗಳೂರು ಸೈಬರ್ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್ ಯಶವಂತ ಕುಮಾರ್, ಉಡುಪಿ ವಕೀಲರ ಸಂಘಧ ಅಧ್ಯಕ್ಷ ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.

    ಉಡುಪಿ ಜಿಲ್ಲಾ ನ್ಯಾಯಾಧೀಶ ಸಿ.ಎಮ್ ಜೋಷಿ ಸ್ವಾಗತಿಸಿದರು. ಎಸ್ಪಿ ನಿಶಾ ಜೇಮ್ಸ್ ವಂದಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    eight − one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.