Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿ.ಜಿ. ಮೋಹನದಾಸ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
    ಊರ್ಮನೆ ಸಮಾಚಾರ

    ಬಿ.ಜಿ. ಮೋಹನದಾಸ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    Updated:28/10/20191 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ವಿದೇಶದಲ್ಲಿ ನೆಲೆಸಿ ಕನ್ನಡ ಹಾಗೂ ಕನ್ನಡಿಗರ ಪರವಾಗಿ ಹತ್ತು ಹಲವು ಸಂಘಟನೆಗಳ ಮೂಲಕ ನಿರಂತರವಾಗಿ ಶ್ರಮಿಸಿದ ಬಿ. ಜಿ. ಮೋಹನದಾಸ್ ಅವರಿಗೆ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

    Click Here

    Call us

    Click Here

    ಸ್ನೇಹಿತರ ವಲಯದದಲ್ಲಿ ಬೀಜಿ ಎಂದೇ ಪರಿಚಿತರಾಗಿರುವ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಜನರ ಸೇವೆಯೇ ಜನಾರ್ಧನ ಸೇವೆ ಎಂಬ ತತ್ವವನ್ನು ಬಲವಾಗಿ ನಂಬಿದವರು. ಎಂಭತ್ತರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ವಲಸೆ ಹೋದ ಬೀಜಿಯವರು, ಫಾರ್ಮಸಿಯ ವಿವಿಧ ಸಂಸ್ಥೆಗಳಲ್ಲಿ ಅವಿರತವಾಗಿ ದುಡಿದಿದ್ದು ತಮ್ಮ ಬಿಡುವಿನ ವೇಲೆಯಲ್ಲಿ ಅಧಿಕ ಸಮಯವನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದಾರೆ.

    ಮಣಿಪಾಲದಿಂದ ಫಾರ್ಮಸಿ ವಿಭಾಗದಲ್ಲಿ ಸ್ನಾತಕೋತರ ಪದವಿ ಪಡೆದಿರುವ ಬೀಜಿಯವರು ಗಲ್ಫ್ನಾಡಿಗೆ ವಲಸೆ ಬರುವ ಮುನ್ನ ಮಣಿಪಾಲದಲ್ಲಿ ಫಾರ್ಮಸಿ ವಿಭಾಗದ ಸಹಾಯಕ ಪ್ರೊಪೆಸರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

    1985ರಲ್ಲಿ ದುಬೈ ಕರ್ನಾಟಕ ಸಂಘದ ಸಂಸ್ಥಾಪಕರ ಬಳಗ ಸೇರಿ ಮುಂದೆ 1988 ರಲ್ಲಿ ಸಂಘದ ಸಂವಿಧಾನ ರೂಪಿಸಿದ ರೂವಾರಿಗಳಲ್ಲೊಬ್ಬರಾದರು. 1989 ರಲ್ಲಿ ದುಬೈ ಕರ್ನಾಟಕ ಸಂಘದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಸಾಂವಿಧಾನಿಕವಾಗಿ ಚುನಾಯಿತರಾದ ಅಧ್ಯಕ್ಷರಾದರು. ಇವರ ಅಧ್ಯಕ್ಷತೆಯಲ್ಲಿ ಹಲವು ಪ್ರತಿಭೆಗಳು ಅರಳಲು ಅವಕಾಶ ದೊರಕಿತು. ಇವರ ಸ್ಪೂರ್ತಿದಾಯಕ ಮಾರ್ಗದರ್ಶನದಿಂದಾಗಿ ಮನೋರಂಜನೆ ಹಾಗೂ ಆಟೋಟ ಚಟುವಟಿಕೆಗಳ ಬುಗ್ಗೆಯೇ ಹರಿಯಿತು. 1992-94 ರವರೆಗೆ ಕಾರ್ಯದರ್ಶಿಯಾಗಿಯೂ 1996-98ರ ವರೆಗೆ ಉಪಾಧ್ಯಕ್ಷರಾಗಿ ದುಬೈ ಕರ್ನಾಟಕ ಸಂಘದಲ್ಲಿ ಸೇವೆ ಸಲ್ಲಿಸಿರುವ ಯು.ಎ. ಇ ಇಂಡಿಯನ್ ಫಾರ್ಮಾಸ್ಯೂಟಿಕಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

    ಗಲ್ಪ್ ರಾಷ್ಟ್ರಗಳಲ್ಲಾಗುವ ಕನ್ನಡ ಚಟುವಟಿಕೆಗಳನ್ನು ಪ್ರತಿಬಿಂಬಿಸಿ ಕರ್ನಾಟಕ ಮತ್ತು ಕೊಲ್ಲಿ ರಾಷ್ಟ್ರಗಳ ನಡುವಣ ಸೇತುವೆಯಾದ ಉದಯವಾಣಿ ದಿನಪತ್ರಿಕೆಯ ‘ಗಲ್ಪ್ ವಾರ್ತಾ ಸಂಚಯ’ಅಂಕಣ ವನ್ನು ಪ್ರಾರಂಭಿಸುವಲ್ಲಿ ಪ್ರೇರಣೆಯಾದರು. ಗಲ್ಪ್ ಕನ್ನಡಿಗರ ಅಭಿಮಾನಕ್ಕೆ ಸಾಂಸ್ಕೃತಿಕ ಶ್ರ್ರೀಮಂತಿಕೆಗೆ ಕನ್ನಡಿಯಾದ ಈ ಅಂಕಣವು ಬೀಜಿಯವರು ಕನ್ನಡ ಬಾಂಧವರಿಗಿತ್ತ ಒಂದು ಅತ್ಯಮೂಲ್ಯ ಕೊಡುಗೆ.

    Click here

    Click here

    Click here

    Click Here

    Call us

    Call us

    ಬೀಜಿಯವರ ಸಾರ್ಥಕ ಸೇವೆಯನ್ನು ಪರಿಗಣಿಸಿ ಶಾರ್ಜಾ ಕರ್ನಾಟಕ ಸಂಘ 2007 ರ ಪ್ರತಿಷ್ಟಿತ- ’ಮಯೂರ ಪ್ರಶಸ್ತಿ’ ಯನ್ನು ನೀಡಿ ಸನ್ಮಾನಿಸಿದೆ.

    ತಮ್ಮ ಜೀವನದ್ದುದ್ದಕ್ಕೂ ಪ್ರಶಸ್ತಿಗಳನ್ನು ಪಡೆಯುತ್ತಾ ಬಂದಿರುವ ಬೀಜಿಯವರನ್ನು 2002 ರಲ್ಲಿ ಮಣಿಪಾಲ ವಿಶ್ವವಿದ್ಯಾಲಯವು ತನ್ನ ಅತ್ಯುನ್ನತ ಪ್ರಶಸ್ತಿಯಾದ ‘ಅತ್ಯುತ್ತಮ ಪೂರ್ವ ವಿದ್ಯಾರ್ಥಿ’ ಪ್ರಶಸ್ತಿಯೊಂದಿಗೆ ಸನ್ಮಾನಿಸಿದೆ. ಹಾಗೆಯೇ ನ.14 2008 ರಂದು ಬಹರೈನ್ ಕನ್ನಡ ಸಂಘದ ಅದ್ದೂರಿಯ ಕಾರ್ಯಕ್ರಮ “ಕನ್ನಡ ವೈಭವ” ದಲ್ಲಿ ಮುಖ್ಯ ಅತಿಥಿ ಕರ್ನಾಟಕ ಮುಖ್ಯ ಮಂತ್ರಿ ಬಿ.ಎಸ್. ಯಡಿಯುರಪ್ಪನವರಿಂದ ಕನ್ನಡ ಸೇವೆಗಾಗಿ ನಮ್ಮ ’ಬೀಜಿ’ಯವರು ಸನ್ಮಾನಿತರಾದರು. ಅಂತೆಯೇ ಯು.ಎ.ಯಿಯ ಪ್ರತಿಷ್ಟ ಕನ್ನಡ ಸಂಸ್ಥೆ ಅಬುದಾಭಿ ಕರ್ನಾಟಕ ಸಂಘ ಆಯೋಜಿಸಿದ ರಾಜ್ಯೋತ್ಸವ 2009 ರಲ್ಲಿಯೂ ಸನ್ಮಾನಿತರಾದರು. ’ಧ್ವನಿ ಪತಿಷ್ಠಾನ ತನ್ನ ಬೆಳ್ಳಿಹಬ್ಬದ ಪ್ರಯುಕ್ತ ವಿಜ್ರಂಭ್ರಂಣೆಯಿಂದ ಆಯೋಜಿಸಿದ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ತಮ್ಮ ಹೊಸ ಹವ್ಯಾಸ ’ ಕನ್ನಡ ಪತ್ರಿಕೋದ್ಯಮ’ ಸಾಧನೆಯನ್ನು ಗುರುತಿಸಿ ಸನ್ಮಾನಿತರಾದರು. ಹಾಗೆಯೇ ಯು.ಎ.ಯಿಯ ಪ್ರತಿಷ್ಟ ಕನ್ನಡ ಸಂಸ್ಥೆ ಅಬುದಾಭಿ ಕರ್ನಾಟಕ ಸಂಘ ಆಯೋಜಿಸಿದ ಪ್ರಥಮ ’ ದ. ರಾ. ಬೇಂದ್ರೆ ಪ್ರಶಸ್ತಿ ’ ಯ ಪ್ರಥಮ ವಿಜೇತರಾಗಿ ಸನ್ಮಾನಿತರಾದರು.

    ದೇವಾಡಿಗ ಸಮುದಾಯಕ್ಕೂ ಹತ್ತು ಹಲವು ರೀತಿಯಲ್ಲಿ ಸಹಾಯ ನೀಡಿರುವ ಬೀಜಿಯವರು ದೇವಾಡಿಗ ಸಂಘ ಯು.ಎ.ಇ ಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಅಂತರ್ಜಾಲ ತಾಣ ದೇವಾಡಿಗ.ಕಾಂ ಕಾರ್ಯನಿರ್ವಾಹಣೆಯಲ್ಲೂ ತಮ್ಮ ಶ್ರಮದಾನ ನೀಡುತ್ತಿದ್ದಾರೆ. ಇನ್ನೊಂದು ತಾಣವಾದ ಕೊಲ್ಲೂರು.ಕಾಮ್ ನಿರ್ಮಾಣದಲ್ಲೂ ತಮ್ಮ ಯೋಗದಾನ ನೀಡಿದ್ದಾರೆ.

    ಅವರನ್ನು ಮುಂಬೈ ದೇವಾಡಿಗ ಸಂಘ ’ ದೇವಾಡಿಗ ಭೂಷಣ’ ಎಂದು ಸನ್ಮಾನ ಮಾಡಿದೆ. ಕಾಂತಾವರ ಕನ್ನಡ ಸಂಘ ಅವರ ಸಾಧನೆಗಳನ್ನು ’ ಗಲ್ಫ್ ಕನ್ನಡಿಗ – ಬಿ.ಜಿ.ಮೋಹನ್ ದಾಸ್ ’–ಎಂಬ ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಿದ್ದಾರೆ.

    ಊರಿಗೆ ವಾಪಾಸ್ ಬಂದು (2014) ಮಣಿಪಾಲದಲ್ಲಿ ನೆಲಸಿರುವ ಬೀಜಿ ಯವರು ಮಣಿಪಾಲ ಲಯನ್ಸ್ ಸೇರಿ ಅದರ ಅದ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

    ಆಂಗ್ಲ ಭಾಷೆಯ ಮೇಲೆ ಅಪ್ರತಿಮ ಹಿಡಿತವಿರುವ ಬೀಜಿಯವರು ಉತ್ತಮ ಅಂಕಣಕಾರರೂ ಆಗಿದ್ದಾರೆ. ಬೀಡುವಿನ ವೇಳೆಯಲ್ಲಿ ಹಲವು ಅಂತರ್ಜಾಲ ತಾಣಗಳನ್ನು ಜಾಲಾಡುವುದು ಮಾತ್ರವಲ್ಲದೇ ಕೆಲವು ತಾಣಗಳನ್ನು ಹೊರಡಿಸುತ್ತಲೂ ಇದ್ದಾರೆ.

    ಪತ್ನಿ ಯಶೋದಾ, ಪುತ್ರ ಅಖಿಲ್ ಹಾಗೂ ಪುತ್ರಿ ಯಶಸ್ವಿ ಯವರನ್ನೊಡಗೂಡಿದ ಚಿಕ್ಕದಾದ ಸುಖೀ ಸಂಸಾರ ಅವರದ್ದು.

    ► ಚಿನ್ನದ ಹುಡುಗ ವಿಶ್ವನಾಥ್‌ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ – https://kundapraa.com/?p=33500 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    1 Comment

    1. Dinesh Chandrashekar Devadiga on 28/10/2019 11:06 pm

      Congratulations BG sir

      Reply
    Leave A Reply Cancel Reply

    nine − 4 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.