Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳು ಚಿಂತನೆಯಿಲ್ಲದ, ಅಂಕ ಗಳಿಕೆಯ ಮೆಷಿನ್‌ಗಳಾಗುತ್ತಿದ್ದಾರೆ ವಿಜಯಲಕ್ಷ್ಮೀ ಶಿಬರೂರು
    ಊರ್ಮನೆ ಸಮಾಚಾರ

    ಮಕ್ಕಳು ಚಿಂತನೆಯಿಲ್ಲದ, ಅಂಕ ಗಳಿಕೆಯ ಮೆಷಿನ್‌ಗಳಾಗುತ್ತಿದ್ದಾರೆ ವಿಜಯಲಕ್ಷ್ಮೀ ಶಿಬರೂರು

    Updated:04/01/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಚಿಂತನೆ ಹಾಗೂ ವಿವೇಚನೆ ಇಲ್ಲದೇ ಉಪದೇಶಗಳನ್ನು ಅನುಸರಿಸಿ ನಡೆಯುವ ಮಕ್ಕಳು ಸಮಾಜ ಘಾತುಕ ಶಕ್ತಿಗಳಾಗಿ ಬೆಳೆಯುತ್ತಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳನ್ನು ಅಂಕ ಗಳಿಕೆಯ ಮೆಷಿನ್‌ಗಳನ್ನಾಗಿ ನೋಡುವ ಪ್ರವೃತ್ತಿ ಹೆಚ್ಚುತ್ತಿದ್ದು, ಬದುಕನ್ನು ಎದುರಿಸಲಾಗದ ಹೇಡಿಗಳನ್ನಾಗಿ ರೂಪಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಕಳವಳ ವ್ಯಕ್ತಪಡಿಸಿದರು.

    Click Here

    Call us

    Click Here

    ಅವರು ಶನಿವಾರ ಬೈಂದೂರು ರತ್ತೂಬಾಯಿ ಜನತಾ ಪ್ರೌಢಶಾಲೆಯ ಸುವರ್ಣ ಸಂಭ್ರಮ ಕಾರ್ಯಕ್ರಮದ ಸಮಾರೋಪದಲ್ಲಿ ಪ್ರಧಾನ ಭಾಷಣ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿಯೇ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಮಾಡಿಕೊಡಬೇಕು. ಮೊಬೈಲ್ ಆಪರೇಟ್ ಮಾಡುವ ಮಗುವು ಅದರಲ್ಲಿ ಏನು ನೋಡುತ್ತಿದೆ ಎಂಬುದರ ಅರಿವು, ತಮ್ಮ ಮಗುವಿನ ವಿಕಾಸಕ್ಕೆ ಪೂರಕವಾದ ವಾತಾರವಣ ನಿರ್ಮಿಸುವ ಜವಾಬ್ದಾರಿ ಎರಡೂ ಪೋಷಕರ ಮೇಲಿದೆ. ಮೊಬೈಲ್ ಹಾಗೂ ಟಿ.ವಿ ಧಾರಾವಾಹಿಗಳ ಅಡಿಕ್ಷನ್‌ಗಳಿಂದ ಅಂತರ ಕಾಯ್ದುಕೊಂಡರೆ ಬಹುಪಾಲು ಸುಧಾರಣೆ ಸಾಧ್ಯವಾಗುತ್ತದೆ ಎಂದರು.

    ರತ್ತೂಬಾಯಿ ಜನತಾ ಪ್ರೌಢಶಾಲೆಯ ಇತಿಹಾಸವನ್ನು ಅವಲೋಕಿಸಿದಾಗ ಆರಂಭದಲ್ಲಿ ಮಹಿಳೆ ಸಶಕ್ತೀಕರಣ ಹಾಗೂ ಬದುಕಿನ ಎಲ್ಲಾ ಆಯಾಮದ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ತಿಳಿಯುತ್ತದೆ. ಈ ಬದುಕಿನ ಶಿಕ್ಷಣ ಇಂದು ಅಗತ್ಯವಾದುದು ಎಂದರು.

    ಸುವರ್ಣ ಸಂಭ್ರಮ ಸ್ಮರಣ ಸಂಚಿಕೆ ಅನಾವರಣಗೊಳಿಸಿದ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಮಾತನಾಡಿ ಇಂಗ್ಲಿಷ್ ಮಾಧ್ಯಮದ ಪ್ರಭಾವದಿಂದಾಗಿ ಕನ್ನಡ ಮಾಧ್ಯಮ ಹಾಗೂ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಗ್ರಾಮದ ಶಾಲೆಗಳನ್ನು ಮುಚ್ಚುವ ಆಂತಕ ಎದುರಾಗಿದೆ. ಸರಕಾರಗಳು ಪೋಷಕರ ಭಾವನೆಗೆ ತಕ್ಕಂತೆ ಸ್ಪಂದಿಸದೇ ಇದ್ದುದೇ ಇಂತಹ ಸ್ಥಿತಿಗೆ ಪ್ರಮುಖ ಕಾರಣ. ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.

    Click here

    Click here

    Click here

    Click Here

    Call us

    Call us

    ಶಾಲೆಗೆ ದೇಣಿಗೆ ನೀಡಿದ ದಾನಿಗಳನ್ನು ಹಾಗೂ ಶಾಲಾ ಅಧ್ಯಾಪಕ, ಅಧ್ಯಾಪಕೇತರ ವೃಂದದವರನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ಶ್ರೀ ವಿ.ವಿ.ವಿ ಮಂಡಳಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ ಬಟವಾಡಿ, ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಉದ್ಯಮಿ ಕೊತ್ವಾಲ್ ಪದ್ಮನಾಭ ಶೇರೆಗಾರ್, ಮಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಹೆಮ್ಮಾಡಿ ಜನತಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ. ಮೋಹನದಾಸ್ ಶೆಟ್ಟಿ, ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಅಬ್ದುಲ್ ರವೂಫ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ನಾಗರತ್ನ, ಕಾರ್ಯದರ್ಶಿ ಶಶಿಕಲಾ ಮೊದಲಾದವರು ಉಪಸ್ಥಿತರಿದ್ದರು.

    ಸುವರ್ಣ ಸಂಭ್ರಮ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ಶಿಕ್ಷಕ ಆನಂದ ಮದ್ದೋಡಿ ವಂದಿಸಿದರು. ಶಿಕ್ಷಕ ಚಂದ್ರ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    two × 5 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.