Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ & ಬೈಂದೂರು: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಮುಷ್ಕರ
    ಊರ್ಮನೆ ಸಮಾಚಾರ

    ಕುಂದಾಪುರ & ಬೈಂದೂರು: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಮುಷ್ಕರ

    Updated:09/01/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ’ ಸುದ್ದಿ
    ಬೈಂದೂರು: ಸರ್ಕಾರಗಳ ತಪ್ಪು ನೀತಿಗಳ ಫಲವಾಗಿ ದೇಶದಲ್ಲಿ ಆರ್ಥಿಕ ಹಿಂಜರಿತ ಉಂಟಾಗಿದೆ. ಇನ್ನೊಂದೆಡೆ ಕಾರ್ಮಿಕ ಕಾನೂನುಗಳ ತಿದ್ದುಪಡಿಯ ಮೂಲಕ ದುಡಿವ ಜನರ ಸೌಲಭ್ಯ ಕಸಿಯಲಾಗುತ್ತಿದೆ. ವಿರೋಧಿಸಿ ಒಂದು ದಿನದ ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಮಿಕ ಧುರೀಣ ವೆಂಕಟೇಶ ಕೋಣಿ ಹೇಳಿದರು.

    Click Here

    Call us

    Click Here

    ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆಯಂತೆ ಬೈಂದೂರು ತಾಲ್ಲೂಕು ಸಮಿತಿ ಆಶ್ರಯದಲ್ಲಿ ಬುಧವಾರ ನಡೆದ ಮುಷ್ಕರದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

    ಪ್ರಸಕ್ತ ಕೇಂದ್ರ ಸರ್ಕಾರದ ದುರಾಡಳಿತದ ಫಲವಾಗಿ ಜಿಡಿಪಿ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚುತ್ತಿದೆ. ಜನರ ಆದಾಯ ಇಳಿಮುಖ ವಾಗುತ್ತಿರುವ ಕಾರಣ ಬಡತನ ಹೆಚ್ಚುತ್ತಿದೆ. ಗ್ರಾಮೀಣ ಭಾಗದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಅವರು ದೂರಿದರು.

    ಆರ್ಥಿಕ ಸಂಕಷ್ಟದಿಂದ ತೊಂದರೆ ಗೊಳಗಾಗಿರುವ ಕಾರ್ಮಿಕರ ಹಿತಕಾಯಬೇಕಾದ ಸರ್ಕಾರ ಬಂಡವಾಳದಾರರ ರಕ್ಷಣೆಗೆ ನಿಂತಿದೆ. ಅದು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರದ ನೀತಿಯನ್ನು ವಿರೋಧಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಎಲ್ಲ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ 18 ಬಾರಿ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗಿದೆ. ಇದು ಅಂತಹ 19 ನೆಯ ಮುಷ್ಕರ. ಇನ್ನಾದರೂ ಸರ್ಕಾರ ಎಚ್ಚತ್ತುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

    ಶ್ರೀಧರ ಉಪ್ಪುಂದ ವಂದಿಸಿದರು. ಇಲ್ಲಿನ ಸಿಐಟಿಯು ಕಚೇರಿಯಿಂದ ಯಡ್ತರೆ, ಪೇಟೆ ಮಾರ್ಗವಾಗಿ ರ್‍ಯಾಲಿ ನಡೆಸಿ, ಬೈಂದೂರು ಹೆದ್ದಾರಿ ಅಂಡರ್‌ಪಾಸ್ ಬಳಿ ಸೇರಿದರು.

    Click here

    Click here

    Click here

    Click Here

    Call us

    Call us

    ಉದಯ ಗಾಣಿಗ ಮೊಗೇರಿ, ಮಂಜು ಪಡುವರಿ, ರೋನಿ ಪಡುವರಿ, ನಾಗರತ್ನಾ ಪಡುವರಿ, ಜ್ಯೋತಿ ಉಪ್ಪುಂದ, ಸುಮತಿ ಬೈಂದೂರು, ರಾಮ ಖಂಬದಕೋಣೆ, ಜಯಶ್ರೀ ಉಪ್ಪುಂದ ಮುಷ್ಕರದ ನೇತೃತ್ವ ವಹಿಸಿದ್ದರು. ಸಿಪಿಐ ಸುರೇಶ ನಾಯಕ್ ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.

    ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್‌ ಬಳಿಯಲ್ಲಿ ಬುಧವಾರ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಡೆಸಿದ ಅಖಿಲ ಭಾರತ ಮುಷ್ಕರದ ಅಂಗವಾಗಿ ನಡೆದ ಬಹಿರಂಗ ಪ್ರತಿಭಟನಾ ಸಭೆ ನಡೆಯಿತು.

    ಈ ಸಂದರ್ಭ ಸಿಐಟಿಯು ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್‌ ಕಲ್ಲಾಗಾರ್‌ ಮಾತನಾಡಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ನೇತೃತ್ವದ ಸರ್ಕಾರ ಕೆಲ ಬಂಡವಾಳಶಾಹಿಗಳ ಪರ ಇರುವ ಸರ್ಕಾರ. ಕಾರ್ಮಿಕರಿಗೆ ₹ 4,628 ಕನಿಷ್ಠ ಕೂಲಿ ನಿಗದಿ ಮಾಡುವ ಮೂಲಕ ಕಾರ್ಮಿಕ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದೆ ಎಂದು ಆರೋಪಿಸಿದರು.

    19 ವರ್ಷಗಳಿಂದ ಕಾರ್ಮಿಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಾರ್ಮಿಕ ಸಂಘಟನೆಗಳು ಹೋರಾಟವನ್ನು ನಡೆಸುತ್ತಾ ಬಂದಿದ್ದರೂ, ಸಮಸ್ಯೆಗಳು ಸಂಪೂರ್ಣವಾಗಿ ಬಗೆಹರಿದಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಅವರು ಕಾರ್ಮಿಕರ ಬಗ್ಗೆ ಹಗುರವಾಗಿ ಮಾತನಾಡುವುದು ಖಂಡನೀಯ. ಅವರಿಗೆ ಕಾರ್ಮಿಕರ ವಿರುದ್ಧ ಅಸಹನೆ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದು ಅವರು ಆಕ್ರೋಶ ಹೊರ ಹಾಕಿದರು.

    4 ವರ್ಷಗಳಿಂದ ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ನೀಡದೆ ಕಾರ್ಮಿಕರ ಹಾಗೂ ಅವರ ಕುಟುಂಬದ ಹೊಟ್ಟೆ ಮೇಲೆ ಹೊಡೆದಿರುವುದನ್ನು ಕಾರ್ಮಿಕರು ಕ್ಷಮಿಸುವುದಿಲ್ಲ. ರಾಜ್ಯ ಹಾಗೂ ಕೇಂದ್ರದಲ್ಲಿ ನಿಮ್ಮದೆ ಸರ್ಕಾರವಿದ್ದರೂ ಶಾಸ್ತ್ರಿ ಸರ್ಕಲ್‌ನ ಫ್ಲೈ ಓವರ್‌ ಕಾಮಗಾರಿ ಮುಗಿಸದೆ ಇರುವುದು ಅವರ ಅಸಮರ್ಥತೆಗೆ ಸ್ವಷ್ಟ ನಿದರ್ಶನ. ಕಾರ್ಮಿಕ ಸುಧಾರಣೆ ಹೆಸರಿನಲ್ಲಿ ಜಾರಿಗೆ ತಂದಿರುವ ಎಲ್ಲ ಕಾನೂನುಗಳು, ಜನ ಮರಳು ಮಾಡುವ ಭದ್ರತೆ ಒದಗಿಸದ ಬೋಗಸ್‌ ಕಾನೂನುಗಳು ಎಂದು ದೂರಿದರು.

    ಸಭೆಯಲ್ಲಿ ಮಾತನಾಡಿದ ಇಂಟಕ್‌ ಸಂಘಟನೆಯ ಮುಖಂಡ ಲಕ್ಷಣ ಶೆಟ್ಟಿ, ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ವರ್ಗದ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟವನ್ನು ಜೆಸಿಟಿಯು ಸಂಘಟನೆ ಅಡಿಯಲ್ಲಿ ಐಕ್ಯತೆಯಿಂದ ಮುನ್ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.

    ಸಿಐಟಿಯು ತಾಲ್ಲೂಕು ಸಂಘಟನೆ ಮುಖಂಡ ಎಚ್‌.ನರಸಿಂಹ ಅವರು, ದೇಶದ ಸಾರ್ವಜನಿಕ ಸಂಸ್ಥೆಗಳಾದ ರೈಲು, ಬ್ಯಾಂಕ್‌, ವಿಮಾ ಸಂಸ್ಥೆಗಳನ್ನು ಖಾಸಗಿ ಬಂಡವಾಳಶಾಹಿ ಕಂಪನಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

    ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸದೆ ಗುಲಾಮರಂತೆ ದುಡಿಸಿಕೊಳ್ಳಲಾಗುತ್ತಿದೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ದೊರಕುತ್ತಿಲ್ಲ. ಕೇಂದ್ರದ ನೀತಿಗಳಿಂದಾಗಿ ಉದ್ಯೋಗಗಳು ನಷ್ಟವಾಗುತ್ತಿದೆ. ದೇಶದ ಜ್ವಲಂತ ಸಮಸ್ಯೆಗಳ ಕುರಿತು ಮಾತನಾಡದ ಪ್ರಧಾನಿ ನರೇಂದ್ರ ಮೋದಿ, ಜನರ ದಾರಿ ತಪ್ಪಿಸಿ ರಾಜಕೀಯ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

    ವಿವಿಧ ಕಾರ್ಮಿಕ ಸಂಘಟನೆ ಮುಖಂಡರಾದ ಮಾಣಿ ಉದಯ್‌, ರಾಜು ದೇವಾಡಿಗ, ಮಹಾಬಲ ವಡೇರಹೋಬಳಿ, ರವಿ ವಿ ಎಂ ಇದ್ದರು.

    ಬುಧವಾರ ನಡೆದ ಅಖಿಲ ಭಾರತ ಮುಷ್ಕರದ ಅಂಗವಾಗಿ ಗಂಗೊಳ್ಳಿ, ತಲ್ಲೂರು, ಅಮಾಸೆಬೈಲು, ವಂಡ್ಸೆ, ಕಂಡ್ಲೂರು, ಅಂಪಾರು, ಹಾಲಾಡಿ, ಬಿದ್ಕಲ್‌ಕಟ್ಟೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಮೆರವಣಿಗೆ ನಡೆಸಿದ ಕಾರ್ಮಿಕರು ಕೇಂದ್ರದ ನೀತಿಗಳ ವಿರುದ್ದ ಘೋಷಣೆಗಳನ್ನು ಕೂಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    fourteen − five =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.