Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡುಬಿದಿರೆ: ಆಳ್ವಾಸ್‌ನಲ್ಲಿ ಗಣರಾಜ್ಯೋತ್ಸವದ ಸಂಭ್ರಮ
    alvas nudisiri

    ಮೂಡುಬಿದಿರೆ: ಆಳ್ವಾಸ್‌ನಲ್ಲಿ ಗಣರಾಜ್ಯೋತ್ಸವದ ಸಂಭ್ರಮ

    Updated:26/01/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ, ಜ.26: ದೇಶದಲ್ಲಿ ನೂರ ಮೂವತ್ತು ಕೋಟಿ ಜನಸಂಖ್ಯೆ ಇದ್ದರೂ ಅಬ್ದುಲ್ ಕಲಾಂ ಕಂಡ 2020ಯ ಕನಸನ್ನು ಪೂರ್ಣವಾಗಿ ಸಾಕಾರಗೊಳಿಸಲು ವಿಫಲರಾಗಿದ್ದೇವೆ. ಸಾಧಿಸಬೇಕಾದ ವಿಷಯಗಳು ಇನ್ನು ತುಂಬಾ ಇವೆ. ಭಾರತದಲ್ಲಿ ಪ್ರತಿದಿನವು ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿವೆ. ದೇಶದಲ್ಲಿ 40ಕೋಟಿ ಜನರು ತಿನ್ನಲು ಅನ್ನ ಸಿಗದೆ ನರಳುತ್ತಿದ್ದಾರೆ. ನಮ್ಮ ರಕ್ಷಣೆಯಿಂದ ಹಿಡಿದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವವರೆಗೆ ಪ್ರತೀ ವ್ಯವಸ್ಥೆಯನ್ನು ದೇಶ ಮಾಡಿಕೊಟ್ಟಿದೆ ಹೀಗಿರುವಾಗ ದೇಶ ಚೆನ್ನಾಗಿರಲು ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ಚಿಂತಿಸುವ ಅನಿವಾರ್ಯತೆ ಇದೆ ಎಂದು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ಹೇಳಿದರು.

    Click Here

    Call us

    Click Here

    ಪುತ್ತಿಗೆಯ ವನಜಾಕ್ಷಿ ಕೆ ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ’ಗಣರಾಜ್ಯೋತ್ಸವ ಆಚರಿಸುವುದು ನಮ್ಮ ಕರ್ತವ್ಯಗಳನ್ನು ತಿಳಿಯಲು. ದೊಡ್ಡ ಮಟ್ಟಿನ ದೇಶ ಸೇವೆ ಸಾಧ್ಯವಾಗದಿದ್ದರೂ ನಮ್ಮ ಊರಿನಲ್ಲಿ ಪರಿಸರಕ್ಕಾಗಿ ಅಥವಾ ಜನರಿಗಾಗಿ ಮಾಡುವ ಸೇವೆಗಳು ದೇಶಕ್ಕಾಗಿ ಮಾಡುವ ಕರ್ತವ್ಯಗಳು. ನಮ್ಮ ಜೀವನದಲ್ಲಿ ದೇಶ ಮೊದಲ ಪ್ರಾಧಾನ್ಯತೆಯಾಗಬೇಕು’ ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿಸಿಲ್ಲ. ಶಿಕ್ಷಣದ ಜೊತೆಗೆ ಉತ್ತಮ ನಡತೆ, ಮೌಲ್ಯ ಹಾಗೂ ದೇಶ ಕಟ್ಟುವ ಕಾರ್ಯವನ್ನೂ ಮಾಡುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿ?ನವನ್ನು ಶ್ಲಾಘಿಸಿದರು.

    ಅತಿಥಿಗಳನ್ನು ಕೆಡೆಟ್ ಕ್ಯಾಪ್ಟನ್ ಚಂದನ ಎಸ್, ಪಿಟಿ ಆಫೀಸರ್ ಗಳಾದ ಕೀರ್ತನ ಶೆಟ್ಟಿ, ಶರಣ್ಯ ಎಂ.ಎನ್, ಸೇಜಲ್ ಅವರು ವೇದಿಕೆಗೆ ಕರೆತಂದರು. ಪರೇಡ್ ಕಮಾಂಡರ್ ಸೀನಿಯರ್ ಅಂಡರ್ ಆಫೀಸರ್ ಮುತ್ತಮ್ಮ ವರದಿ ನೀಡಿದರು. ಗಾರ್ಡ್ ಕಮಾಂಡರ್ ಜ್ಯೂನಿಯರ್ ಅಂಡರ್ ಆಫೀಸರ್ ಮನೋಜ್ ನೇತೃತ್ವದಲ್ಲಿ ಆಕ?ಕ ಪಥ ಸಂಚಲನ ನಡೆಯಿತು. ವಂದೇ ಮಾತರಂ ಗೀತೆಯ ಬಳಿಕ ಧ್ವಜಾರೋಹಣ ಮಾಡಲಾಯಿತು. ರಾ?ಗೀತೆ ಹಾಡುವುದರ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್‌ಸಿಸಿ ಗ್ರೂಪ್ ಕಮಾಂಡರ್ ಕರ್ನಲ್ ಎ.P. ಶರ್ಮ ವಹಿಸಿದ್ದರು. ವಿಶೇ? ಆಹ್ವಾನಿತರಾದ ಕರ್ನಲ್ ಮನೋಜ್ ವಿ ಯು, ಗ್ರೂಪ್ ಕ್ಯಾಪ್ಟನ್ ಆರ್ ಶ್ರೀನಿವಾಸನ್, ಕಮಾಂಡರ್ ವಿಫುಲ್ ಗುಪ್ತ, ಆಳ್ವಾಸ್ ಶಿಕ್ಷಣ ಪ್ರತಿ?ನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ, ಟ್ರಸ್ಟಿಗಳಾದ ವಿವೇಕ್ ಆಳ್ವ ಮತ್ತು ಡಾ| ವಿನಯ್ ಆಳ್ವ ಉಪಸ್ಥಿತರಿದ್ದರು.

    ಆಕರ್ಷಕ ಪಥಸಂಚಲನ
    ಪಥ ಸಂಚಲನದಲ್ಲಿ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗಿನ ವಿವಿಧ ಕಾಲೇಜುಗಳ ಭೂಸೇನೆ, ನೌಕಾದಳ ಮತ್ತು ವಾಯುದಳದ 2400 ಎನ್‌ಸಿಸಿ ಕೆಡೆಟ್‌ಗಳು, ಎನ್‌ಸಿಸಿ ಬೆಟಾಲಿಯನ್‌ಗಳ ಕ್ಯಾಪ್ಟನ್‌ಗಳು, ಜತೆಗೆ 400 ರೋವರ್- ರೇಂಜರ್ ಹಾಗೂ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳು, 1300 ಎನ್ ಎಸ್ ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    Click here

    Click here

    Click here

    Call us

    Call us

    ಸಂಭ್ರಮಕ್ಕೆ ಸಾಕ್ಷಿಯಾದ ನಾಗರಿಕರು
    ಆಳ್ವಾಸ್‌ನಲ್ಲಿ ನಡೆದ ಗಣರಾಜ್ಯೋತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇರಿ 25000 ಜನ; ಗಣ್ಯರು, ವಿಶೇಷ ಆಹ್ವಾನಿತರು, ಸಂಸ್ಥೆಯ ಪಾಲಕರು ಹಾಗೂ ಮೂಡುಬಿದಿರೆಯ ಸಾರ್ವಜನಿಕರು ಸೇರಿ 5000 ಹೀಗೆ ಒಟ್ಟು 30000ಜನ ಆಳ್ವಾಸ್ ಗಣರಾಜ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.

    ತ್ರಿವರ್ಣದ ಮೆರುಗು
    ’ಕೋಟಿಕಂಠೊ ಸೆ’ ಏಕತಾ ಹಾಡಿಗೆ ಸಾವಿರ ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿ ಸಮೂಹ ದನಿಗೂಡಿಸಿ, ತ್ರಿವರ್ಣಧ್ವಜವನ್ನು ಹಾಡಿನ ತಾಳಕ್ಕೆ ಲಯಬದ್ಧವಾಗಿ ಬೀಸಿ ಸಂಭ್ರಮಿಸಿದರು. ನೆರೆದವರೆಲ್ಲರ ಕೈಯಲ್ಲಿದ್ದ ರಾ?ಧ್ವಜ, ತ್ರಿವರ್ಣ ಬಣ್ಣದ ಟೀ- ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳು ಸಭೆಯ ಮಧ್ಯದಲ್ಲಿ ಮೂಡಿಸಿದ್ದ ’ಇಂಡಿಯಾ’, ತ್ರಿವರ್ಣದ ಕೊಡೆಗಳು, ಬಾನಂಗಳದಿ ಹಾರಿಬಿಟ್ಟ ತ್ರಿವರ್ಣದ ಬೆಲೂನ್‌ಗಳು…….ಹೀಗೆ ಪುತ್ತಿಗೆಯ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ತ್ರಿವರ್ಣ ಸಂಭ್ರಮ ಮನೆ ಮಾಡಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.