Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾರಾಯಣ ವಿಶೇಷ ಮಕ್ಕಳ ಶಾಲೆ: ನೂತನ ತರಗತಿ ಕೊಠಡಿ, ಅಡುಗೆ ಕೋಣೆ ಉದ್ಘಾಟನೆ
    ಊರ್ಮನೆ ಸಮಾಚಾರ

    ನಾರಾಯಣ ವಿಶೇಷ ಮಕ್ಕಳ ಶಾಲೆ: ನೂತನ ತರಗತಿ ಕೊಠಡಿ, ಅಡುಗೆ ಕೋಣೆ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:ತಾಲೂಕಿನ ತಲ್ಲೂರು ಫ್ಯಾಮಿಲಿ ಟ್ರಸ್ಟ್ ರಿ. ಪ್ರವರ್ತಿತ ನಾರಾಯಣ ವಿಶೇಷ ಮಕ್ಕಳ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ನೂತನ ತರಗತಿ ಕೊಠಡಿ ಮತ್ತು ಅಡುಗೆ ಕೋಣೆಯ ಉದ್ಘಾಟನಾ ಸಮಾರಂಭ ಭಾನುವಾರ ಶಾಲೆಯ ಬಯಲು ಆಂಗಣದಲ್ಲಿ ಜರುಗಿತು.

    Click Here

    Call us

    Click Here

    ಶಾಲೆಯ ಮಧ್ಯಾಹ್ನದೂಟದ ಅಡುಗೆ ಕೋಣೆ ಹಾಗೂ ಅಡುಗೆ ಸಲಕರಣೆಗಳನ್ನು ಒದಗಿಸಿದ ಗೋವಿಂದ ಬಾಬು ಪೂಜಾರಿ ಅವರ ಹೆತ್ತವರಾದ ಬಾಬು ಪೂಜಾರಿ – ಮಂಜಮ್ಮ ದಂಪತಿಗಳು ಉದ್ಘಾಟಿಸಿದರು. ನೂತನ ಶಾಲಾ ಕೊಠಡಿಗಳನ್ನು ಸೆಲ್ಕೊ ಜನರಲ್ ಮ್ಯಾನೇಜರ್ ಜಗದೀಶ್ ಪೈ ಉದ್ಘಾಟಿಸಿದರು.

    ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸೆಲ್ಕೊ ಇಂಡಿಯಾದ ಜನರಲ್ ಮ್ಯಾನೆಜರ್ ಜಗದೀಶ ಪೈ ಮಾತನಾಡಿ, ವಿಕಲಚೇತನರಿಗೆ ಕರುಣೆಯ ಅಗತ್ಯವಿಲ್ಲ. ಬದಲಿಗೆ ಅವಕಾಶಗಳು ಬೇಕಿದೆ. ಅವರಿಗೂ ತರಬೇತಿ ನೀಡುವುದು, ಮುಖ್ಯವಾಹಿನಿಯಲ್ಲಿ ಸೇರಿಸಿಕೊಂಡು ಎಲ್ಲರಂತೆ ಬದುಕುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

    ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಬದುಕಿನಲ್ಲಿ ಕಷ್ಟಪಟ್ಟು ಬೆಳೆದು ಬಂದು ತನಗೆ ಸಮಾಜದಲ್ಲಿ ಆರ್ಥಿಕ ಅಗತ್ಯವುಳ್ಳವರಿಗೆ ಸ್ಪಂದಿಸುವುದರಲ್ಲಿ ಸಂತೋಷವಿದೆ. ಕಷ್ಟದಲ್ಲಿರುವವರಿಗೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯವೂ ಆಗಿದ್ದು, ಆ ದಿಸೆಯಲ್ಲಿ ನಾರಾಯಣ ವಿಶೇಷ ಮಕ್ಕಳ ಶಾಲೆಗೆ ಅಡುಗೆ ಕೋಣೆ ನಿರ್ಮಿಸುವ ಭರವಸೆ ನೀಡಿದ್ದೆ. ಅದೀಗ ನೆರವೇರಿರುವುದು ಖುಷಿ ತಂದಿದೆ. ಮುಂದೆಯೂ ಶಾಲೆಯ ವಿಶೇಷ ಮಕ್ಕಳ ಅಗತ್ಯತೆಗಳಿಗೆ ಸ್ಪಂದಿಸುತ್ತೇನೆ ಎಂದರು.

    ಸೆಲ್ಕೋ ಇಂಡಿಯಾ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಗುರು ಪ್ರಕಾಶ್ ಶೆಟ್ಟಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ಚಂದ್ರ ನಾಯ್ಕ್, ತಾಲೂಕು ಪಂಚಾಯತ್ ಸದಸ್ಯ ಕರಣ್ ಕುಮಾರ್ ಪೂಜಾರಿ, ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಬಿಲ್ಲವ ಅತಿಥಿಗಳಾಗಿದರು.

    Click here

    Click here

    Click here

    Click Here

    Call us

    Call us

    ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀ ಸುರೇಶ್ ತಲ್ಲೂರು ಸ್ವಾಗತಿಸಿದರು. ಟ್ರಸ್ಟೀ ರಾಜಾರಾಮ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯೋಪಧ್ಯಾಯಿನಿ ಪ್ರೇಮಾ ಲೂವಿಸ್ ವಾರ್ಷಿಕ ವರದಿ ವಾಚಿಸಿದರು. ವಸಂತ ಶ್ಯಾನುಭೋಗ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ವಿವಿಧ ಸ್ವರ್ಧೆಗಳ ವಿಜೇತ ಮಕ್ಕಳು ಹಾಗೂ ಪಾಲಕರಿಗೆ ಬಹುಮಾನ ವಿತರಣೆ, ಬಳಿಕ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಸೆಲ್ಕೊ ಇಂಡಿಯಾದ ಉಪಕರಣಗಳು ಮತ್ತು ವಿಶೇಷ ಮಕ್ಕಳು ತಯಾರಿಸಿದ ’ಸ್ವಾವಲಂಬಿ’ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    twelve + sixteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.