Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯತ್ತಾಬೇರು ವನದುರ್ಗಾ ಮಾತೆ ಸನ್ನಿಧಿ: ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧತೆ
    ಊರ್ಮನೆ ಸಮಾಚಾರ

    ಯತ್ತಾಬೇರು ವನದುರ್ಗಾ ಮಾತೆ ಸನ್ನಿಧಿ: ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧತೆ

    Updated:18/03/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಬೈಂದೂರು: ಸುಮಾರು ಎಂಟು ನೂರು ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ಯತ್ತಾಬೇರು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ, ಭಕ್ತರ ಪಾಲಿನ ವನದುರ್ಗಾ ಮಾತೆ ಸನ್ನಿಧಿಯಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಸಲು ಸಂಕಲ್ಪಿಸಲಾಗಿದ್ದು, ಈ ಸಂಬಂಧ ಭಕ್ತರು ಹಾಗೂ ಊರಿನವರ ಸಭೆ ಕರೆಯಲಾಗಿದೆ.

    Click Here

    Call us

    Click Here

    ಜೈನರ ಕಾಲದ ದೇವಸ್ಥಾನ:
    ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ಜೈನರ ಕಾಲದಲ್ಲಿ ಪ್ರತಿಷ್ಟಾಪನೆಗೊಂಡಿರುವುದು ಎಂಬುದಕ್ಕೆ ಸಾಕ್ಷಿಯಾಗಿ ಈ ಅಮ್ಮನವರನ್ನು ಬಹಳ ಹಿಂದೆ ಜೈನರ ಆರಾಧ್ಯ ದೇವಿಯಾದ ಪದ್ಮಾವತಿ ಅಮ್ಮನವರು ಎಂದು ಕರೆಯುತ್ತಿದ್ದರಂತೆ ಮತ್ತು ಇಲ್ಲಿ ಪರಿವಾರ ದೈವಗಳಾಗಿ ಜೈನ ಜಟ್ಟಿಗೇಶ್ವರ ಮತ್ತು ಜೈನ ಯಕ್ಷಿ ಗುಡಿಯು ಸ್ಥಾಪಿತಗೊಂಡಿತ್ತು. ದೇವಸ್ಥಾನ ಆಸುಪಾಸಿನ ಪರಿಸರದಲ್ಲಿ ವಾಸವಿದ್ದ ಬುಡಕಟ್ಟು ಜನಾಂಗದವರು ಈ ಅಮ್ಮನವರನ್ನು “ವನದುರ್ಗೆ” ಎಂದು ಕರೆಯುತ್ತಿದ್ದರಂತೆ. ಅಲ್ಲದೇ ಪಶ್ಚಿಮ ಘಟ್ಟಗಳ ದಟ್ಟ ಕಾಡಿನ ಮಧ್ಯೆ ಇರುವ ಈ ಪುಣ್ಯ ಸಾನಿಧ್ಯವು ಪರಮ ಪಾವನ ಶಕ್ತಿ ಸನ್ನಿಧಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನವು ಯಡ್ತರೆ ಶೆಟ್ಟರ ಕುಟುಂಬದ ಕುಲದೇವಿಯೂ ಹೌದು.

    ಎಡ ಹಸ್ತದಿಂದ ಆಶೀರ್ವದಿಸುವ ಭಂಗಿ ಅಪರೂಪ:
    ಅವಿಭಜಿತ ದ.ಕ ಜಿಲ್ಲೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಹುಪಾಲು ವಿಗ್ರಹಗಳು ಕುಳಿತು, ಬಲ ಹಸ್ತದಿಂದ ಆಶೀರ್ವಾದ ನೀಡುವ ಭಂಗಿಯಲ್ಲಿದ್ದರೇ, ಈ ಬೈಂದೂರಿನ ಯತ್ತಾಬೇರು ದುರ್ಗಾಪರಮೇಶ್ವರಿ ಅಮ್ಮನವರು ವಿಗ್ರಹವು ವಿಭಿನ್ನ ಹಾಗೂ ಅಪರೂಪವೆಂಬಂತೆ ನಿಂತು, ಎಡ ಹಸ್ತದಿಂದ ಆಶೀರ್ವಾದ ನೀಡುವ ಭಂಗಿಯಲ್ಲಿದೆ. ಇಂತಹದ್ದೇ ಮಾದರಿಯ ಎಡಗೈ ಆಶೀರ್ವಾದ ಭಂಗಿಯ ಅಮ್ಮನವರ ವಿಗ್ರಹವು ಭಾರತದ ಅತ್ಯಂತ ಪ್ರಸಿದ್ಧ ಮತ್ತು ಶಕ್ತಿಶಾಲಿ ಭಗವತಿ ಅಮ್ಮನವರ ದೇವಾಲಯಗಳಾದ ಕನ್ಯಾಕುಮಾರಿ ಮತ್ತು ಕೇರಳದ ಚೊಟ್ಟಾನಿಕೆರೆಯಲ್ಲಿ ಮಾತ್ರ ಕಾಣಸಿಗುತ್ತದೆ. ಹಾಗಾಗಿ ಬೈಂದೂರಿನ ಯತ್ತಾಬೇರು ದುರ್ಗಾಪರಮೇಶ್ವರೀ ದೇವಸ್ಥಾನವು ಅಖಂಡ ಭಾರತದಲ್ಲಿಯೇ ಬಹಳ ಪುರಾತನವಾದದ್ದು ಮತ್ತು ಇಲ್ಲಿನ ಅಮ್ಮನವರ ವಿಗ್ರಹದ ಮಾದರಿಗೆ ವಿಸ್ತಾರವಾದ ಭೂಖಂಡದಲ್ಲಿಯೇ 3ನೇ ಸ್ಥಾನ ಸಲ್ಲುತ್ತದೆ ಎಂಬುದು ಬಲ್ಲವರ ಅಂಬೋಣ.

    ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ:
    ಪ್ರಾಚೀನ ದೇಗುಲವನ್ನು ಜೀರ್ಣೋದ್ಧಾರ ಮಾಡುವ ಮೂಲಕ ದಿವ್ಯ ಸಾನಿಧ್ಯದ ಪವಿತ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಒಂದು ಪುಣ್ಯದ ಕೆಲಸ ನಡೆಯಲಿದೆ. ಈ ಪವಿತ್ರ ಕಾರ್ಯಕ್ರಮದ ಪೂರ್ವಭಾವಿ ಸಭೆ ಎಪ್ರಿಲ್ 12ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಂದು ಬೆಳಿಗ್ಗೆ ದುರ್ಗಾ ಹೋಮ ಜರುಗಲಿದೆ. ಈ ಹಿನ್ನೆಲೆಯಲ್ಲಿ ಊರ ಪರವೂರ ಸಮಸ್ತ ಭಕ್ತಾದಿಗಳು ಮತ್ತು ಯಡ್ತರೆ ಕುಟುಂಬದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    12 − 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.