Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದ ಉದ್ಯಮಿ ಕೊಲೆ ಯತ್ನ: ನಾಲ್ವರು ಆರೋಪಿಗಳ ಬಂಧನ
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರದ ಉದ್ಯಮಿ ಕೊಲೆ ಯತ್ನ: ನಾಲ್ವರು ಆರೋಪಿಗಳ ಬಂಧನ

    Updated:21/03/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪಾಲುದಾರಿಕೆಯಲ್ಲಿ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರ ಕೊಲೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರ ತಂಡ ತ್ವರಿತ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಮಾರಕಾಯುಧ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮಹಾರಾಷ್ಟ್ರ ರತ್ನಗಿರಿ ಮೂಲದ ದಾನೀಶ್ ಪಾಟೀಲ್ (34) ಹಾಗೂ ಆತನ ಸಹಚರರಾದ ಆಸೀಮ್ ಖಾಜಿ (39, ಮುಕದ್ದರ್ ಜಮಾದರ್ (34), ಪ್ರಸಾದ್ (47) ಎಂದು ಗುರುತಿಸಲಾಗಿದೆ.

    Click Here

    Call us

    Click Here

    ಘಟನೆಯ ವಿವರ:
    ಹಂಗಳೂರಿನ ಫ್ಲ್ಯಾಟ್ ಒಂದರಲ್ಲಿ ವಾಸವಿರುವ ಮರವಂತೆಯ ಮೊಹಮ್ಮದ್ ಶಾಕೀರ್ ಎಂಬುವವರು ಸುಮಾರು ಎರಡು ವರ್ಷಗಳಿಂದ ಮಹಾರಾಷ್ಟ್ರ ರತ್ನಗಿರಿಯ ದಾನೀಶ್ ಪಾಟೀಲ್ ಎಂಬುವವರೊಂದಿಗೆ ಮೀನು ಖರೀದಿ ವ್ಯವಹಾರ ನಡೆಸುತ್ತಿದ್ದರು. ಹಣದ ಲೆಕ್ಕಾಚಾರ ಸರಿಯಾಗಿದ್ದಾಗ್ಯೂ ದಾನೀಶ್ ಪಾಟೀಲ್ ಎಂಬಾತ, ಶಾಕೀರ್ ಹಾಗೂ ಅವರ ತಂದೆಗೆ ಆಗಾಗ್ಗೆ ಕರೆ ಮಾಡಿ ನೀವು 50ಲಕ್ಷ ರೂ. ಕೊಡುವುದು ಬಾಕಿ ಇದೆ. ಅದನ್ನು ಕೊಡುವಂತೆ ಬೆದರಿಕೆ ಹಾಕುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ರತ್ನಗಿರಿಯಿಂದ ಕುಂದಾಪುರಕ್ಕೆ ಬಂದು ಲಾಡ್ಜ್ ಒಂದರಲ್ಲಿ ವಾಸವಿದ್ದ ಆರೋಪಿಗಳು ಮಾಚ್.20ರ ಬೆಳಿಗ್ಗೆ ಶಾಕೀರ್ ವಾಸವಿದ್ದ ಪ್ಲಾಟ್ ಬಳಿ ಬಂದು ಬೆದರಿಕೆ ಹಾಕಿದ್ದರು. ಬಳಿಕ ಮತ್ತೆ ಕರೆಮಾಡಿದ ದಾನೀಶ್ ತಾನು ವಾಸವಿದ್ದ ಲಾಜ್ಡ್‌ಗೆ ಬಂದರೆ ಬಾಕಿ ಇರುವ ಹಣದ ಲೆಕ್ಕಾಚಾರ ತಿಳಿಸುವುದಾಗಿ ಹೇಳಿದ್ದರು. ಅಂದು ಸಂಜೆಯ ವೇಳೆಗೆ ಶಾಕೀರ್ ಹಾಗೂ ಅವರ ಸ್ನೇಹಿತ ಸುಹೈಲ್ ಕಾರಿನಲ್ಲಿ ತೆರಳುತ್ತಿದ್ದಾಗ ಅವರನ್ನು ಅಡ್ಡಗಟ್ಟಿದ ಆರೋಪಿಗಳು ಶಾಕೀರ್ ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಬೀಸಿ, ಹಣಕ್ಕಾಗಿ ಬೆದರಿಕೆ ಹಾಕಿದ್ದರು. ಆದರೆ ಶಾಕೀರ್ ಅಲ್ಲಿಂದ ತಪ್ಪಿಸಿಕೊಂಡು ಬಂದು ಮನೆಯವರಿಗೆ ವಿಷಯ ತಿಳಿಸಿ, ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಕುಂದಾಪುರ ಪೊಲೀಸರಿಂದ ತ್ವರಿತ ಕಾರ್ಯಾಚರಣೆ:
    ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಕುಂದಾಪುರದ ಪಿಎಸೈ ಹರೀಶ್ ಆರ್. ಮತ್ತವರ ತಂಡ ಆರೋಪಿಗಳಿಗಾಗಿ ಕಾರ್ಯಾಚರಣೆಗಿಳಿಯಿತು. ಅಷ್ಟರಲ್ಲಾಗಲೇ ಆರೋಪಿಗಳು ವಾಸವಿದ್ದ ಲಾಡ್ಜ್‌ನಿಂದ ಕಾಲ್ಕಿತ್ತಿದ್ದರು. ಪೊಲೀಸರು ತಕ್ಷಣ ಅವರ ಕಾರನ್ನು ಬೆನ್ನತ್ತಿದ್ದು, ಕೊಟೇಶ್ವರದ ಸಮೀಪ ಆರೋಪಿಗಳನ್ನು ಬಂಧಿಸಿದರು. ಬಂಧಿತ ಆರೋಪಿಗಳಿಂದ ಕಾರು, ಚೂರಿಗಳು ಹಾಗೂ ಸ್ಕ್ರೂಡ್ರೈವರ್ ವಶಕ್ಕೆ ಪಡೆದುಕೊಳ್ಳಲಾಗಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ./

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    12 + 20 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.