Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ: ಕೃಷಿ ಚಟುವಟಿಕೆಗಳಿಗಾಗಿ ಅಗತ್ಯ ವಸ್ತುಗಳ ವಿತರಣೆಗೆ ಕ್ರಮ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆ: ಕೃಷಿ ಚಟುವಟಿಕೆಗಳಿಗಾಗಿ ಅಗತ್ಯ ವಸ್ತುಗಳ ವಿತರಣೆಗೆ ಕ್ರಮ

    Updated:31/03/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ದೇಶದಾದ್ಯಂತ ವ್ಯಾಪಕವಾಗಿ ಕೋವಿಡ್-19 ಹರಡುತ್ತಿರುವ ಹಿನ್ನೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಘೋ?ಣೆಯಾಗಿರುವುದರಿಂದ, ರೈತರಿಗೆ ಕೃಷಿ ಪರಿಕರಗಳ ಲಭ್ಯತೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕೃಷಿ ಚಟುವಟಿಕೆಗಳಿಗೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಪೀಡೆನಾಶಕಗಳು, ಕೃಷಿ ಕೊಯ್ಲು ಯಂತ್ರೋಪಕರಣಗಳ ಸಾಗಣೆಯಲ್ಲಿ ಕೆಳಗಿನಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    Click Here

    Call us

    Click Here

    •  ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರಗಳಾದ ಬಿತ್ತನೆ ಬೀಜ, ಗೊಬ್ಬರ, ಪೀಡೆನಾಶಕ, ಹಾಗೂ ಕೃಷಿ ಯಂತ್ರೋಪಕರಣಗಳು ಸೇರುವುದರಿಂದ, ಸದರಿ ಪರಿಕರಗಳ ವಿತರಣೆ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳನ್ನು ತಪ್ಪದೆ ಪಾಲಿಸಲು ಸಂಬಂಧಿಸಿದ ವಿತರಕರಿಗೆ ಕಡ್ಡಾಯಗೊಳಿಸುವುದು.
    • ವಿತರಣಾ ಸಮಯದಲ್ಲಿ ಗೊಂದಲಗಳಿಗೆ ಎಡೆಮಾಡದೆ, ಕೃಷಿ ಪರಿಕರಗಳ ವಿತರಣೆಗಾಗಿ ಅನುಮತಿ ಚೀಟಿಯನ್ನು ಅಧಿಕೃತ ಮಾರಾಟ/ವಿತರಕರಿಗೆ ನೀಡಲು ಕ್ರಮ ಕೈಗೊಳ್ಳುವುದು.
    • ಪರಿಕರಗಳನ್ನು ಖರೀದಿಸುವ ವೇಳೆಯಲ್ಲಿ ರೈತರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರಾಟ ಮಳಿಗೆಯ ಮುಂಭಾಗದಲ್ಲಿ ಗುರುತುಗಳನ್ನು ಮಾಡುವುದರೊಂದಿಗೆ, ರೈತರಿಗೆ ಸ್ಯಾನಿಟೈಜರ್ಸ್/ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡಲು ಪರಿಕರ ಮಾರಾಟ/ವಿತರಕರಿಗೆ ಸೂಚನೆ ನೀಡುವುದು. ಆದ? ಮುಖಗವಸು ಹಾಕಿಕೊಳ್ಳಲು ಅರಿವು ಮೂಡಿಸಲು ಕ್ರಮ ವಹಿಸುವುದು.
    • ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳ ನಿಯಮಗಳನ್ನು ಉಲ್ಲಂಘಿಸಿದ ಮಾರಾಟ/ವಿತರಕರ ಪರವಾನಗಿಯನ್ನು ಅಮಾನತು/ರದ್ದುಗೊಳಿಸಲು ಕ್ರಮ ವಹಿಸುವುದು. ಕುಂದಾಪ್ರ ಡಾಟ್ ಕಾಂ ಸುದ್ದಿ.
    •  ಯಾವುದೇ ಕಾರಣಕ್ಕಾಗಿ ಮೇಲಿನ ಅಗತ್ಯ ಸೇವೆಗಳ ಲಭ್ಯತೆಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಲು ವಾಹನ ಸೌಲಭ್ಯದ ಅಗತ್ಯವಿರುವುದರಿಂದ ವಾಹನ ಚಾಲಕರಿಗೆ ಅಗತ್ಯ ಸೇವೆಗಾಗಿ ಎಂದು ಚೀಟಿ ನೀಡಿ ಸೇವೆಯನ್ನು ಪಡೆಯುವುದು, ಸರ್ಕಾರಿ ವಾಹನ ಚಾಲಕರು ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಚಾಲಕರ ಸೇವೆಯನ್ನು ಪಡೆಯಲು ಕ್ರಮ ವಹಿಸುವುದು.
    • ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಪೀಡೆನಾಶಕಗಳು, ಕೃಷಿ ಕೊಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಅಊSಅ ಗಳನ್ನು ಬೆಳ್ಳಿಗೆ ೭.೦೦ ರಿಂದ ೧೧.೦೦ ಘಂಟೆಯವರೆಗೆ ಸಮಯ ನಿಗಧಿಪಡಿಸಲಾಗಿದ್ದು ಅದೇ ಸಮಯದಲ್ಲಿ ಮಾರುವುದು ಮತ್ತು ಖರೀದಿಸುವುದು.

    ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳ ವಿತರಣೆಯ ಸಮಯದಲ್ಲಿ ಈ ಮೇಲೆ ತಿಳಿಸಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    five × three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.