Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ದೇವಳ ಪ್ರೌಢಶಾಲೆಯನ್ನು ಕ್ವಾರಂಟೈನ್‌ಗೆ ಬಳಸಿಕೊಳ್ಳುವುದು ಸೂಕ್ತ: ನರಸಿಂಹ ಹಳಗೇರಿ
    ಕೊಲ್ಲೂರು

    ಕೊಲ್ಲೂರು ದೇವಳ ಪ್ರೌಢಶಾಲೆಯನ್ನು ಕ್ವಾರಂಟೈನ್‌ಗೆ ಬಳಸಿಕೊಳ್ಳುವುದು ಸೂಕ್ತ: ನರಸಿಂಹ ಹಳಗೇರಿ

    Updated:21/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಹೊರರಾಜ್ಯಗಳಿಂದ ಬಂದಿರುವವರನ್ನು ದೇವಳದ ವಿವಿಧ ಅತಿಥಿಗೃಹಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನರಿರುವುದರಿಂದ ಸಾಮಾಜಿಕ ಅಂತರ ಹಾಗೂ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದರ ಬದಲಿಗೆ ವಿಶಾಲ ಪ್ರದೇಶದಲ್ಲಿರುವ ಕೊಲ್ಲೂರು ದೇವಳದ ಪ್ರೌಢಶಾಲೆಗಳಲ್ಲಿ ಕ್ವಾರಂಟೈನ್ ಮಾಡುವುದು ಉತ್ತಮ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ನರಸಿಂಹ ಹಳಗೇರಿ ಹೇಳಿದ್ದಾರೆ.

    Click Here

    Call us

    Click Here

    ಈ ಬಗ್ಗೆ ಮುಜರಾಯಿ ಸಚಿವರು, ಸಂಸದರು ಹಾಗೂ ಶಾಸಕರಿಗೆ ಪತ್ರ ಬರೆದಿರುವ ಅವರು, ಕೋರೋನಾ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಆದರೆ ದೇವಳದ ಅತಿಥಿಗೃಹಗಳಲ್ಲಿ ಹೆಚ್ಚಿನ ಜನರಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಸ್ಯೆಯಾಗುತ್ತಿದೆ. ಅಲ್ಲದೇ ದೇವಳದ ಅತಿಥಿ ಗೃಹವನ್ನು ಧೀರ್ಘಕಾಲದ ತನಕ ಕ್ವಾರಂಟೈನ್ ಕೇಂದ್ರವನ್ನಾಗಿಸುವುದರಿಂದ ಮುಂದೆ ಬರುವ ಯಾತ್ರಾರ್ಥಿಗಳಿಗೆ ಖಾಸಗಿ ಲಾಡ್ಜುಗಳ ಮಾಲಿಕರು ದಿಕ್ಕುತಪ್ಪಿಸಿ ಅಲ್ಲಿಗೆ ತೆರಳದಂತೆ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

    ದೇವಳದ ಸಿಬ್ಬಂದಿಗಳನ್ನು ಆಹಾರ ವಿತರಣೆ ಸೇರಿದಂತೆ ವಿವಿಧ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಆದರೆ ಅವರಿಗೆ ಅಗತ್ಯವಾದ ಸುರಕ್ಷತಾ ಕಿಟ್‌ಗಳನ್ನು ಈವರೆಗೆ ನೀಡಲಾಗಿಲ್ಲ. ಆರೋಗ್ಯ ಸಿಬ್ಬಂದಿಗಳಂತೆ ಕ್ವಾರಂಟೈನ್ ಕೇಂದ್ರದಲ್ಲಿ ನೇರ ಸಂಪರ್ಕಕ್ಕೆ ಬರುವ ದೇವಳದ ಸಿಬ್ಬಂದಿಗಳಿಗೆ ಯಾವುದೇ ಸುರಕ್ಷತೆ ಇಲ್ಲವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ನರಸಿಂಹ ಹಳಗೇರಿ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

    ಇದನ್ನೂ ಓದಿ:
    ► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
    ► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .
    ► ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 27 ಕೊರೋನಾ ಪಾಸಿಟಿವ್ – https://kundapraa.com/?p=37743 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

    28/04/2026

    ರೌಡಿಶೀಟರ್ ಇಡೂರು ಕುಂಜ್ಞಾಡಿಯ ಕಾರ್ತಿಕ್ ಆಚಾರ್ ಗಡಿಪಾರು

    11/04/2026

    ಬೈಕ್‌ಗೆ ಮಿನಿಲಾರಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ

    02/04/2026
    Leave A Reply Cancel Reply

    one × five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.