Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರತ್ನಾ ಕೊಠಾರಿ ಸಾವಿಗೆ ಒಂದು ವರ್ಷ: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಪಾದಯಾತ್ರೆ
    ಊರ್ಮನೆ ಸಮಾಚಾರ

    ರತ್ನಾ ಕೊಠಾರಿ ಸಾವಿಗೆ ಒಂದು ವರ್ಷ: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಪಾದಯಾತ್ರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ರತ್ನಾ ಕೊಠಾರಿ ಕುಟುಂಬಕ್ಕೆ ನ್ಯಾಯ ಒದಗಿಸಲು ಸರಕಾರ ವಿಫಲ: ಮುನೀರ್ ಕಾಟಿಪಳ್ಳ

    Click Here

    Call us

    Click Here

    ಬೈಂದೂರು: ನಿಗೂಢವಾಗಿ ಸಾವನ್ನಪ್ಪಿದ್ದ ಶಿರೂರು ಕಾಲೇಜು ವಿದ್ಯಾರ್ಥಿನಿ ರತ್ನಾ ಕೊಠಾರಿ ಪ್ರಕರಣಕ್ಕೆ ಒಂದು ವರ್ಷ ಸಂದರೂ ಈವರೆಗೆ ಆಕೆಯ ಸಾವಿನ ಕಾರಣವನ್ನು ಬಹಿರಂಗಪಡಿಸಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿರುವುದಲ್ಲದೇ, ಮೃತಳ ಕುಟುಂಬಕ್ಕೆ ಸರಕಾರ ಘೋಷಿಸಿದ್ದ 3ಲಕ್ಷ ರೂಪಾಯಿಗಳನ್ನು ದೊರಕಿಸಿಕೊಡುವುದನ್ನು ಮರೆತಿರುವ ಬೈಂದೂರು ಕ್ಷೇತ್ರದ ಶಾಸಕರು ತಮ್ಮ ಕರ್ತವ್ಯವನ್ನು ಮರೆತಿದ್ದಾರೆ ಎಂದು ಡಿವೈಎಫ್‌ಐ ರಾಜ್ಯಾಧ್ಯಾಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು.

    ಅವರು ರತ್ನಾ ಕೊಠಾರಿ ಕಳೆದ ವರ್ಷ ನಿಗೂಢವಾಗಿ ಸಾವನ್ನಪ್ಪಿದ ಸಾವಂತಗುಡ್ಡೆಯಿಂದ ಆರಂಭಗೊಂಡ ಪ್ರತಿಭಟನಾ ಪಾದಯಾತ್ರೆಯಲ್ಲಿ ಭಾಗವಹಿಸಿ ಬೈಂದೂರಿನ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದರು.

    ಕಳೆದ ಒಂದು ವರ್ಷದಿಂದ ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಸಂಘಟನೆಗಳು ನಿರಂತರವಾಗಿ ವಿದ್ಯಾರ್ಥಿನಿರ ಸಾವಿನ ವಿರುದ್ಧ ಪ್ರತಿಭಟನೆ ನಡೆಸುತ್ತಲೇ ಬಂದಿದೆ. ಜನರ ಆಕ್ರೋಶದ ದಿಕ್ಕು ತಪ್ಪಿಸಲು ಬೈಂದೂರಿನ ಶಾಸಕರು 3 ಲಕ್ಷ ಪರಿಹಾರ ಘೋಷಣೆ ಮಾಡಿ ಸುಮ್ಮನಾಗಿದ್ದಾರೆ. ಪೊಲೀಸ್ ಇಲಾಖೆಯೂ ಚಾರ್ಜ್ ಶೀಟ್ ಸಲ್ಲಿಸದೇ ವಿಳಂಬ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮುನೀರ್, ಇನ್ನಾದರೂ ಬೈಂದೂರು ಕ್ಷೇತ್ರದ ಶಾಸಕರು ಎಚ್ಚೆತ್ತುಕೊಂಡು ಮೃತಳ ಕುಟುಂಬಕ್ಕೆ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು.

    ರತ್ನಾ ಕೊಠಾರಿ, ಅಕ್ಷತಾ ದೇವಾಡಿಗ ಪ್ರಕರಣಗಳು ಒಂದೇ ವರ್ಷದಲ್ಲಿ ನಡೆದಿರುವುದು ಹಳ್ಳಿಗರನ್ನು ಬೆಚ್ಚಿ ಬೀಳಿಸಿದೆ. ಕಾಡು ಪ್ರದೇಶಗಳನ್ನು ದಾಟಿ ಬರುವ ವಿದ್ಯಾರ್ಥಿನಿಯರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಹಳ್ಳಿ ಪ್ರದೇಶದಿಂದ ಬರುವ ವಿದ್ಯಾರ್ಥಿಗಳ ರಕ್ಷಣೆಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದವರು ಆಗ್ರಹಿಸಿದರು.

    Click here

    Click here

    Click here

    Call us

    Call us

    ಶಿರೂರಿನ ಸಾವಂತಗುಡ್ಡೆಯಿಂದ ಆರಂಭಗೊಂಡ ಪ್ರತಿಭಟನಾ ಜಾಥಾವನ್ನು ಸಿಪಿಐ(ಎಂ) ಮುಖಂಡ ಎಚ್. ನರಸಿಂಹ ಉದ್ಘಾಟಿಸಿದರು.

    _MG_0141 _MG_0187 _MG_0237

    ಎಸ್.ಎಫ್.ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ, ತಾಲೂಕು ಅಧ್ಯಕ್ಷ ಅಕ್ಷಯ ವಡೇರಹೊಬಳಿ, ಕಾರ್ಯದರ್ಶಿ ಶ್ರೀಕಾಂತ್ ಹೆಮ್ಮಾಡಿ, ವಿದ್ಯಾರ್ಥಿ ನಾಯಕಿ ಅಫ್ರಿನ್, ಡಿವೈಎಪ್ಐ ಜಿಲ್ಲಾ ಕಾರ್ಯದರ್ಶಿ ಸುರೇಶ ಕಲ್ಲಾಗರ್, ಜಿಲ್ಲಾ ಸಂಚಾಲಕ ಕವಿರಾಜ್, ತಾಲೂಕು ಕಾರ್ಯದರ್ಶಿ ರಾಜೇಶ್ ವಡೇರಹೊಬಳಿ, ಸಿಐಟಿಯು ಮುಖಂಡರಾದ ವೆಂಕಟೇಶ ಕೋಣಿ, ದಾಸ್ ಭಂಡಾರಿ, ಗಣೇಶ ತೊಂಡೆಮಕ್ಕಿ, ಗಣೇಶ ಪೂಜಾರಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    Like this:

    Like Loading...

    Related

    Byndoor CITU DYFI SFI
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d