Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರೋನಾ ಅವಾಂತರ: ಶವಸಂಸ್ಕಾರದ ವೇಳೆ ಮೃತ ವೃದ್ಧರ ಬದಲಾಗಿ ಯುವಕನ ಶವ ಪತ್ತೆ
    ಅಪಘಾತ-ಅಪರಾಧ ಸುದ್ದಿ

    ಕೊರೋನಾ ಅವಾಂತರ: ಶವಸಂಸ್ಕಾರದ ವೇಳೆ ಮೃತ ವೃದ್ಧರ ಬದಲಾಗಿ ಯುವಕನ ಶವ ಪತ್ತೆ

    Updated:23/08/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ನೇರಂಬಳ್ಳಿ ಗ್ರಾಮದ ವಯೋವೃದ್ಧರೋರ್ವರು ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಕರೊನಾದಿಂದ ಮೃತಪಟ್ಟಿದ್ದು ಅವರ ಅಂತಿಮ ಸಂಸ್ಕಾರಕ್ಕಾಗಿ ಕುಂದಾಪುರ ಹಳೆಕೋಟೆ ಸ್ಮಶಾನಕ್ಕೆ ಮೃತದೇಹವನ್ನು ತಂದಾಗ ಕುಟುಂಬಿಕರಿಗೊಂದು ಶಾಕ್ ಕಾದಿತ್ತು. ಅಂತಿಮ ಸಂಸ್ಕಾರಕ್ಕೂ ಮುನ್ನ ಅನುಮಾನಗೊಂಡು ಮೃತದೇಹದ ಪ್ಯಾಕ್ ಬಿಡಿಸಿದಾಗ ಅದರಲ್ಲಿ ಬೇರೊಬ್ಬ ವ್ಯಕ್ತಿಯ ಶವ ಕಂಡು ಕುಟುಂಬಸ್ಥರು ಕಂಗಾಲಾಗಿದ್ದಾರೆ.

    Click Here

    Call us

    Click Here

    ನೇರಂಬಳ್ಳಿ ಮೂಲಕ 65 ವರ್ಷದ ವೃದ್ಧರು ಕರೊನಾ ಸೋಂಕಿನಿಂದಾಗಿ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಶವವನ್ನು ಅಂಬುಲೆನ್ಸ್‌ನಲ್ಲಿ ಕುಂದಾಪುರಕ್ಕೆ ತರಲಾಗಿತ್ತು. ಮೃತದೇಹ ಸಂಪೂರ್ಣ ಪ್ಯಾಕ್ ಮಾಡಿದ್ದರಿಂದ ಒಳಗಿರುವ ಶವ ಯಾರದ್ದೆಂದು ಮೊದಲಿಗೆ ಸಂಬಂಧಿಕರಿಗೆ ತಿಳಿಯಲಿಲ್ಲ. ಹಳೆಕೋಟೆ ಸ್ಮಶಾನಕ್ಕೆ ಅಂತ್ಯ ಸಂಸ್ಕಾರಕ್ಕೆ ತಂದಾಗ ಅನುಮಾನಗೊಂಡು, ಓಪನ್ ಮಾಡಬಾರದು ಎಂಬ ಒತ್ತಡದ ನಡುವೆಯೂ ಶವ ಪರೀಕ್ಷಿಸುವಾಗ ಅದರಲ್ಲಿ ವೃದ್ಧರ ಬದಲಿಗೆ ಬೇರೊಬ್ಬ ಯುವಕನ ಶವವಿತ್ತು. ಇದು ನಮ್ಮ ಮೃತದೇಹ ಅಲ್ಲವೆನ್ನುತ್ತಿದ್ದಂತೆ ಅಂಬುಲೆನ್ಸ್ ಸಿಬ್ಬಂದಿಗಳು ಶವ ಕೊಂಡುಹೋಗಲು ಯತ್ನಿಸಿದ್ದರು. ತಕ್ಷಣ ಸ್ಮಶಾನದ ಗೇಟ್ ಹಾಕಿದ ಜನರು ‘ಯಾರದ್ದೋ ಶವ ಕಳುಹಿಸುವ ಈ ರೀತಿಯ ಯಡವಟ್ಟು ಕೆಲಸ ಮಾಡಿದ ಆಧಿಕಾರಿಗಳ ಅಜಾಗ್ರತೆ ಸರಿಯಲ್ಲ, ನಮ್ಮ ಮೃತದೇಹ ತಂದು ಕೊಡುವವರೆಗೆ ಈ ದೇಹವನ್ನು ಹೊರ ಹೋಗಲು ಬಿಡಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಪ್ರತಿಭಟನೆ ಆರಂಭಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಜನ ಸ್ಮಶಾನದಲ್ಲಿ ಸೇರಿ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ, ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ. ಕೊನೆಗೆ ಆಸ್ಪತ್ರೆಯವರು ತಮ್ಮಿಂದಾದ ತಪ್ಪನ್ನು ಒಪ್ಪಿಕೊಂಡು ಮತ್ತೊಂದು ಅಂಬುಲೆನ್ಸ್‌ನಲ್ಲಿ ಮೃತ ವ್ಯಕ್ತಿಯ ಶವ ಕಳುಹಿಸಿದರು. ನಂತರ ಜನರು ಮೊದಲು ಬಂದಿದ್ದ ಅಂಬುಲೆನ್ಸ್‌ ಗೆ ತೆರಳಲು ಅವಕಾಶ ನೀಡಿದರು. ಕೊನೆಗೆ ನೇರಂಬಳ್ಳಿ ವ್ಯಕ್ತಿಯ ಶವದ ಅಂತ್ಯಕ್ರಿಯೆ ನಡಸಲಾಯಿತು/ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    six + nine =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.