Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನವದಂಪತಿಗಳ ವೆಡ್ಡಿಂಗ್ ಚಾಲೆಂಜ್‌ಗೆ ಭಾಗಶಃ ಕಸಮುಕ್ತವಾದ ಸೋಮೇಶ್ವರ ಬೀಚ್!
    ವಿಶೇಷ ವರದಿ

    ನವದಂಪತಿಗಳ ವೆಡ್ಡಿಂಗ್ ಚಾಲೆಂಜ್‌ಗೆ ಭಾಗಶಃ ಕಸಮುಕ್ತವಾದ ಸೋಮೇಶ್ವರ ಬೀಚ್!

    Updated:03/01/20211 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಬೈಂದೂರು: ಮದುವೆಯಾದ ಹೊಸತರಲ್ಲಿ ಸುತ್ತಾಟ, ಹನಿಮೂನ್ ಎನ್ನುವವರ ನಡುವೆ ಈ ಜೋಡಿ ಮಾತ್ರ ಭಿನ್ನವಾಗಿ ನಿಲ್ಲುತ್ತದೆ. ಬೈಂದೂರು ಸೋಮೇಶ್ವರದ ಕಡಲತೀರ ಸ್ವಚ್ಛಗೊಳಿಸಬೇಕು ಎಂಬ ಸಂಕಲ್ಪತೊಟ್ಟ ನವ ದಂಪತಿಗಳಾದ ಅನುದೀಪ್ ಹೆಗಡೆ ಹಾಗೂ ಮಿನುಷಾ ಕಾಂಚನ್ ಮದುವೆಯ ಸಂಭ್ರಮದೊಂದಿಗೆ ಸಾಮಾಜಿಕ ಬದ್ಧತೆಯನ್ನು ಮೆರೆದು ಇತರರಿಗೂ ಮಾದರಿಯಾಗಿದ್ದಾರೆ.

    Click Here

    Call us

    Click Here

    ಬೈಂದೂರು ತಾಲೂಕಿನ ಕಳವಾಡಿಯವರಾದ ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟರ್. ತಮ್ಮದೇ ಸ್ವುಡಿಯೋ1 ಪ್ರೊಡಕ್ಷನ್ ಮೂಲಕ ಈ ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಮಿನುಷಾ ಫಾರ್ಮಾಸಿಟಿಕಲ್ ಕಂಪನಿ ಉದ್ಯೋಗಿ. ಈರ್ವರು ನ.18 ರಂದು ಮದುವೆಯಾಗಿದ್ದರು. ತಮ್ಮ ಮದುವೆಯ ನೆನಪು ಬಹುಕಾಲ ಉಳಿಯಬೇಕು ಎಂದು ನಿರ್ಧರಿಸಿದ್ದ ದಂಪತಿಗಳು, ವೆಡ್ಡಿಂಗ್ ಚಾಲೆಂಜ್ ಆಗಿ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸುವ ನಿರ್ಧಾರ ಮಾಡಿದರು. ಅದಕ್ಕಾಗಿ ಹನಿಮೂನ್ ಪ್ಲಾನ್ ಕೂಡ ಮುಂದೂಡಿದರು. ಕುಂದಾಪ್ರ ಡಾಟ್ ಕಾಂ.

    ಬೀಚ್ ಸ್ವಚ್ಛತೆಯ ಪಣತೊಟ್ಟ ದಂಪತಿಗಳು ನ.27ರಿಂದ ಪ್ರತಿದಿನ ಸಂಜೆ 2ಗಂಟೆ ಶ್ರಮದಾನ ಮಾಡಿ ತೀರದಲ್ಲಿ ಬಿದ್ದಿದ್ದ ಮದ್ಯದ ಬಾಟಲಿ, ಪ್ಲಾಸ್ಟಿಕ್, ಚಪ್ಪಲಿ ಹೀಗೆ 9 ದಿನಗಳ ಅವಧಿಯಲ್ಲಿ ಹೀಗೆ ಸುಮಾರು 800ಕೆ.ಜಿಯಷ್ಟು ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಿದ್ದಾರೆ. ಕಳೆದೆರಡು ದಿನಗಳಿಂದ ದಂಪತಿಗಳ ಕಾರ್ಯವನ್ನು ಮೆಚ್ಚಿ ಸ್ಥಳೀಯರು ಕೈಜೋಡಿಸಿದ್ದಾರೆ. ಶ್ರಮದ ಫಲವಾಗಿ ಇದೀಗ ಸೋಮೇಶ್ವರ ಕಡಲತೀರ ಭಾಗಶಃ ಸ್ವಚ್ಛಗೊಂಡಿದೆ.

    ವೆಡ್ಡಿಂಗ್ ಚಾಲೆಂಗ್ ಆಗಿ ಬೀಚ್ ಸ್ವಚ್ಛತೆಯನ್ನು ಕೈಗೆತ್ತಿಕೊಂಡೆವು. ಕಳೆದ ಕೆಲವು ದಿನಗಳ ಹಿಂದೆ ಆರಂಭಿಸಿದ ಈ ಅಭಿಯಾನಕ್ಕೆ ಎರಡು ದಿನಗಳಿಂದ ಸ್ಥಳೀಯರಾದ ಹಸನ್ ಹಾಗೂ ಅವರ ತಂಡ, ಬೈಂದೂರಿನ ಮಂಜುನಾಥ ಶೆಟ್ಟಿ ಮೊದಲಾದವರು ಕೈಜೋಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಾನು ಹಾಗೂ ಮಿನುಷಾ ಬೇರೆ ಬೇರೆ ಜಾಗೃತಿ ಅಭಿಯಾನ ಆಯೋಜಿಸುವ ಯೋಚನೆ ಇದೆ. – ಅನುದೀಪ್ ಹೆಗ್ಡೆ/ಕುಂದಾಪ್ರ ಡಾಟ್ ಕಾಂ./

    Click here

    Click here

    Click here

    Call us

    Call us

    ಇದನ್ನೂ ಓದಿ:
    ► ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಪ್ರಧಾನಿ ಮೋದಿ ಶ್ಲಾಘನೆ – https://kundapraa.com/?p=43634 . ಅನುದೀಪ್

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    1 Comment

    1. Girish Adiga on 07/12/2020 1:28 pm

      Wonderful work..

      Reply

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d