Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಾಳೆ (ಡಿ.22) ಚುನಾವಣೆ
    ಊರ್ಮನೆ ಸಮಾಚಾರ

    ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಾಳೆ (ಡಿ.22) ಚುನಾವಣೆ

    Updated:21/12/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಡಿ.22ರಂದು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆಯಲಿರುವ ಚುನಾವಣೆಗೆ ಸರ್ವ ಸಿದ್ಧತೆಗಳ ನಡೆದಿದ್ದು, 128 ಮತಗಟ್ಟೆಗಳಲ್ಲಿ ನಡೆಯಲಿರುವ ಚುನಾವಣೆಗೆ ಪೂರ್ವಭಾವಿಯಾಗಿ ಸೋಮವಾರ ಮಸ್ಟರಿಂಗ್ ಕಾರ್ಯ ನಡೆದಿದೆ.

    Click Here

    Call us

    Click Here

    ಮಂಗಳವಾರ ನಡೆಯಲಿರುವ ಮತದಾನ ಪ್ರಕ್ರಿಯೆಗೆ 616 ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 128 ಡಿ ಗ್ರೂಫ್ ನೌಕರರು ಇರಲಿದ್ದು ಕೊರೋನಾ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸುರಕ್ಷಿತ ಕಿಟ್ಗಳನ್ನು ಚುನಾವಣಾ ಆಯೋಗ ಸರಬರಾಜು ಮಾಡಿದೆ. ಸರತಿ ಸಾಲಿನಲ್ಲಿ ಅಂತರ ಕಾಯ್ದುಕೊಂಡು ಮತ ಚಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಥರ್ಮಲ್ ಸ್ಕ್ಯಾನರ್ ಮೂಲಕ ಮತದಾರರನ್ನು ಪರೀಕ್ಷಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ. ಅಧಿಕಾರಿಗಳು ಮಸ್ಟರಿಂಗ್ ಮುಗಿಸಿ ಮತಗಟ್ಟೆಗಳಿಗೆ ತೆರಳಲು ಒಟ್ಟು 33 ಸರಕಾರಿ ಬಸ್ ವ್ಯವಸ್ಥೆ ಮಾಡಲಾಗಿತ್ತು.

    88,659 ಮತದಾರರು:
    ಬೈಂದೂರು ತಾಲೂಕಿನಲ್ಲಿ ಒಟ್ಟು 128 ಮತಗಟ್ಟೆಗಳಿದ್ದು 88,659 ಮತದಾರರಿದ್ದಾರೆ. ಅವರಲ್ಲಿ 45,284 ಮಹಿಳಾ ಮತದಾರರು, 43,374 ಪುರುಷ ಮತದಾರರು ಹಾಗೂ ಒಬ್ಬರು ಇತರ ಮತದಾರರಿದ್ದಾರೆ. 14 ಸೂಕ್ಷ್ಮ, 11 ಅತಿ ಸೂಕ್ಷ್ಮ ಮತಗಟ್ಟೆಗಳು ಸೇರಿ ಉಳಿದವು ಸಾಮಾನ್ಯ ಮತಗಟ್ಟೆಗಳಾಗಿದೆ.

    ಎರಡು ಕಡೆ ತ್ರಿಕೋನ ಸ್ಪರ್ಧೆ
    ಚುನಾವಣೆ ನಡೆಯುವ 15 ಗ್ರಾಮ ಪಂಚಾಯಿತಿಗಳಲ್ಲಿ ಎರಡರಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆಗಳಿವೆ. ನಾಡ ಗ್ರಾಮ ಪಂಚಾಯಿತಿಯ ಎಲ್ಲ 19 ಸ್ಥಾನಗಳಿಗೆ ಕಾಂಗ್ರೆಸ್ ಮತ್ತು ಬೆಜೆಪಿ ಬೆಂಬಲಿತರು ಸ್ಪರ್ಧಿಸುತ್ತಿದ್ದಾರೆ. 15 ಸ್ಥಾನಗಳಲ್ಲಿ ಸಿಪಿಎಂ ಬೆಂಬಲಿತರು ಸ್ಪರ್ಧೆ ನೀಡಲು ಅಣಿಯಾಗಿದ್ದಾರೆ. ಹಿಂದಿನ ಅವಧಿಯಲ್ಲಿ ಈ ಪಕ್ಷದ ಬೆಂಬಲದಿಂದ ಗೆದ್ದ 4 ಸದಸ್ಯರು ಇದ್ದರು. ಒಂದು ಅವಧಿಯಲ್ಲಿ 12 ಸ್ಥಾನಗಳನ್ನು ಗೆದ್ದಿದ್ದ ಸಿಪಿಎಂ ಬೆಂಬಲಿತರು ಈ ಬಾರಿ ನಿರ್ಣಾಯಕ ಹೋರಾಟಕ್ಕೆ ಸಜ್ಜಾಗಿರುವುದರಿಂದ ಮೂರು ಪಕ್ಷಗಳ ಬೆಂಬಲಿತರ ನಡುವೆ ತೀವ್ರ ಹಣಾಹಣಿ ನಡೆಯುವುದು ಖಚಿತವಾಗಿದೆ.

    Click here

    Click here

    Click here

    Call us

    Call us

    ಮರವಂತೆ ಗ್ರಾಮ ಪಂಚಾಯಿತಿಯ 14 ಸ್ಥಾನಗಳಲ್ಲಿ ಒಂದು ಅವಿರೋಧವಾಗಿ ಆಯ್ಕೆಯಾಗಿದೆ. ಉಳಿದ ಎಲ್ಲ ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತರ ಜತೆಗೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ಸ್ವಾಭಿಮಾನಿ ಪಕ್ಷೇತರ ವೇದಿಕೆ ಹೆಸರಿನಲ್ಲಿ 12 ಸ್ಥಾನಗಳ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಆ ಮೂಲಕ ಇಲ್ಲಿಯೂ ತ್ರಿಕೋನ ಸ್ಪರ್ಧೆ ನಡೆಯಲಿದೆ.

    ಬಂದೋವಸ್ತ್:
    ಕುಂದಾಪುರ ಪ್ರಭಾರ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಕುಂದಾಪುರದ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಬೈಂದೂರು ಠಾಣೆ ಪಿಎಸ್ಐ ಸಂಗೀತಾ, ಗಂಗೊಳ್ಳಿ ಪಿಎಸ್ಐ ಭೀಮಾಶಂಕರ್, ಕೊಲ್ಲೂರು ಪಿಎಸ್ಐ ಮಹಾದೇವ ಬೋಸ್ಲೆ, ಶಂಕರನಾರಾಯಣ ಪಿಎಸ್ಐ ಶ್ರೀಧರ್ ನಾಯ್ಕ್, ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ, ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್ಐ ಸುಧಾಪ್ರಭು, ಸಂಚಾರಿ ಠಾಣೆ ಉಪನಿರೀಕ್ಷಕರಾದ ಸುಬ್ಬಣ್ಣ, ಸುದರ್ಶನ್ ಸೇರಿದಂತೆ 269 ಪೊಲೀಸರನ್ನು ಬಂದೋಬಸ್ತಿಗಾಗಿ ನಿಯೋಜಿಸಲಾಗಿದೆ. ಇವರಲ್ಲಿ 100 ಮಂದಿ ಟ್ರೈನಿ ಪೊಲೀಸ್ ಸಿಬ್ಬಂದಿಗಳಿದ್ದಾರೆ. 1 ಕೆ.ಎಸ್.ಆರ್.ಪಿ ಹಾಗೂ 1 ಫ್ಲಟೂನ್ ನಿಯೋಜಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.