Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಉಚಿತ ನೇತ್ರ ತಪಾಸಣೆ, ಚಿಕಿತ್ಸೆ, ಆಯುರ್ವೇದ ಸೌಂದರ್ಯ ಮಾಹಿತಿ ಶಿಬಿರ
    ಊರ್ಮನೆ ಸಮಾಚಾರ

    ಕುಂದಾಪುರ: ಉಚಿತ ನೇತ್ರ ತಪಾಸಣೆ, ಚಿಕಿತ್ಸೆ, ಆಯುರ್ವೇದ ಸೌಂದರ್ಯ ಮಾಹಿತಿ ಶಿಬಿರ

    Updated:18/01/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕಥೊಲಿಕ್ ಸಭಾ ವಲಯ ಸಮಿತಿಯ ಆಶ್ರಯದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಪ್ರಸಾದ್ ನೇತ್ರಾಲಯ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ವಿಭಾಗ ಉಡುಪಿ, ಇವರ ಸಂಯೋಕತ್ವದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಆಯುರ್ವೇದ ಸೌಂದರ್ಯ ಮಾಹಿತಿ ಹಾಗೂ ತಪಾಸಣೆ ಶಿಬಿರವು ಕುಂದಾಪುರ ಸೈಂಟ್ ಮೇರಿಸ್ ಪಿ.ಯು.ಕಾಲೇಜು ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಲಯ ಪ್ರಧಾನ ಧರ್ಮಗುರು, ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಸ್ಟ್ಯಾನಿ ತಾವ್ರೊ, ಭಾಹ್ಯ ಬೆಳಕು ಎಷ್ಟೊ ಮುಖ್ಯವೊ ಅಷ್ಟೆ ಅಂತರ್ಯದ ಬೆಳಕು ಅಷ್ಟೆ ಮುಖ್ಯ, ಸೌಂದರ್ಯ  ಹೆಚ್ಚಿಸಿಕೊಳ್ಳುವುದರ ಜೊತೆಗೆ ಅಂತರಾತ್ಮದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವುದು ಮುಖ್ಯ. ನೀವು ಸಮಾಜದ ಬೆಳಕಾಗಬೇಕು ಎಂದು ಯೇಸು ಸ್ವಾಮಿ ಹೇಳಿದ್ದು ನೆನಪಿಸಿಕೊಂಡು ನಾವು ಹಾಗೆ ನಡೆಯೋಣ, ಹಾಗೇಯೆ ಇಂತಹ ಶಿಬಿರಗಳಿಂದ ನಾವು ಆರೋಗ್ಯ ಭರಿತರಾಗಿ, ಸೌಂದರ್ಯ ಭರಿತರಾಗಿಯೂ ಇರಲು ಪ್ರಯತ್ನಿಸೋಣ. ಈ ಶಿಬಿರದಿಂದ ಆರೋಗ್ಯ ದೀಪ ಎಲ್ಲರ ಮನೆಯಲ್ಲಿ ಬೆಳಗಲಿ ಎಂದು ಹೇಳಿದರು.

    ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಸ್.ಜಯಕರ ಶೆಟ್ಟಿ ಮಾತನಾಡಿ, ಕಥೊಲಿಕ್ ಸಭಾದ ಜೊತೆಗೆ ಹಲವಾರು ವರ್ಷಗಳಿಂದ ಹಲವಾರು ಜನ ಪರ ಕಾರ್ಯಕ್ರಮಗಳನ್ನು ಹಂಚಿಕೊಂಡಿದ್ದೆವೆ. ನಮ್ಮಿಂದ ಆಗುವ ಸಹಾಯವನ್ನು ಮಾಡುತ್ತೇವೆ. ಕನ್ನಡಕ ಅಗತ್ಯ ಇದ್ದವರಿಗೆ ರೆಡ್ ಕ್ರಾಸ್ ಸಂಸ್ಥೆ ಉಚಿತ ಕನ್ನಡಕಗಳನ್ನು ನೀಡುತ್ತದೆ ಎಂದು ಹೇಳಿದರು.

    ಪ್ರಸಾದ್ ನೇತ್ರಲಾಯದ ಡಾ. ಸುಧಾ ರಾಣಿ ಕಣ್ಣಿನ ರಕ್ಷಣೆ, ಚಿಕಿತ್ಸೆ, ಕಣ್ಣಿನ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಡಾ. ಸ್ವಾತಿ ಜಿ.ಶೇಟ್ ಆಯುರ್ವೇದದಿಂದ ಹೇಗೆ ಸೌಂದರ್ಯ ಹೆಚ್ಚಿಸಬಹುದು, ಕಣ್ಣಿನ ದ್ರಷ್ಟಿ ಹೆಚ್ಚಿಸಲು, ಕಣ್ಣು ಆರೋಗ್ಯದಿಂದಿರಲು ಅಕ್ಶಿತರ್ಪಣ, ಕೂದಲಿನ ಅಭ್ಯಂಜನದ ಬಗ್ಗೆ ವಿವರಿಸಿ ಚಿಕಿತ್ಸಾ ಪ್ರಾತ್ಯಾಕ್ಷಿಕೆ ಮೂಲಕ ಮಾಡಿತೋರಿಸಿದರು. ಪ್ರಸಾದ್ ನೇತ್ರಾಲಯದ ವೈದ್ಯಕೀಯ ತಂಡ ಕಣ್ಣುಗಳ ತಪಾಸಣೆ ಮಾಡಿದರು.

    ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಕ್ಷೆ ಮೇಬಲ್ ಡಿಸೋಜಾ ಅಧ್ಯಕ್ಷಿಯ ಭಾಷಣದಲ್ಲಿ ಕಥೊಲಿಕ್ ಸಭಾ 30 ವರ್ಷಗಳಿಂದ ಜನ ಪರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿವೆ ಈ ಶಿಬಿರದಲ್ಲಿ ಹಲವಾರು ಜನರು ಪ್ರಯೋಜನ ಪಡೆಯುವಂತಾಗಿದ್ದು, ಇದು ಮುಂದಕ್ಕೂ ಮುಂದುವರೆಯಲಿದೆ ಎಂದರು.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಹೇರಿಕ್ ಗೊನ್ಸಾಲ್ವಿಸ್, ನಿಯೋಜಿತ ಅಧ್ಯಕ್ಷೆ ಶಾಂತಿ ಪಿರೇರಾ, ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಬಿರದ ಸಂಚಾಲಕರಾದ ಡಾ.ಸೋನಿ ಡಿಕೋಸ್ತಾ ಪ್ರಸ್ತಾವಿಸಿ ಸ್ವಾಗತಿಸಿದರು. ಕ. ಸ. ಕುಂ. ವ. ಸಮಿತಿ ಕಾರ್ಯದರ್ಶಿ ಪ್ರೇಮಾ ಡಿಕುನ್ಹಾ ವಂದಿಸಿದರು, ಸರಕಾರಿ ಸವಲತ್ತು ಸಂಚಾಲಕ ವಿನೋದ್ ಕ್ರಾಸ್ಟೊ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    seven + sixteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.