Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಮಟ್ಟದ ಕೊರಗರ ಕ್ರೀಡಾಕೂಟ: ಒಟ್ಟಾಮ್ ಬಲ್ಲಾ 2021 ಸಮಾರೋಪ
    ಊರ್ಮನೆ ಸಮಾಚಾರ

    ರಾಜ್ಯ ಮಟ್ಟದ ಕೊರಗರ ಕ್ರೀಡಾಕೂಟ: ಒಟ್ಟಾಮ್ ಬಲ್ಲಾ 2021 ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಪರಿಶಿಷ್ಟ ಗೆಳೆಯರು(ಕೊರಗ), ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ದಕ್ಷಣ ಕನ್ನಡ ಜಿಲ್ಲೆ, ಕೆಳಪೇಟೆ ಶಿರೂರು, ಬೈಂದೂರು ತಾಲೂಕು ಮಹಾತ್ಮ ಜ್ಯೋತಿ ಬಾಪುಲೆ ಕೊರಗರ ಯುವ ಕಲಾ ವೇದಿಕೆ ಯೋಜನ ನಗರ ಬೈಂದೂರು ಇವರ ಸಹಕಾರದೊಂದಿಗೆ ರಾಜ್ಯ ಮಟ್ಟದ ಕೊರಗರ ಕ್ರೀಡಾಕೂಟ ಒಟ್ಟಾಮ್ ಬಲ್ಲಾ(ಒಂದಾಗೋಣ ಬನ್ನಿ) 2021 ಸಮಾರೋಪ ಸಮಾರಂಭ ನಡೆಯಿತು.

    Click Here

    Call us

    Click Here

    ಅಧ್ಯಕ್ಷತೆ ವಹಿಸಿ ಮಾತನಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾಬು ಶೆಟ್ಟಿ, ಕೊರಗರು ಅತ್ಯಂತ ಹಿಂದುಳಿದ ಪಂಗಡದವರಾಗಿದ್ದಾರೆ. ನಾವು ಬಾಲ್ಯದಿಂದಲೇ ಈ ಪಂಗಡವನ್ನು ಅತೀ ಹತ್ತಿರದಿಂದ ನೋಡಿದ್ದೇವೆ ಇವರಿಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ನಾವು ಅವರ ಅಭಿವೃದ್ಧಿ ಕೆಲಸವನ್ನು ಮಾಡುತ್ತೇವೆ ಮತ್ತು ಬಹಳ ಅಚ್ಚುಕಟ್ಟಾಗಿ ಈ ಕ್ರೀಡಾಕೂಟವನ್ನು ಆಯೋಜಿಸಿದ್ದಾರೆ. ಈ ಆಯೋಜನೆಯು ಬೇರೆ ಬೇರೆ ಸಮುದಾಯದವರಿಗೂ ಕೂಡ ಮಾದರಿಯಾಗಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಾಬು ಕೊರಗ ಮತ್ತು ಕುಂದಾಪುರ ಪುರಸಭೆಯ ಸದಸ್ಯರು ಮತ್ತು ಕರ್ನಾಟಕ ರಾಜ್ಯ ದಲಿತ ಸಂಘ ಸಮಿತಿಯ ಸಂಚಾಲಕರಾದ ವಿ. ಪ್ರಭಾಕರ ಇವರನ್ನು ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಂಕರ ಪೂಜಾರಿ, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಉತ್ತರ ಕನ್ನಡ ಜಲ್ಲಾ ಕೊರಗ ಸಮಾಜದ ಹಿತ ರಕ್ಷಾಣಾ ವೇದಿಕೆ ಕುಮಟಾ ಅಧ್ಯಕ್ಷರಾದ ಮಂಜುನಾಥ ಡಿ. ಹೊನ್ನಾವರ, ಕುಂದಾಪುರ ಕೊರಗ ಯೋಜನಾಭಿವೃದ್ಧಿ ಅಧ್ಯಕ್ಷರಾದ ಗಣೆಶ್, ಬಾರ್ಕೂರು ಯುವ ಕಲಾವೇದಿಕೆ ಅಧ್ಯಕ್ಷರಾದ ಗಣೇಶ್ ಬಾರ್ಕೂರು, ಮಾಜಿ ಕೆ. ಎಮ್. ಫ್ ನಿರ್ದೇಶಕರಾದ ಕುಮಾರ್ ದಾಸ ಹಾಗೂ ಕುಂದಾಪುರ ಬಿಜೆಪಿ ಮಂಡಲ, ಎಸ್ಸ್. ಟಿ ಪ್ರಧಾನ ಕಾರ್ಯದರ್ಶಿ, ಕೊರಗ ಮುಖಂಡರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಸಂಘದ ನಾಯಕರಾದ ವಿ. ಗಣೆಶ್, ಮಂಜುನಾಥ ಡಿ. ಹೊನ್ನಾವರ, ಲಕ್ಷಣ ಕೊರಗ ಬೈಂದೂರು ಇವರಿಗೆ ಮಹಾ ನಾಯಕರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ಕೋರೋನಾ ವಾರಿಯರ್ಸ್‌ಗಳಾದ ಕಮಲಾ, ಸುವರ್ಣ, ಉಮೇಶ, ರಾಜೇಶ್, ಹರೀಶ್, ವಿಷ್ಣು, ಶಂಕರ, ಭೂಮಿಕಾ, ಶಶಿಧರ್, ಅರ್ಜುನ, ಪ್ರತಾಪ, ಜಯರಾಮ್, ಸುಮಲತಾ, ವೆಂಕಟೇಶ್ ಎಸ್., ಶ್ರೀಧರ ಕೆ. ರಜನಿ ಎಸ್ ಇವರನ್ನು ಸನ್ಮಾನಿಸಲಾಯಿತು.

    ಈ ಪಂದ್ಯಾಟದ ಪ್ರಥಮ ಸ್ಥಾನವನ್ನು ಅರುಣ್ ವಿಠ್ಠಲ್ ಮತ್ತು ಪ್ರವೀಣ್ ವಿಠ್ಠಲ್ ಮಾಲಿಕತ್ವದ ಎಸ್.ಎನ್.ಸಿ ಕಾರವಾರ ತಂಡವು ಪಡೆದುಕೊಂಡರೆ, ದ್ವೀತಿಯ ಸ್ಥಾನವನ್ನು ಪ್ರಕಾಶ್ ಬಿದ್ಕಲ್‌ಕಟ್ಟೆ ಮಾಲಿಕತ್ವದ ರಾಯಲ್ ಕ್ರಿಕೆಟರ್ಸ್ ಬಿದ್ಕಲ್‌ಕಟ್ಟೆ ತಂಡವು ಪಡೆದುಕೊಂಡಿತು. ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಎಸ್.ಎನ್.ಸಿ ಕಾರವಾರ ತಂಡದ ಸುನೀಲ್ ಬಾಬು ಪಡೆದುಕೊಂಡರೆ, ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ರಾಯಲ್ ಕ್ರಿಕೆಟರ್ಸ್ ಬಿದ್ಕಲ್‌ಕಟ್ಟೆ ತಂಡದ ಅವಿನಾಶ್ ಪಡೆದುಕೊಂಡರು. ಉತ್ತಮ ಕ್ಷೇತ್ರ ರಕ್ಷಕ, ಪೈನಲ್ ಪಂದ್ಯದ ಪಂದ್ಯ ಶ್ರೇಷ್ಠನಾಗಿ ಎಸ್.ಎನ್.ಸಿ ತಂಡದ ಕಿಶನ್ಪಡೆದುಕೊಂಡರೆ, ಉತ್ತಮ ಗೂಟ ರಕ್ಷಕನಾಗಿ ರಾಯಲ್ ಕ್ರಿಕೆಟರ್ಸ್ ತಂಡದ ಅಮಿತ್ ಪಡೆದುಕೊಂಡರು.

    ಈ ಕಾರ್ಯಕ್ರಮವನ್ನು ಸುರೇಂದ್ರ ಜಿ. ಮುರ್ಡೇಶ್ವರ, ಪ್ರವೀಣ್ ಸಾಣಿಕಟ್ಟಾ, ನಾಗರಾಜ್ ಶೇಡಗೇರಿ, ವಿನೋದ ಶಿರೂರು ಇತರರು ಸಂಘಟಿಸಿದರು, ಲಕ್ಷಣ ಕೊರಗ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ಶೇಖರ ಮರವಂತೆ ವಂದಿಸಿದರು ಕುಮಾರಿ ಕೀರ್ತಿ ಭಟ್ ಉಪ್ಪುಂದ ನಿರೂಪಿಸಿದರು .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.