Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ.12 – 20: ಉಪ್ಪುಂದ ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ಪುನರ್‌ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ
    ಊರ್ಮನೆ ಸಮಾಚಾರ

    ಫೆ.12 – 20: ಉಪ್ಪುಂದ ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ಪುನರ್‌ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ

    Updated:03/02/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಾಲೂಕಿನ ಉಪ್ಪುಂದ ಮಡಿಕಲ್ ಕಡಲ ತೀರದಲ್ಲಿರುವ ಕಾರಣಿಕ ಕೇಂದ್ರ ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ಪುನರ್‌ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಫೆ.12ರಿಂದ 20ರ ವರೆಗೆ ಜರುಗಲಿದೆ.

    Click Here

    Call us

    Click Here

    ಒಂಭತ್ತು ದಿನಗಳ ಪರ್ಯಂತ ಪ್ರತಿದಿನ ಧಾರ್ಮಿಕ ಉತ್ಸವಗಳ ಜತೆಗೆ ಕರಾವಳಿ ಉತ್ಸವದ ಶೈಲಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ತಬ್ಧಚಿತ್ರೋತ್ಸವ, ನಾಟಕೋತ್ಸವ, ನೃತ್ಯೋತ್ಸವ, ಯಕ್ಷೋತ್ಸವ ಹಾಗೂ ಪ್ರದರ್ಶನೋತ್ಸವಗಳು ಸಮುದ್ರ ಕಿನಾರೆಯಲ್ಲಿ ನಿರ್ಮಸಿದ ಶ್ರೀ ಈಶ್ವರ ವೇದಿಕೆಯಲ್ಲಿ ನಡೆಯಲಿದೆ.

    ದೇವಳದಲ್ಲಿ ಫೆ.12ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು ಫೆ.17ಕ್ಕೆ ಶ್ರಿ ದೇವರ ಪ್ರತಿಷ್ಠೆ, ಫೆ.20ಕ್ಕೆ ಬ್ರಹ್ಮಕಲಶಾಭಿಷೇಕ ಹಾಗೂ ಪ್ರತಿದಿನವೂ ಅನ್ನಸಂತರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಉಡುಪಿ ಭಾರ್ಗವಿ ತಂಡದಿಂದ ನಾಟ್ಯ ವೈಭವ, ಯೇಂಕಾರ್ ಭಟ್ಕಳ ಇವರಿಂದ ನೃತ್ಯ-ಗಾನ-ರೂಪಕ, ಅರೆಹೊಳೆ ಪ್ರತಿಷ್ಠಾನದಿಂದ ನಾಟ್ಯ ವೈಭವ, ಡಾನ್ಸಿಂಗ್ ಇನ್ ದಿ ಡಾರ್ಕ್ ಇವರಿಂದ ಡಾನ್ಸ್ ಧಮಾಕಾ, ಕುಂದಾಪುರ ನೃತ್ಯ ವಸಂತ ತಂಡದಿಂದ ನೃತ್ಯ-ನಾಟ್ಯ-ವೈಭವ, ಬೈಂದೂರು ನಟರಾಜ್ ಡ್ಯಾನ್ಸ್ ಫಿಟ್‌ನೆಸ್ ಗ್ರೂಪ್ ಇವರಿಂದ ನೃತ್ಯ ಸಿಂಚನ, ಕುಂದಾಪುರ ಕಲಾಸ್ಪೂರ್ತಿ ನಾಟಕ ಸಂಘದಿಂದ ಹಾಸ್ಯಮಯ ನಾಟಕ ಮದಿಮನಿ ಹಾಗೂ ಸಾಲಿಗ್ರಾಮ ಮೇಳದವರಿಂದ ನೂತನ ಪ್ರಸಂಗ ಯಕ್ಷಗಾನ ನಡೆಯಲಿದೆ.

    ಸ್ತಬ್ಧಚಿತ್ರಗಳ ಸ್ಪರ್ಧೆ ಮತ್ತು ಪ್ರದರ್ಶನ ಆಯೋಜಿಸಿದ್ದು, ಅಸಕ್ತರು ಸಂಸ್ಥೆಯ ಹೆಸರಿನಲ್ಲಿ, ಭಜನಾ ಮಂದಿರದ ಹೆಸರಿನಲ್ಲಿ ಹಾಗೂ ವೈಯಕ್ತಿಕವಾಗಿ ಕೂಡ ಕಾಲ್ಪನಿಕ, ಮಾದರಿ ಸ್ತಬ್ಧಚಿತ್ರಗಳನ್ನು ನಿಗದಿ ಪಡಿಸಿದ ಸ್ಥಳದಲ್ಲಿ ಬೆಳಕಿನ ವ್ಯವಸ್ಥೆಯೊಂದಿಗೆ ಒಂಭತ್ತು ದಿನಗಳ ಕಾಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸಿದ ಎಲ್ಲಾ ಸ್ತಬ್ಧಚಿತ್ರಗಳ ವ್ಯವಸ್ಥಾಪಕರಿಗೆ ಸ್ಮರಣಿಕೆ ಹಾಗೂ ಪ್ರಮಾಣಪತ್ರ ನೀಡಲಾಗುವುದು. ಅಲ್ಲದೇ ಸ್ಪರ್ಧೆಯಲ್ಲಿ ಆಯ್ಕೆಯಾದ ಸ್ತಬ್ಧಚಿತ್ರಗಳಿಗೆ ಪ್ರಥಮ ರೂ.7000, ದ್ವಿತೀಯ ರೂ.4000 ನಗದು ಬಹುಮಾನವನ್ನು ದೇವಸ್ಥಾನದ ವತಿಯಿಂದ ನೀಡಲಾಗುವುದು ಎಂದು ದೇವಸ್ಥಾನದ ಜೀರ್ಣೊದ್ಧಾರ ಸಮಿತಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    seven + thirteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.