Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೌಕೂರು ದುರ್ಗಾಪರಮೇಶ್ವರಿ ದೇವಳಕ್ಕೆ ಕನ್ನ: ಲಕ್ಷಾಂತರ ರೂ. ಆಭರಣ ದರೋಡೆ
    ಅಪಘಾತ-ಅಪರಾಧ ಸುದ್ದಿ

    ಸೌಕೂರು ದುರ್ಗಾಪರಮೇಶ್ವರಿ ದೇವಳಕ್ಕೆ ಕನ್ನ: ಲಕ್ಷಾಂತರ ರೂ. ಆಭರಣ ದರೋಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ತಾಲೂಕಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ದೇವಳದ ಕಾಣಿಕೆಹುಂಡಿಯನ್ನು ಒಡೆದು ಎರಡು ಕೆ.ಜಿ. ಚಿನ್ನದ ಸೊತ್ತುಗಳನ್ನು ಕಳವುಗೈದಿದ್ದಾರೆ. ರಾತ್ರಿ ಎಂಟೂ ವರೆಗೆ ದೇವಸ್ಥಾನದ ಅರ್ಚಕರು ಬಾಗಿಲು ಹಾಕಿ ಮನೆಗೆ ಹೋದ ನಂತರ ಈ ಪ್ರಕರಣ ನಡೆದಿದ್ದು, ಬೆಳಿಗ್ಗೆ ಎಂದಿನಂತೆ ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಶೂಕ್ರವಾರ ಸಂಜೆ ದೇವಿಗೆ ಮಹಾಪೂಜೆ, ಕರ್ಕಾಟಕ ಅಮಾವಾಸ್ಯೆಯ ವಿಶೇಷ ದಿನವನ್ನು ಗಮನದಲ್ಲಿಟ್ಟುಕೊಂಡೇ ಕಳವು ನಡೆಸಿರಬಹುದಾಗಿದೆ ಎಂದು ಅಂದಾಜಿಸಲಾಗಿದೆ.

    Click Here

    Call us

    Click Here

    ದೇವಿಗೆ ಹಾಕಲಾದ ಬೆಳ್ಳಿಯ ದೊಡ್ಡ ಮುಖವಾಡ, ಒಂದು ಚಿನ್ನದ ಮುಖ, ಅರ್ಧ ಕೆ.ಜಿ. ತೂಕದ ೧೫ ನಕ್ಷತ್ರ ಮಾಳ, ಒಂದೂವರೆ ಕೆಜಿ ತೂಕದ ಬಂಗಾರದ ಉತ್ಸವ ಮೂರ್ತಿ, ಒಂದು ಕೆ.ಜಿ. ತೂಕದ ಬೆಳ್ಳಿಯ ಉತ್ಸವ ಮೂರ್ತಿ, ವೀರಭದ್ರ ದೇವರಿಗೆ ಹಾಕಲಾಗಿದ್ದ ಬೆಳ್ಳಿಯ ಮುಖವಾಡ, ತಲೆಯ ಛತ್ರಿ, ಅಮ್ಮನವರ ದೇವಸ್ಥಾನದ ತಲೆಯ ಛತ್ರಿ, ಎರಡು ಕಾಣಿಕೆಯ ಹುಂಡಿ, ಒಂದು ಬೆಳ್ಳಿಯ ಗಂಟೆ, ಎರಡು ಕರಿಮಣಿ ಸರ, ಮೂಗುತಿ, ನೂರು ಗ್ರಾಂ ತೂಕದ ಬೆಳ್ಳಿ ತಟ್ಟೆ, ಪಂಚಲೋಹದ ನಾಲ್ಕು ಸಣ್ಣ ಮೂರ್ತಿಗಳನ್ನು ಅಪಹರಿಸಿದ್ದಾರೆ. ಅಲ್ಲದೇ ಕಳೆದ ಎರಡು ವರ್ಷಗಳಿಂದ ಕಾಣಿಕೆ ಹುಂಡಿಗೆ ಭಕ್ತರು ಅರ್ಪಿಸಿದ್ದ ಚಿನ್ನದ ಒಡವೆಗಳನ್ನು ಕಾಣಿಕೆ ಹುಂಡಿಯಲ್ಲಿಯೇ ಇಡಲಾಗಿದ್ದು ಸುಮಾರು ಎರಡು ಕೆಜಿ ತೂಕದ ಬಂಗಾರವನ್ನೂ ಕದ್ದೊಯ್ದಿದ್ದಾರೆ ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ.

    ಮುಜರಾಯಿ ಇಲಾಖೆಗೆ ಸೇರಿದ ಸೌಕೂರು ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನಕ್ಕೆ ಯಾವುದೇ ಭದ್ರೆತೆಯಿಲ್ಲ. ಇದ್ದ ಒಂದೇ ಒಂದು ಸೈರನ್ ಕೂಡಾ ಕೆಟ್ಟು ವರ್ಷವಾಗುತ್ತಾ ಬಂದಿದೆ. ಅಲ್ಲದೇ ಇತ್ತೀಚೆಗೆ ಹಲವು ದೇವಸ್ಥಾನಗಳಲ್ಲಿ ಕಳವು ನಡೆದಿದ್ದರೂ ಇದುವರೆಗೂ ದೇವಸ್ಥಾನಕ್ಕೆ ಸಿಸಿ ಕ್ಯಾಮೇರಾ ಅಳವಡಿಸಿಲ್ಲ. ದೇವಸ್ಥಾನದಲ್ಲಿ ಭದ್ರತಾ ಕೊಠಡಿಯಿಲ್ಲ. ಅಲ್ಲದೇ ಕಳೆದ ಎರಡು ವರ್ಷಗಳಿಂದ ಭಕ್ತರು ನೀಡಿದ ಬಂಗಾರ, ಬೆಳ್ಳಿ ಒಡವೆಗಳನ್ನು ಕಾಣಿಕೆ ಹುಂಡಿಯಲ್ಲಿಯೇ ಭದ್ರವಾಗಿಡುವ ದೇವಸ್ಥಾನದ ನಿರ್ಧಾರ ಅನುಮಾನ ಹುಟ್ಟಿಸುವಂತಿದೆ ಎಂದು ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ. ಸುಮಾರು ಹದಿನೈದು ವರ್ಷಗಳ ಹಿಂದೆಯೂ ಈ ದೇವಸ್ಥಾನದಲ್ಲಿ ಕಳವು ನಡೆದಿತ್ತು. ಆ ಸಂದರ್ಭ ಕಳವುಗೈದವರು ದೇವಸ್ಥಾನದ ಒಳಗಿನವರೇ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿತ್ತು. ಇದೀಗ ಈ ದೇವಸ್ಥಾನದಲ್ಲಿ ಎರಡನೇ ಬಾರಿಗೆ ಭಾರೀ ಕಳ್ಳತನ ನಡೆದಿದೆ. ಕಳೆದ ವಾರದವರೆಗೆ ದೇವಸ್ಥಾನಕ್ಕೆ ಆಡಳಿತ ಮೊಕ್ತೇಸರರಿದ್ದು ಇದೀಗ ದೇವಸ್ಥಾನದ ಜವಾಬ್ಧಾರಿಯನ್ನು ತಹಸೀಲ್ದಾರ್ ವಶಕ್ಕೆ ಒಪ್ಪಿಲಾಗಿತ್ತು.

    ಘಟನಾ ಸ್ಥಳಕ್ಕೆ ಬೆಳಿಗ್ಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಬಂದು ಪರೀಕ್ಷೆ ನಡೆಸಿದ್ದಾರಾದರೂ ರಾತ್ರಿಯಿಡೀ ಮಳೆಯಿದ್ದುದರಿಂದ ಯಾವ ಮಹತ್ವದ ಸುಳಿವು ದೊರೆತಿಲ್ಲವಾದರೂ ಈ ಹಿಂದೆ ಬೇರೆ ದೇವಸ್ಥಾನಗಳಲ್ಲಿ ಕಳವು ನಡೆಸಿದವರ ಕೃತ್ಯವೇ ಇರಬಹುದೆಂಬುದಾಗಿ ಶಂಕಿಸಲಾಗಿದೆ. ಕುಂದಾಪುರದ ಡಿವೈಎಸ್ಪಿ ಎಂ ಮಂಜುನಾಥ ಶೆಟ್ಟಿ, ವೃತ್ತ ನಿರೀಕ್ಷಕ ಪಿ.ಎಂ ದಿವಾಕರ, ಉಪನಿರೀಕ್ಷಕ ನಾಸೀರ್ ಹುಸೇನ್ ನೇತೃತ್ವದಲ್ಲಿ ಕಳವು ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Temple Theft (1) Temple Theft (26) Temple Theft (30) Temple Theft (50)

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d