Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುವೆಂಪು ಸಾಹಿತ್ಯ ಸಾಮಾಜಿಕ ವ್ಯವಸ್ಥೆಗಳ ಪ್ರತಿಬಿಂಬ: ಕುಲಪತಿ ಡಾ. ಸ. ಚಿ. ರಮೇಶ್
    alvas nudisiri

    ಕುವೆಂಪು ಸಾಹಿತ್ಯ ಸಾಮಾಜಿಕ ವ್ಯವಸ್ಥೆಗಳ ಪ್ರತಿಬಿಂಬ: ಕುಲಪತಿ ಡಾ. ಸ. ಚಿ. ರಮೇಶ್

    Updated:10/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಒಬ್ಬ ಮನುಷ್ಯನಿಗೆ ಕಾವ್ಯದ ಅಧ್ಯಯನ ತುಂಬಾ ಮುಖ್ಯ. ವಿವಿಧ ಕ್ಷೇತ್ರಗಳಲ್ಲಿ ಪರಿಣತರಾಗಿ ನಾಡು ಕಟ್ಟಲು ಸಾಹಿತ್ಯದ ಅರಿವು ಅವಶ್ಯ. ಒಂದು ಉತ್ತಮ ಸಾಹಿತ್ಯ ನಮ್ಮ ಬದುಕು ಹೇಗೆ ಇರಬೇಕೆಂದು ಹೇಳುತ್ತದೆ. ಕುವೆಂಪುರವರ ಸಾಹಿತ್ಯ ಕೃತಿಗಳು ಮನುಜನಾಗಲಿ ಅಥವಾ ಯಾವುದೇ ಜೀವಿಗಳಾಗಲಿ ಎಲ್ಲರೂ ಸಮಾನರೆಂಬ ತತ್ವವನ್ನು ಸಾರುತ್ತವೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಸ. ಚಿ ರಮೇಶ್ ಹೇಳಿದರು.

    Click Here

    Call us

    Click Here

    ಕುಪ್ಪಳಿಯ ಕುವೆಂಪು ಕನ್ನಡ ಕೇಂದ್ರ, ಕನ್ನಡ ವಿಶ್ವವಿದ್ಯಾಲಯ, ಹಂಪಿ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಕುವೆಂಪು ಕಾವ್ಯ: ಅನುಸಂಧಾನದ ನೆಲೆಗಳು’ ಕುರಿತ ಎರಡು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಕುವೆಂಪು ಸಾಹಿತ್ಯ ಕೃತಿಗಳನ್ನು ವಿಶ್ಲೇಷಿಸಿದ ಅವರು, ‘ಸಾಲದ ಮಗು’, ‘ಧನ್ವಂತರಿ’ ಕ್ರಮವಾಗಿ ಜೀತ ಹಾಗೂ ರೈತಾಪಿ ವರ್ಗದ ಮೇಲೆ ಬೆಳಕು ಚೆಲ್ಲಿದರೆ ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿ ಸುಬ್ಬಮ್ಮ ಅಂದಿನ ಸಾಮಾಜಿಕ ವ್ಯವಸ್ಥೆಗಳನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿವೆ. ಜೊತೆಗೆ ಸಮಾನತೆಯ ಧರ್ಮವನ್ನು ಬೋಧಿಸಿವೆ’ ಎಂದರು.

    ಆಶಯ ನುಡಿಗಳನ್ನು ಹೇಳಿದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎ.ವಿವೇಕ್ ರೈ, ಇತ್ತೀಚಿನ ದಿನಗಳಲ್ಲಿ ವೈಚಾರಿಕತೆ ಕ್ಲೀಷೆ ಆಗಿದೆ. ಅದರಿಂದ ವಿದ್ಯಾರ್ಥಿಗಳು ಹೊರ ಬರಬೇಕು. ಯಾವುದೇ ವಿಚಾರವನ್ನು ರಾಜಕೀಯವಾಗಿ ಪರಾಮರ್ಶಿಸುವುದಕ್ಕೂ ಸಾಹಿತ್ಯಾತ್ಮಕವಾಗಿ ಪ್ರಸ್ತುತಪಡಿಸುವುದಕ್ಕೂ ವ್ಯತ್ಯಾಸ ಇದೆ. ಭಾಷಾಜ್ಞಾನ ವಿಸ್ತಾರವಾದಂತೆ ಹೊಸತನವನ್ನು ನಾವು ಕಾಣಬಹುದು. ಕಾವ್ಯ ಕಲ್ಪನೆ ಆಗಿದ್ದು, ಓದುತ್ತಾ ಹೋದಂತೆ ಮನಸ್ಸು ಹಾಗೂ ಆಲೋಚನೆಗಳು ವಿಸ್ತಾರವಾಗುತ್ತವೆ. ಭಾಷೆಯಲ್ಲಿನ ಹೊಸತನವನ್ನು ಕಾವ್ಯದ ಮೂಲಕ ಕಟ್ಟಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ನಾವು ಯಾವಾಗಲು ನಮ್ಮದೇ ಚೌಕಟ್ಟಿನ ಒಳಗೆ ಯೋಚನೆ ಮಾಡುತ್ತೆವೆ. ಆದರೆ ಆ ಚೌಕಟ್ಟಿನ ಹೊರಗೂ ನಮ್ಮ ಆಲೋಚನೆಗಳನ್ನು ರೂಪಿಸಿಕೊಳ್ಳಬಹುದು ಎಂಬುದಕ್ಕೆ ಕುವೆಂಪು ಅವರ ಸಾಹಿತ್ಯ ಅದ್ಭುತ ನಿದರ್ಶನವಾಗಿದೆ. ‘ರಾಮಾಯಣ ದರ್ಶನಂ’ ಮಹಾಕಾವ್ಯವನ್ನು ಕುವೆಂಪುರವರು ತಮ್ಮದೇ ರೀತಿಯಲ್ಲಿ ಕಟ್ಟಿಕೊಟ್ಟದ್ದನ್ನು ಕಾಣಬಹುದು. ಒಬ್ಬರ ಅಭಿಪ್ರಾಯಗಳಿಗೆ ಸೀಮಿತವಾಗದೆ ನಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಿದಾಗ ಮಾತ್ರ ಕುವೆಂಪು ಸಾಹಿತ್ಯಕ್ಕೆ ಗೌರವಸಿಗುತ್ತದೆ ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಕಮ್ಮಾಟರ್ಥಿಗಳಿಂದ ಕುವೆಂಪು ಕಾವ್ಯ: ಅನುಸಂಧಾನದ ನೆಲೆಗಳು ವಿಷಯದ ಕುರಿತು ಚರ್ಚೆ ನಡೆಯಿತು. ಕುವೆಂಪು ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ಎಂ. ಪುಟ್ಟಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿದ್ಯಾರ್ಥಿ ಆಯನಾ ರಮಣ್ ನಿರೂಪಿಸಿದರು. ವೈಷ್ಣವಿ ಗೋಪಾಲ್ ವಂದಿಸಿದರು. ಬಿವಿಎ ವಿದ್ಯಾರ್ಥಿ ತಿಲಕ್ ಲೀಫ್ ಆರ್ಟ್ ಮೂಲಕ ಮಾಡಿದ ಕಲಾಕೃತಿಯನ್ನು ಕುಲಪತಿ ರಮೇಶ್ ಅವರಿಗೆ ಅರ್ಪಣೆ ಮಾಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.