Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ಸೈಕ್ಲಿಂಗ್ ಫಾರ್ ಹ್ಯುಮಾನಿಟಿ ವಿಶೇಷ ಕಾರ್ಯಕ್ರಮ
    alvas nudisiri

    ಆಳ್ವಾಸ್‌ನಲ್ಲಿ ಸೈಕ್ಲಿಂಗ್ ಫಾರ್ ಹ್ಯುಮಾನಿಟಿ ವಿಶೇಷ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎಂ.ಕಾಂ. ಹೆಚ್‌ಆರ್‌ಡಿ ವಿಭಾಗದ ವತಿಯಿಂದ ‘ಸೈಕ್ಲಿಂಗ್ ಫಾರ್ ಹ್ಯುಮಾನಿಟಿ’ ವಿಶೇಷ ಕಾರ‍್ಯಕ್ರಮ ನಡೆಯಿತು.

    Click Here

    Call us

    Click Here

    ಸೈಕಲ್ ಸವಾರಿಯ ಮೂಲಕ ಸಾಮಾಜಿಕ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಮಣಿಪುರ ಮೂಲದ ಸೈಕಲ್ ಸವಾರ ಫಿಲೆಮ್ ರೋಹನ್ ಸಿಂಗ್ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಭಾಗವಹಿಸಿದ್ದರು.

    ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಫಿಲೆಮ್ ರೋಹನ್ ಸಿಂಗ್, ನಾವು ಮಾಡುವ ಕೆಲಸಗಳು ಇತರರ ಮೇಲೆ ಪ್ರಭಾವ ಬೀರುವಂತಿರಬೇಕು. ಯಾವುದೇ ನಿರೀಕ್ಷೆ ಇಲ್ಲದೆ ಇತತರಿಗೆ ಸಹಾಯ ಮಾಡಬೇಕು ಎಂದರು. ತಮ್ಮ ಜೀವನಾನುಭವಗಳನ್ನು ಹಂಚಿಕೊಂಡ ರೋಹನ್ ಜೀವನದಲ್ಲಿ ಎದುರಾಗುವ ಸವಾಲುಗಳು ಹಾಗೂ ಅವುಗಳನ್ನು ಎದುರಿಸಬಹುದಾದ ವಿವಿಧ ಸಾಧ್ಯತೆಗಳನ್ನು ವಿವರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ನಾಳೆ ಏನು ಆಗಬಹುದು ಎಂಬ ಭಯದಲ್ಲಿ ಯಾರು ಇರುತ್ತರೋ ಅವರು ಯಾವುದೇ ಸಾಧನೆ ಮಾಡಲಾರರು. ಆದ್ದರಿಂದ ಪ್ರತಿಯೊಬ್ಬರು ಆ ಚೌಕಟ್ಟಿನಿಂದ ಹೊರಗೆ ಬರಬೇಕು ಸಣ್ಣ ಪುಟ್ಟ ಸಹಾಯ ಮಾಡುವುದರ ಮೂಲಕ ಕೆಲಸ ಪ್ರಾರಂಭಿಸಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಜೊನಿಟಾ ಡಿಸೋಜ ಸ್ವಾಗತಿಸಿ, ಮಹಿಮ ವಂದಿಸಿ, ಸ್ಟೆಫಿ ನಿರೂಪಿಸಿದರು.

    Click here

    Click here

    Click here

    Call us

    Call us

    ಫಿಲೆಮ್ ರೋಹನ್ ಸಿಂಗ್ ಮಣಿಪುರಿ ಮೂಲದ ಸೈಕಲ್ ಸವಾರರಾಗಿದ್ದು, ದೇಶಾದ್ಯಂತ ಸೈಕಲ್ ಸವಾರಿ ಮಾಡುವ ಮೂಲಕ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಮಣಿಪುರದ ಬಡ ಜನರಿಗಾಗಿ ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ತಮ್ಮದೇ ಟೀ-ಶರ್ಟ್ ತಯಾರಿಸಿ ಮಾರಾಟ ಮಾಡುತ್ತಿರುವ ಇವರು ಅದರಿಂದ ಬಂದ ಹಣದಲ್ಲಿ ನಿರ್ಗತಿಕರಿಗೆ ಆಹಾರ, ವಸತಿ ಒದಗಿಸುವ, ಪರಿಸರ, ಮಾನವೀಯತೆಗಳ ಬಗ್ಗೆ ಜಾಗೃತಿ ಮೂಡಿಸುವ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಸೈಕ್ಲಿಂಗ್ ಮೂಲಕ ಜಾಗೃತಿ ಮೂಡಿಸುತ್ತಿರುವ ಇವರು ಇದುವರೆಗೆ ದೇಶದಾದ್ಯಂತ15000 ಕಿ.ಮೀ ಗೂ ಅಧಿಕ ದೂರ ಸಂಚರಿಸಿದ್ದಾರೆ.

    ಈ ಬಾರಿ ‘ಫೀಡಿಂಗ್ ದಿ ಹಂಗ್ರಿ’ ಧ್ಯೇಯವನ್ನಿಟ್ಟುಕೊಂಡು ಸೈಕಲ್ ಸವಾರಿ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಗ್ರಹವಾಗುವ ದೇಣಿಗೆಯ ಮೂಲಕ ನಿರ್ಗತಿಕರು, ವಲಸೆ ಕಾರ್ಮಿಕರನ್ನು ಸಲಹುವ ಉದ್ದೇಶವಿಟ್ಟುಕೊಂಡಿದ್ದಾರೆ. ಮಣಿಪುರದ ಇಂಫಾಲದಿಂದ ತಮ್ಮ ಪಯಣವನ್ನು ಆರಂಭಿಸಿರುವ ಇವರು ದಕ್ಷಿಣಕನ್ನಡದ ಮೂಡುಬಿದಿರೆಯಲ್ಲಿ ಈ ಬಾರಿಯ ಸೈಕಲ್ ಸವಾರಿಯನ್ನು ಕೊನೆಗೊಳಿಸಲಿದ್ದಾರೆ. ಕೊರೊನಾ ಎರಡನೇ ಅಲೆಯ ಕಾರಣದಿಂದ ಅಭಿಯಾನವನ್ನು ಮೊಟಕುಗೊಳಿಸಿದ್ದೇನೆಂದು ಅವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.