Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಕೋವಿಡ್ ನೆಪದಲ್ಲಿ ಸ್ಥಳಾಂತರಿಸುವ ಹಿಂದೆ ಹುನ್ನಾರ ಅಡಗಿದೆ: ಎಂಎಲ್‌ಸಿ ಕೆ. ಪ್ರತಾಪಚಂದ್ರ ಶೆಟ್ಟಿ ಆರೋಪ
    ಊರ್ಮನೆ ಸಮಾಚಾರ

    ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಕೋವಿಡ್ ನೆಪದಲ್ಲಿ ಸ್ಥಳಾಂತರಿಸುವ ಹಿಂದೆ ಹುನ್ನಾರ ಅಡಗಿದೆ: ಎಂಎಲ್‌ಸಿ ಕೆ. ಪ್ರತಾಪಚಂದ್ರ ಶೆಟ್ಟಿ ಆರೋಪ

    Updated:29/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ 19 ರೋಗಿಗಳಿಗೆ ಮಾತ್ರ ಮೀಸಲಿಟ್ಟು, ಏಕಾಏಕಿಯಾಗಿ ಆಸ್ಪತ್ರೆಯ ಹೊರರೋಗಿ ಹಾಗೂ ಒಳರೋಗಿ ವಿಭಾಗವನ್ನು ಉಡುಪಿ ಜಿಲ್ಲಾಸ್ಪತ್ರಗೆ ಸ್ಥಳಾಂತರಿಸಿರುವುದು ಖಂಡನೀಯ ಹಾಗೂ ಜನವಿರೋಧಿ ಕ್ರಮವಾಗಿದ್ದು ಈ ನಿರ್ಧಾರದ ಹಿಂದೆ ಸ್ಥಳೀಯ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸುವಂತೆ ಮಾಡುವ ಹುನ್ನಾರ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಆರೋಪಿಸಿದ್ದಾರೆ.

    Click Here

    Call us

    Click Here

    ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಎ.28ರಂದು ಎರಡನೇ ಭಾರಿಗೆ ವಿವರವಾದ ಪತ್ರ ಬರೆದಿರುವ ಅವರು ಈ ಜನವಿರೋಧಿ ಕ್ರಮವು ಹೀಗೆಯೇ ಮುಂದುವರಿದರೆ ಅದರ ವಿರುದ್ದ ಜನಭಿಪ್ರಾಯ ಮೂಡಿಸುವುದರೊಂದಿಗೆ ಸೂಕ್ತ ವೇದಿಕೆಯಲ್ಲಿ ನಿರಂತರವಾಗಿ ಪ್ರತಿಭಟನೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

    ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ 30,444 ಜನಸಂಖ್ಯೆಯಿದ್ದು, ಪುರಸಭೆಯನ್ನು ಹೊರತುಪಡಿಸಿ ಕುಂದಾಪುರ ತಾಲೂಕಿನ ಇತರೆ ಪ್ರದೇಶಗಳು 2,23,296 ಜನಸಂಖ್ಯೆಯಿದೆ. ಪುರಸಭೆ ಸೇರಿದಂತೆ ಆಸುಪಾಸಿನ ಗ್ರಾಮಗಳ ಬಡ ಹಿಂದುಳಿದ ಜನರು ತಮ್ಮ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ಆಶ್ರಯಿಸಿರುತ್ತಾರೆ ಹಾಗೂ ಸುತ್ತಮುತ್ತಲಿನ 24 ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಕೂಡ ಈ ಆಸ್ಪತ್ರೆಯನ್ನು ಅವಲಂಬಿಸಿರುತ್ತಾರೆ. ಆದರೆ ಕೋವಿಡ್ ನೆಪ ನೀಡಿ ಸಾಮಾನ್ಯ ರೋಗಿಗಳಿಗೆ ದೂರದ ಜಿಲ್ಲಾಸ್ಪತ್ರೆಗೆ ಗೋಗುವ ಅನಿವಾರ್ಯತೆ ಸೃಷ್ಟಿಸಿರುವುದು, ಆರ್ಥಿಕವಾಗಿ ಹಿಂದುಳಿದ ಬಡರೋಗಿಗಳು ತಮ್ಮ ಚಿಕಿತ್ಸೆಗಾಗಿ ಅನಿವಾರ್ಯವಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಯನ್ನೇ ಅವಲಂಬಿಸುವಂತೆ ಮಾಡುವ ಹುನ್ನಾರವೆಂಬಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದವರು ಆರೋಪಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕುಂದಾಪುರ ತಾಲೂಕು ಹೊರತುಪಡಿಸಿ ಉಡುಪಿ, ಕಾರ್ಕಳ ತಾಲೂಕು ಆಸ್ಪತ್ರೆಗಳಲ್ಲಿ ಸಾಮಾನ್ಯ ರೋಗಿಗಳು ಹಾಗೂ ಕೋವಿಡ್ 19 ರೋಗಿಗಳಿಗೆ ಸಮಾನ ಅವಕಾಶ ನೀಡಿ ಪ್ರತ್ಯೇಕವಾಗಿ ಅಗತ್ಯ ನುರಿತ ವೈದ್ಯರು ಹಾಗೂ ವ್ಯದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ವಿಭಾಗ ಮಟ್ಟದ ಆಸ್ಪತ್ರೆಯಾಗಿರುವ ಕುಂದಾಪುರದಲ್ಲಿ ಮಾತ್ರ ಇದಕ್ಕೆ ವ್ಯತಿರಿತ್ತವಾಗಿ, ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಅದೇ ಆಸ್ಪತ್ರೆಯ ಹೊಸಕಟ್ಟಡವು 250ರಿಂದ 300 ಹಾಸಿಗಳನ್ನು ಹೊಂದಿ ಕೋವಿಡ್ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದ್ದರೂ ಕೂಡ ದುರುದ್ದೇಶಪೂರ್ವಕವಾಗಿ ಒಳರೋಗಿ ಮತ್ತು ಹೊರರೋಗಿ ವಿಭಾಗವನ್ನೇ ಉಡುಪಿಗೆ ಸ್ಥಳಾಂತರಿಸಲಾಗಿದೆ ಸರ್ಕಾರೀ ಆಸ್ಪತ್ರೆಯ ಹೊರಗೆ ಪ್ರತ್ಯೇಕವಾಗಿ ಕೋವಿಡ್ ಆಸ್ಪತ್ರೆಗಳನ್ನು ವ್ಯವಸ್ಥೆಗೊಳಿಸಿದ ನಿದರ್ಶಗಳಿವೆಯೇ ಹೊರತು ಕೋವಿಡ್ ಕೇಂದ್ರಕ್ಕಾಗಿ ಇರುವ ಸರ್ಕಾರೀ ಆಸ್ಪತ್ರೆಯನ್ನೇ ಹೊರಗಟ್ಟಿರುವುದು ಎಲ್ಲಿಯೂ ಕಂಡು ಬರುವುದಿಲ್ಲ ಇಂತಹ ಸ್ವೇಚ್ಚಾರದ, ಭ್ರಷ್ಟಾಚಾರಕ್ಕೆ ಆಸ್ಪದ ನೀಡುವ ಈ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    ಸರ್ಕಾರೀ ಆಸ್ಪತ್ರೆ ಇರುವುದು ಜನರ ಸೇವೆಗಾಗಿಯೇ ಹೊರತು ಖಾಸಗಿ ಆಸ್ಪತ್ರೆಗಳ ಅನುಕೂಲಕ್ಕಾಗಿ ಅಲ್ಲ ಎನ್ನುವುದು ಗಮದಲ್ಲಿರಿಸಿಕೊಂಡು ಈ ಸ್ವೇಚ್ಚಾರದ ನಿಯಮಬಾಹಿರ ಜನವಿರೋಧಿ ಕ್ರಮವನ್ನು ತುರ್ತಾಗಿ ಸರಿಪಡಿಸುದರೊಂದಿಗೆ ಕುಂದಾಪುರ ಸರ್ಕಾರೀ ಅಸ್ಪತ್ರೆಯ ಹೊಸ ಕಟ್ಟಡವನ್ನು ಕೋವಿಡ್ 19 ರೋಗಿಗಳಿಗೆ ಮಾತ್ರ ಮೀಸಲಿರಿಸಿ ಆಸ್ಪತ್ರೆಯ ಹೊರರೋಗಿ ಮತ್ತು ಒಳರೋಗಿ ವಿಭಾಗಳನ್ನು ಹಳೆಯ ಬ್ಲಾಕ್ ಕಟ್ಟಡದಲ್ಲಿಯೇ ಹಿಂದಿನ ವರ್ಷಗಳಂತೆಯೇ ಮುಂದುವರಿಸಿ ಸಾಮಾನ್ಯ ರೋಗಿಗಳ ಚಿಕಿತ್ಸೆಗಾಗಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲು ಅಗತ್ಯ ಕ್ರಮ ವಹಿಸುವಂತೆ ಅವರು ಆಗ್ರಹಿಸಿದ್ದಾರೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.