Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕುಡಿಯುವ ನೀರು ಸರಬರಾಜು
    ಊರ್ಮನೆ ಸಮಾಚಾರ

    ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕುಡಿಯುವ ನೀರು ಸರಬರಾಜು

    Updated:11/05/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಾಲೂಕಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ, ಅಳ್ವೆಕೋಡಿ, ಬೆಸ್ಕೂರು, ಸುಬ್ಬರಾಡಿ ಭಾಗದ ಸುಮಾರು 350 ಮನೆಗಳಿಗೆ ಮಳೆಗಾಲ ಆರಂಭದ ತನಕ ಉಚಿತ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಮಂಗಳವಾರ ಚಾಲನೆ ನೀಡಲಾಯಿತು.

    Click Here

    Call us

    Click Here

    ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಮುದ್ರ ತಟದ ಬೆಸ್ಕೂರಿನಿಂದ ತಾರಾಪತಿಯ ತನಕ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಅಗತ್ಯವಿದ್ದು, ಪಂಚಾಯತ್ ಮೂಲಕ ಮಾಡುವ ಕಾರ್ಯವನ್ನು ಟ್ರಸ್ಟ್ ಸ್ವಇಚ್ಛೆಯಿಂದ ಪೂರೈಸುತ್ತಿರುವುದು ನಿಜಕ್ಕೂ ಶ್ಲಾಘನಾರ್ಹ ಕಾರ್ಯವಾಗಿದೆ. ಟ್ರಸ್ಟ್‌ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರ ಕಾರ್ಯಕ್ಕೆ ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಗುವುದು ಎಂದರು.

    ಈ ಸಂದರ್ಭ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಮಾತನಾಡಿ ಕಳೆದ ಭಾರಿ ಬಿಜೂರು ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾದಾಗ ಟ್ರಸ್ಟ್ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡಲಾಗಿತ್ತು. ಈ ಬೆಸಿಗೆಯಲ್ಲಿ ಮಳೆಯಾಗಿದ್ದರಿಂದ ಅಲ್ಲಿ ಅತಿ ಅಗತ್ಯ ಇರುವಲ್ಲಿ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. ಅಳ್ವೆಕೋಡಿ, ತಾರಾಪತಿ, ಬೆಸ್ಕೂರು ಭಾಗಕ್ಕೆ ಹೆಚ್ಚಿನ ಅಗತ್ಯ ಕಂಡುಬಂದ ಹಿನ್ನೆಲೆಯಲ್ಲಿ, ಗ್ರಾಮಸ್ಥರ ಮನವಿಯ ಮೇರೆಗೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    ಉದ್ಯಮಿ ಗುರುರಾಜ ಪಂಜು ಪೂಜಾರಿ, ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಪೂಜಾರಿ, ಶ್ರೀ ರಾಮ ಭಜನಾ ಮಂದಿರದ ಗೌರವಾಧ್ಯಕ್ಷ ಮಾಧವ ಖಾರ್ವಿ, ಅಧ್ಯಕ್ಷರಾದ ರವೀಂದ್ರ ಖಾರ್ವಿ, ಸ್ಥಳೀಯರಾದ ಸುರೇಶ್ ದೇವಾಡಿಗ, ನಾಗೇಶ್ ಖಾರ್ವಿ, ವೀರಭದ್ರ ಖಾರ್ವಿ, ಪ್ರಸಾದ್ ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.

    ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ, ಅಳ್ವೆಕೋಡಿ, ಬೆಸ್ಕೂರು, ಸುಬ್ಬರಾಡಿ ಭಾಗದ ಸುಮಾರು 350 ಮನೆಗಳಿಗೆ ಪ್ರತಿನಿತ್ಯ ಎರಡು ಪ್ರತ್ಯೇಕ ವಾಹನಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    9 − 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.