Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಡಲ ಅಲೆಗಳ ರುದ್ರ ನರ್ತನ: ಮನೆ, ದೋಣಿಗೆ ಹಾನಿ. ಬೈಂದೂರು ಶಾಸಕರ ಭೇಟಿ
    ಊರ್ಮನೆ ಸಮಾಚಾರ

    ಕಡಲ ಅಲೆಗಳ ರುದ್ರ ನರ್ತನ: ಮನೆ, ದೋಣಿಗೆ ಹಾನಿ. ಬೈಂದೂರು ಶಾಸಕರ ಭೇಟಿ

    Updated:15/05/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ’ತೌಕ್ತೇ ಚಂಡಮಾರುತದ ಪರಿಣಾಮ ಶನಿವಾರ ಬಿರುಸಿನ ಗಾಳಿ ಮಳೆ ಮತ್ತು ಪ್ರಬಲ ಕಡಲ್ಕೊರೆತ ಮುಂದುವರೆದಿದೆ. ಚಂಡಮಾರುತ ಪ್ರಭಾವ ಈ ಭಾಗದ ಕರಾವಳಿ ತೀರದುದ್ದಕ್ಕೂ ತಟ್ಟಿದೆ. ಕಡಲ ಅಲೆಗಳ ರುದ್ರನರ್ತನ ಮನೆ, ಮೀನುಗಾರಿಕಾ ದೋಣಿಗಳಿಗೆ ಅಪಾರ ಹಾನಿ ಉಂಟು ಮಾಡಿದೆ.

    Click Here

    Call us

    Click Here

    ಹೊಸಾಡು ಗ್ರಾಮದ ಕಂಚುಗೋಡು ಪರಿಸರದಲ್ಲಿ ಕಡಲ್ಕೊರೆತದ ತೀವ್ರತೆ ಮತ್ತಷ್ಟು ಹೆಚ್ಚಾಗಿದ್ದು, ಕಂಚುಗೋಡು ಶ್ರೀ ರಾಮ ಮಂದಿರದ ಸಮೀಪದ ನಿವಾಸಿ ಕೊಲ್ಲೂರು ಸಂಜೀವ ಖಾರ್ವಿ ಮನೆಯ ವಠಾರದಲ್ಲಿದ್ದ ಸುಮಾರು 15ಕ್ಕೂ ಮಿಕ್ಕಿ ತೆಂಗಿನ ಮರಗಳು ಉರುಳಿ ಬಿದ್ದು ಸಮುದ್ರ ಪಾಲಾಗಿದ್ದು, ಇವರ ವಾಸ್ತವ್ಯದ ಮನೆ ಸಮುದ್ರ ಪಾಲಾಗುವ ಸಾಧ್ಯತೆ ಇದೆ. ಇದೇ ಪರಿಸರದಲ್ಲಿ ಕಡಲ ತೀರದ ಸನಿಹದಲ್ಲಿರುವ ಸುಮಾರು 10 ಕ್ಕೂ ಮಿಕ್ಕಿ ಮೀನುಗಾರರ ಮನೆಗಳು ಕಡಲ್ಕೊರೆತದ ಭೀತಿ ಎದುರಿಸುತ್ತಿದೆ. ತೀರದಲ್ಲಿ ನಿಲ್ಲಿಸಿದ್ದ ಎರಡು ದೋಣಿಗಳಿಗೂ ಹಾನಿಯಾಗಿದೆ.

    ► ತೌಕ್ತೇ ಚಂಡಮಾರುತದ ಅಬ್ಬರ: ಹೆಚ್ಚಿದ ಕಡಲ್ಕೋರೆತ, ನದಿ ತೀರದ ಪ್ರದೇಶದಲ್ಲಿ ನೆರೆ – https://kundapraa.com/?p=48195 .

    ಗಂಗೊಳ್ಳಿ ಗ್ರಾಮದ ಬೇಲಿಕೇರಿ, ಮಲ್ಯರಬೆಟ್ಟು, ಖಾರ್ವಿಕೇರಿ, ಲೈಟ್ಹೌಸ್, ಸಾಂತಯ್ಯನಕೇರಿ ಪ್ರದೇಶಗಳಲ್ಲಿ ಕಡಲ ಆರ್ಭಟ ಹೆಚ್ಚಾಗಿದ್ದು, ಕಡಲಿನ ರಕ್ಕಸ ಅಲೆಗಳು ಒಂದರ ಮೇಲೊಂದರಂತೆ ತೀರಕ್ಕೆ ಅಪ್ಪಳಿಸುತ್ತಿದೆ. ಕಡಲ ಕೊರೆತ ತಡೆಯಲು ನಿರ್ಮಿಸಲಾಗಿರುವ ತಡೆಗೋಡೆಯನ್ನು ದಾಟಿ ಸಮುದ್ರದ ನೀರು ತೀರ ಪ್ರದೇಶಗಳಲ್ಲಿನ ಮನೆಗಳತ್ತ ಮುನ್ನುಗ್ಗುತ್ತಿದೆ. ತೀರದಲ್ಲಿ ನಿಲ್ಲಿಸಲಾಗಿದ್ದ ದೋಣಿಗಳನ್ನು ಮೀನುಗಾರರು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದಾರೆ. ತೀರದಲ್ಲಿ ಮೀನುಗಾರರು ನಿರ್ಮಿಸಿಕೊಂಡಿರುವ ಶೆಡ್ಗಳು ಕಡಲ ಪಾಲಾಗಿದ್ದು, ಬಲೆ ಮತ್ತಿತರ ಸಲಕರಣೆಗಳು ಕಡಲ ಒಡಲು ಸೇರಿಕೊಂಡಿದೆ.

    Click here

    Click here

    Click here

    Click Here

    Call us

    Call us

    ಗುಜ್ಜಾಡಿ ಗ್ರಾಮದ ಬೆಣ್ಗೆರೆ ಪರಿಸರದಲ್ಲಿ ಕೂಡ ಕಡಲಿನ ಅಬ್ಬರ ಜೋರಾಗಿದ್ದು, ಸುಮಾರು 8-9 ಮನೆಗಳು ಅಪಾಯದಂಚಿನಲ್ಲಿದೆ. ಕಡಲ ಆರ್ಭಟ ಹೆಚ್ಚಾಗುತ್ತಿದ್ದಂತೆಯೇ ಮೀನುಗಾರರು ಮೀನುಗಾರಿಕಾ ದೋಣಿಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದಾರೆ. ಚಂಡಮಾರುತದ ಪರಿಣಾಮ ಕಡಲು ರಕ್ಕಸ ಅಲೆಗಳು ಏಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ.

    ಕಡಲ್ಕೊರೆತ ಸಂಭವಿಸಿದ ಪ್ರದೇಶಗಳಿಗೆ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ತಹಶೀಲ್ದಾರ್ ಆನಂದಪ್ಪ ನಾಯ್ಕ್, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ವಂಡ್ಸೆ ಹೋಬಳಿ ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಸ್ಥಳೀಯ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ.

    ► ಮರವಂತೆ: ಏರುಗತಿಯಲ್ಲಿ ಸಾಗಿದ ಅಲೆಗಳ ಆರ್ಭಟ. ಆತಂಕದಲ್ಲಿ ಮೀನುಗಾರರು – https://kundapraa.com/?p=48188 .

    * ಚಂಡಮಾರುತ ಪರಿಣಾಮ ಗಂಗೊಳ್ಳಿಯಿಂದ ಶಿರೂರು ತನಕ ಕಡಲ ತೀರದಲ್ಲಿ ಕಡಲ್ಕೊರೆತ, ಕಡಲಿನ ಅಲೆಗಳ ಅಬ್ಬರಕ್ಕೆ ವ್ಯಾಪಕ ಹಾನಿ ಉಂಟಾಗಿದೆ. ಕಡಲ ತೀರದ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಚಂಡಮಾರುತದಿಂದ ಆದ ಹಾನಿ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಮಾಹಿತಿ ನೀಡಿ ತುರ್ತು ಕ್ರಮಗಳ ಮತ್ತು ಪರಿಹಾರದ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು – ಬಿ. ಎಂ. ಸುಕುಮಾರ್ ಶೆಟ್ಟಿ, ಶಾಸಕರು, ಬೈಂದೂರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    thirteen − seven =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.