Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಂಗಾರು ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಮುಂಗಾರು ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ: ಜಿಲ್ಲಾಧಿಕಾರಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಗೆ ಇನ್ನು 2 ರಿಂದ 3 ದಿನದಲ್ಲಿ ಮುಂಗಾರು ಪ್ರವೇಶವಾಗುವ ಸಂಭವವಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.

    Click Here

    Call us

    Click Here

    ಅವರು ವೀಡಿಯೋ ಸಂವಾದದ ಮೂಲಕ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಮಳೆಯ ಸಮಯದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಅಗತ್ಯ ಸೂಚನೆ, ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಕುರಿತು ಮತ್ತೊಮ್ಮೆ ಪರಿಶೀಲಿಸಿ, ರಾಜಕಾಲುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಿ. ಚರಂಡಿ ಮತ್ತು ರಾಜ ಕಾಲುವೆಗಳಿಂದ ಮೇಲೆತ್ತಿದ್ದ ಮಣ್ಣನ್ನು ಸೂಕ್ತ ರೀತಿಯಲ್ಲಿ ಬೇರೆಡೆಯಲ್ಲಿ ವಿಲೇವಾರಿ ಮಾಡಿ ಎಂದು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಗ್ರಾಮಗಳಲ್ಲಿ 24*7 ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಸಿದ್ಧವಾಗಿಟ್ಟುಕೊಳ್ಳಿ. ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ನಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವತೆ ಹಾಗೂ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿರುವಂತೆ ಸೂಚನೆ ನೀಡಿದರು.

    ಅರಣ್ಯ ಇಲಾಖೆಯಿಂದ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಲು ಅಗತ್ಯವಿರುವ ಎಲ್ಲಾ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಅರೋಗ್ಯ ಇಲಾಖೆ ವತಿಯಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ದಂತಹ ರೋಗಗಳು ಹರಡದಂತೆ ಎಚ್ಚರವಹಿಸಿ. ಈ ಬಗ್ಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೂಚನೆ ನೀಡುವಂತೆ ತಿಳಿಸಿದರು. ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ಧವಾಗಿರುವಂತೆ ಅಗ್ನಿಶಾಮಕ ಇಲಾಖೆಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಗೃಹರಕ್ಷಕ ದಳ ಸಿಬ್ಬಂದಿಗಳು ಸಹ ತುರ್ತು ಸೇವೆಗೆ ಲಭ್ಯವಿರುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಕಡಿತ ಉಂಟಾದಲ್ಲಿ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಿ. ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ತಂತಿಯಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರವಹಿಸಿ ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಮೀನುಗಾರಿಕೆಗೆ ಮೇ 31 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ನಂತರ ಬಂದರಿನಲ್ಲಿ ಮೀನುಗಾರಿಕೆ ನಡೆಸಿದಲ್ಲಿ ಸಂಬದಪಟ್ಟವರ ವಿರುದ್ಧ ಎಪಿಡೆಮಿಕ್ ಕಾಯಿದೆ ಹಾಗೂ ಮೀನುಗಾರಿಕಾ ಆದೇಶ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸುವಂತೆ ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಈ ಬಗ್ಗೆ ಪರಿಶೀಲನೆ ನಡೆಸುವಂತೆ ತಹಸೀಲ್ದಾರ್ಗಳಿಗೆ ಸೂಚನೆ ನೀಡಿದರು.

    ಕಲ್ಲುಕೋರೆಗಳಲ್ಲಿ ನೀರು ತುಂಬಿ ಜೀವಹಾನಿ ಸಂಭವಿಸಿದ್ದಲ್ಲಿ ಸಂಬದಪಟ್ಟ ಕೋರೆಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಅವಧಿ ಮುಗಿದ ಕೋರೆಗಳ ಬಳಿ ಗಣಿ ಇಲಾಖೆ ವತಿಯಿಂದ ಸೂಕ್ತ ಬೇಲಿ ಹಾಗೂ ಎಚ್ಚರಿಕೆ ಫಲಕ ಅಳವಡಿಸಬೇಕು. ಅನಾಹುತ ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಗಣಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕೃಷಿ ಹೊಂಡಗಳ ಬಳಿ ಸಹ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಮಳೆಯಿಂದ ಜೀವಹಾನಿ, ಜಾನುವಾರು ಹಾನಿಯಾದಲ್ಲಿ ಕೂಡಲೇ ಪರಿಹಾರ ವಿತರಿಸುವಂತೆ ಎಲ್ಲಾ ತಹಸೀಲ್ದಾರ್ಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಪರಿಹಾರ ವಿತರಣೆಗೆ ಹಣದ ಕೊರತೆಯಿಲ್ಲ. ಎಲ್ಲಾ ತಹಸೀಲ್ದಾರ್ಗಳು ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಜಿಲ್ಲಾಧಿಕಾರಿ ಕಚೇರಿಯಿಂದ ಪಡೆಯುವಂತೆ ಹಾಗೂ ಬೆಳೆ ಹಾನಿ ಸಂಭವಿಸಿದ್ದಲ್ಲಿ ಸೂಕ್ತ ರೀತಿಯಲ್ಲಿ ಅಂದಾಜು ನಷ್ಟದ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

    ಕುಂದಾಪುರ ಫ್ಲೈ ಓವರ್ ಕೆಳಗೆ ನೀರು ನಿಲ್ಲದ ಹಾಗೆ ತಕ್ಷಣ ಸೂಕ್ತ ಕ್ರಮ ಕೈಗೊಂಡು, ನೀರು ಸರಾಗವಾಗಿ ಹರಿದುಹೋಗಲು ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿ, ಸರ್ವಿಸ್ ರಸ್ತೆಗಳಲ್ಲಿ ಸಹ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಸ್ಥಳಾಂತರಿಸಲು ಅಗತ್ಯವಿರುವ ದೋಣಿಗಳು, ಮುಳುಗು ತಜ್ಞರು ಮತ್ತು ಪರಿಣಿತ ಈಜುಗಾರರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಕಾಳಜಿ ಕೇಂದ್ರಗಳನ್ನು ತೆರೆಯಲು ಅನುಕೂಲವಾಗುವಂತೆ ಶಾಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಸೈಕ್ಲೋನ್ ಸೆಂಟರ್ಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸದಾ ಸನ್ನದ್ಧವಾಗಿ ಕೇಂದ್ರಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಕರಾವಳಿ ಕಾವಲು ಪಡೆಯಿಂದ ಪ್ರಾಕೃತಿಕ ವಿಕೋಪ ತಡೆಯಲು ತರಬೇತುಗೊಂಡ ತಂಡ ಇದ್ದು, ಬೋಟ್ಗಳು ಸಹ ಇವೆ. ಎಲ್ಲಾ ಮೀನುಗಾರರಿಗೆ ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ ತಿಳಿಸಿದರು. ಪೊಲೀಸ್ ಇಲಾಖೆ ವತಿಯಿಂದ ಪ್ರಾಕೃತಿಕ ವಿಕೋಪ ತಡೆಗೆ ತರಬೇತುಗೊಂಡ ಪೋಲಿಸ್ನ 10 ತಂಡಗಳು ಇದ್ದು, ಯಾವುದೇ ಸಂದರ್ಭದಲ್ಲಿ ಲಭ್ಯವಿರುವುದಾಗಿ ಎಎಸ್ಪಿ ಕುಮಾರ ಚಂದ್ರ ತಿಳಿಸಿದರು.

    ವೀಡಿಯೋ ಸಂವಾದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.