Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಲು ಕಳೆದುಕೊಂಡಿದ್ದ ಬಿದಿನಾಯಿಗಾಗಿ ಗಾಲಿ ರೆಡಿ ಮಾಡಿದ ವಿದ್ಯಾರ್ಥಿನಿ
    ಊರ್ಮನೆ ಸಮಾಚಾರ

    ಕಾಲು ಕಳೆದುಕೊಂಡಿದ್ದ ಬಿದಿನಾಯಿಗಾಗಿ ಗಾಲಿ ರೆಡಿ ಮಾಡಿದ ವಿದ್ಯಾರ್ಥಿನಿ

    Updated:23/06/20211 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಸ್ತೆ ಬದಿಯ ನಾಯಿಗಳು ಸ್ವಲ್ಪ ಹಿಂದೆ ಬಂದರೆ ಸಾಕು ದೂರ ಓಡಿಸುವವರ ಮಧ್ಯೆ ಅಪಘಾತಕ್ಕೀಡಾಗ ಎರಡೂ ಕಾಲುಗಳ ಬಲಕಳೆದುಕೊಂಡು ಬಿದ್ದಿದ್ದ ನಾಯಿಮರಿಯೊಂದಕ್ಕೆ ವಿದ್ಯಾರ್ಥಿನಿಯೋರ್ವಳು ಮರುಜನ್ಮ ನೀಡಿದ್ದಾಳೆ. ಅನ್ನ ಆಹಾರ ನೀಡಿ ಸಲಹಿದ್ದಲ್ಲದೇ ತೆವಳಿಕೊಂಡು ಸಾಗುತ್ತಿದ್ದ ನಾಯಿಮರಿ ಮತ್ತದೆ ಹುಮ್ಮಸ್ಸಿನಿಂದ ಓಡಾಡುವಂತೆ ಮಾಡಿ ಎಲ್ಲರ ಮೆಚ್ಚುಗೆಗೂ ಪಾತ್ರರಾಗಿದ್ದಾಳೆ.

    Click Here

    Call us

    Click Here

    ತಾಲೂಕಿನ ಮೂಡ್ಲಕಟ್ಟೆ ಇಂಜನಿಯರಿಂಗ್ ಕಾಲೇಜಿನ ಎಂಬಿಎ ಅಂತಿಯ ವರ್ಷದ ವಿದ್ಯಾರ್ಥಿನಿ, ಹೊಸಂಗಡಿಯ ಕೆಪಿಸಿ ಉದ್ಯೋಗಿ ಕೆ. ರಾಮಸ್ವಾಮಿ ಅವರ ಮಗಳು ಪ್ರಿಯಾ ಎಂ.ಆರ್., ನಾಯಿ ಮರಿಗೆ ಮರುಜನ್ಮ ಪಾಲಿಸಿದ ಮಾತೃಹೃದಯಿ.

    ಹೊಸಂಗಡಿ ಕೆಪಿಸಿ ಕ್ವಾಟ್ರಸ್ ಸಮೀಪ ಮೇ ತಿಂಗಳಿನಲ್ಲಿ ನಾಯಿ ಮರಿಯೊಂದು ಅಪಘಾತವಾಗಿ ಕೂಗುತ್ತಿರುವುದನ್ನು ಪ್ರೀಯಾ ನೋಡಿದ್ದಾರೆ. ತಮ್ಮ ಮನೆಯಿಂದ ಸ್ವಲ್ವ ದೂರದಲ್ಲಿ ಇದ್ದುದರಿಂದ ಇವರೇ ಅದಕ್ಕೆ ಆಹಾರವನ್ನು ನೀಡಿ ಬಂದಿದ್ದರು. ಮರುದಿನ ಆ ನಾಯಿ ಮರಿ ತೆವಳಿಕೊಂಡೇ ಪ್ರೀಯಾ ಅವರ ಮನೆಗೆ ಹಿಂಬಾಲಿಸಿ ಬಂದಿತ್ತು. ಈ ಹೊತ್ತಿಗಾಗಲೇ ನಾಯಿಮರಿಯ ಹಿಂದಿನ ಎರಡೂ ಕಾಲಿಗೆ ಗಂಭೀರ ಗಾಯಗೊಂಡದ್ದಲ್ಲದೇ, ಸೊಂಟದ ಭಾಗ ಬಲ ಕಳೆದುಕೊಂಡಿತ್ತು. ಹೀಗೆ ಬಂದ ನಾಯಿಮರಿಗೆ ಪ್ರಥಮ ಚಿಕಿತ್ಸೆ ನೀಡಿ ಮನೆಯಲ್ಲೆ ಉಳಿಸಿಕೊಂಡು ಆರೈಕೆ ಮಾಡಿದರು. ಚಿಕಿತ್ಸೆಗೆ ಸ್ಪಂದಿಸಿದ ನಾಯಿ ಚೇತರಿಕೆ ಕಂಡರೂ ಓಡಾಡಲು ಆಗುತ್ತಿರಲಿಲ್ಲ.

    ಪ್ರಿಯಾ ಎಂ.ಆರ್.

    ತೆವಳುತ್ತಿದ್ದ ನಾಯಿಯನ್ನು ಓಡುವಂತೆ ಮಾಡಿದ ಪ್ರೀಯಾ:
    ನಾಯಿ ಮರಿಯ ಯಾತನೆ ನೋಡಿ ಮರುಗಿದ ಪ್ರೀಯಾ ತನ್ನ ತಂದೆಯ ಸಹಕಾರದೊಂದಿಗೆ ಅದು ಮತ್ತೆ ಓಡಾಡುವಂತೆ ಮಾಡಿದ್ದಾರೆ. ದುಬಾರಿ ಬೆಲೆಯ ಉಪಕರಣಗಳನ್ನು ಕೊಳ್ಳಲು ಸಾಧ್ಯವಿಲ್ಲ ಎಂದು ತಾವೇ ಯುಟ್ಯೂಬ್ ವಿಡಿಯೋ ಸಹಕಾರದಿಂದ ನಾಯಿ ಸಂಚರಿಸಲು ಗಾಲಿಯೊಂದನ್ನು ತಯಾರಿಸಿದ್ದಾರೆ.

    Click here

    Click here

    Click here

    Call us

    Call us

    ಎರಡು ಉದ್ದದ ಪಿಯುಸಿ ಪೈಪಿಗೆ ಹೊಟ್ಟೆ ಕೆಳಭಾಗಕ್ಕೆ ವೀ ಬೆಂಡ್ ಮತ್ತು ಹಿಂಭಾಗದಲ್ಲಿ ಬೆಂಡ್ ಪೈಪ್ ಜೋಡಿಸಿ ಸೊಂಟದ ಎರಡೂ ಬದಿಯಲ್ಲಿ ಪೈಪ್ ಜೋಡಿಸಿದರು. ನೆಲಕ್ಕೆ ಮುಖಮಾಡಿದ ಪೈಪಿಗೆ ಎರಡೂ ಕಡೆ ತೂತು ಕೊರೆದು ಬೋಲ್ಟ್ ನಟ್ ಅಳವಡಿಸಿ ಗಾಲಿ ಜೋಡಿಸಿ, ಕತ್ತಿನ ಬಳಿ ಬೆಲ್ಟ್ ಹಾಕಿ ಎದೆ ಭಾಗದಲ್ಲಿ ಬಿಗಿದು, ಹಿಂಗಾಲು ಬೆನ್ನಿನ ಹಿಂದಿನ ಪೈಪಿಗೆ ಆತುಕೊಳ್ಳುವಂತೆ ಮಾಡಿದರು. ಗಾಲಿಗಾಡಿ ನಾಯಿಗೆ ಕಟ್ಟಿ ಓಡಾಟ ಅಭ್ಯಾಸ ಕೂಡಾ ಮಾಡಿಸಿದರು. ನಾಯಿ ಈಗ ಗಾಲಿ ಗಾಡಿಯಲ್ಲಿ ಎಲ್ಲೆಂದರಲ್ಲಿ ಸಂಚರಿಸುತ್ತದೆ. ಪ್ರಿಯಾ ಅವರನ್ನು ಹಿಂಬಾಲಿಸುತ್ತದೆ.

    ಬೀದಿನಾಯಿಗೆ ಆರೈಕೆ ಮಾಡಿ ಅದಕ್ಕೆ ಮರುಜನ್ಮವನ್ನೇ ನೀಡಿದ ಪ್ರೀಯಾ ಅವರ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೊದಲಿಗೆ ನಾಯಿಯ ಯಾತನೆ ಕಂಡು ಬಳಿಕ ಅದು ಗಾಲಿಯ ಸಹಕಾರದೊಂದಿಗೆ ಓಡಾಡುತ್ತಿರುವುದನ್ನು ಕಂಡರೆ ಆರೈಕೆ ಮಾಡಿದವರ ಬಗ್ಗೆ ಒಂದು ಕೃತಜ್ಞತಾ ಭಾವ ಆವರಿಸಿಕೊಳ್ಳುವುದು ಸುಳ್ಳಲ್ಲ.


     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025

    1 Comment

    1. Raghavendra. C on 30/06/2021 6:20 pm

      evara contact number sigabahuda urgent ittu..

      Raghavendra C
      Thirthahalli
      9972274873

      Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.