Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯುತ್‌ಗಾಗಿ ಪಂಚಾಯತ್ ಎನ್‌ಓಸಿ ಪಡೆಯುವ ಸುತ್ತೋಲೆ ಹಿಂಪಡೆಯುತ್ತೇವೆ: ಸಚಿವ ವಿ. ಸುನಿಲ್ ಕುಮಾರ್
    ಊರ್ಮನೆ ಸಮಾಚಾರ

    ವಿದ್ಯುತ್‌ಗಾಗಿ ಪಂಚಾಯತ್ ಎನ್‌ಓಸಿ ಪಡೆಯುವ ಸುತ್ತೋಲೆ ಹಿಂಪಡೆಯುತ್ತೇವೆ: ಸಚಿವ ವಿ. ಸುನಿಲ್ ಕುಮಾರ್

    Updated:06/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಗ್ರಾಮೀಣ ಭಾಗದ ಜನರು ವಿದ್ಯುತ್ ಪಡೆದುಕೊಳ್ಳಲು ಪಂಚಾಯತಿ ನಿರಪೇಕ್ಷಣಾ ಪತ್ರ (ಎನ್‌ಓಸಿ) ಪಡೆದುಕೊಳ್ಳಬೇಕಾಗಿದ್ದು ಇದರಿಂದ ಜನಸಾಮಾನ್ಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿದ್ಯುತ್ ಇಲಾಖೆಯ ಈ ಸುತ್ತೋಲೆಯನ್ನು ಒಂದು ವಾರದೊಳಗೆ ವಾಪಾಸು ಪಡೆಯುವ ನಿರ್ಧಾರಕ್ಕೆ ಬರಲಾಗಿದ್ದು, ರಾಜ್ಯದಲ್ಲಿ ಎರಡೂವರೆ ಲಕ್ಷ ಜನರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಸೇನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಬೈಂದೂರು ಬಿಜೆಪಿ ಕಛೇರಿಗೆ ತೆರಳಿ ಭಾರತಾಂಭೆಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ದ.ಕ-ಉಡುಪಿ ಜಿಲ್ಲೆಯಲ್ಲಿನ ಸಿಂಗಲ್ ಫೇಸ್, ಲೋ ಓಲ್ಟೆಜ್ ಸಮಸ್ಯೆ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ತ್ವರಿತವಾಗಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು. ಗೋಳಿಹೊಳೆ ಸಬ್ ಸ್ಟೇಷನ್‌ಗೆ ಅರಣ್ಯ ಇಲಾಖೆಯ ತೊಡಕು ಇದ್ದು ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದರು. ರಾಜ್ಯದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಲು ಬೊಮ್ಮಾಯಿ ಸರಕಾರ ಬದ್ಧವಾಗಿದೆ ಎಂದ ಅವರು, ಉಡುಪಿ ಜಿಲ್ಲೆಯ ಮೂವರು ಸಚಿವರು ಸೇರಿಕೊಂಡು ಶಾಶ್ವತವಾಗಿ ಆಗಬೇಕಾದ ಕಾರ್ಯಗಳ ಬಗ್ಗೆ ಕಾಲಮಿತಿಯಲ್ಲಿ ಯೋಜನೆ ಹಾಕಿಕೊಳ್ಳುತ್ತೇವೆ ಎಂದರು.

    ಪೋಸ್ಟ್‌ರ್ ಹಚ್ಚುತ್ತಿದ್ದ, ಬ್ಯಾನರ್ ಕಟ್ಟುತ್ತಿದ್ದ ನನ್ನಂತ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಶಾಸಕನನ್ನಾಗಿ ಮಾಡಿದ ಪಕ್ಷ ಬಿಜೆಪಿ. ಕಾರ್ಕಳದ ಜನರು ಮೂರು ಭಾರಿ ಶಾಸಕನನ್ನಾಗಿ ಮಾಡಿದ್ದಾರೆ. ಇದೀಗ ಸಚಿವನನ್ನಾಗಿ ಮಾಡಿ ದೊಡ್ಡ ಇಲಾಖೆಯನ್ನು ಕೊಟ್ಟಿದ್ದಾರೆ. ಮುಂದೆ ಇರುವ ಸೀಮಿತ ಅವಧಿಯಲ್ಲಿ ಜನಪರವಾದ, ಹೊಸತನದ ಆಡಳಿತವನ್ನು ರಾಜ್ಯದ ಜನರ ಆಶೋತ್ತರವನ್ನು ಅರಿತು ಕೆಲಸ ಮಾಡುವ ಹಂಬಲವಿದೆ. ಬೈಂದೂರು ಹಾಗೂ ಕಾರ್ಕಳ ಕ್ಷೇತ್ರ ಭೌಗೋಳಿಕವಾಗಿ ಬೇರೆ ಬೇರೆಯಾಗಿದ್ದರೂ ಭಾವನೆ ಒಂದೇ. ಹಾಗಾಗಿ ಇಲ್ಲಿನ ಜನರ ಸಂಕಷ್ಟದ ಅರಿವು ನನಗಿದೆ. ಬೈಂದೂರು ಶಾಸಕರು ನಾನು ಸಚಿವನಾದ ತಕ್ಷಣ ಹಲವು ಬೇಡಿಕೆ ಇಟ್ಟಿದ್ದಾರೆ. ಅವುಗಳನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

    ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಬೈಂದೂರು ಅತ್ಯಂತ ಹಿಂದುಳಿದ ಕ್ಷೇತ್ರವಾಗಿದ್ದು ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಆಗಬೇಕಿದೆ. ಪ್ರಮುಖವಾಗಿ ೯೪ಸಿ, ಡಿಮ್ಡ್ ಫಾರೆಸ್ಟ್ ಸಮಸ್ಯೆಗಳು ಬಗೆಹರಿಯಬೇಕಿದೆ. ವಿದ್ಯುತ್ ಸಿಂಗಲ್ ಪೇಸ್ ಸಮಸ್ಯೆಗೂ ಮುಕ್ತಿ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಬೈಂದೂರು ಕ್ಷೇತ್ರದಲ್ಲಾದ ಕಾರ್ಯಗಳ ಬಗ್ಗೆ ಸಚಿವರಿಗೆ ತಿಳಿಸಲಾಗಿದೆ ಎಂದರು

    ಈ ಸಂದರ್ಭ ಸಚಿವರನ್ನು ಬೈಂದೂರು ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಯಿಲಾಡಿ ಮಾತನಾಡಿದರು. ಯೋಜನಾ ಆಯೋಗದ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಕಮಲೇಶ್, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಪ್ರಕಾಶ್ ಜಿಡ್ಡು ಇನ್ನಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ:
    ► ಬೈಂದೂರು ಸೇನೇಶ್ವರ ದೇವಸ್ಥಾನಕ್ಕೆ ಸಚಿವ ವಿ. ಸುನಿಲ್ ಕುಮಾರ್ ಭೇಟಿ – https://kundapraa.com/?p=52033 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    ten − 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.