Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಗಲಿದ ಅಜಾತಶತ್ರು ಬರೆಗುಂಡಿ ಶ್ರೀನಿವಾಸ ಚಾತ್ರ
    ವಿಶೇಷ ಲೇಖನ

    ಅಗಲಿದ ಅಜಾತಶತ್ರು ಬರೆಗುಂಡಿ ಶ್ರೀನಿವಾಸ ಚಾತ್ರ

    Updated:06/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ದಶಕಗಳಿಂದ ತಮ್ಮ ಉನ್ನತ ಸಂಸ್ಕಾರ, ಸಜ್ಜನಿಕೆ, ಸ್ನೇಹಶೀಲತ್ವದ ಮೂಲಕ ಸಮಾಜದ ಸರ್ವ ವರ್ಗದವರ ಪಾಲಿನ ಪ್ರೀತಿಗೆ ಪಾತ್ರರಾದವರು ಬರೆಗುಂಡಿ ಶ್ರೀನಿವಾಸ ಚಾತ್ರರು ನಮ್ಮನ್ನು ಅಗಲಿದರೂ ಅವರ ನೆನಪು ಅಮರವಾಗಿದೆ.

    Click Here

    Call us

    Click Here

    ವ್ಯಕ್ತಿತ್ವಗಳು ರಾಜಕೀಯ ಮತ್ತು ಧರ್ಮದ ಸಂಕುಚಿತತೆಗೆ ಒಳಗಾಗಿ, ಸೀಮಿತ ಸೀಮೆಗಳ ಒಳಗೆ ಬಂಧಿಯಾಗಿ, ಆಕರ್ಷಣೆ- ಪ್ರಭಾವ- ವ್ಯಾಪ್ತಿಗಳನ್ನು ಕಳೆದುಕೊಳ್ಳುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಸಮಾಜದಲ್ಲಿ ಪ್ರತ್ಯೇಕ ಅಸ್ತಿತ್ವ ಮತ್ತು ವ್ಯಕ್ತಿತ್ವವನ್ನು ಸುದೀರ್ಘ ಕಾಲದಿಂದ ಸ್ಥಾಪಿಸಿಕೊಂಡು ಬಂದಿದ್ದರು. ಸಾಮಾಜಿಕ- ಧಾರ್ಮಿಕ ನಾಯಕತ್ವಗಳ ಕಾಲಕಾಲದ ನಿರ್ಣಾಯಕ ಭೂಮಿಕೆಗಳನ್ನು ಸೊಗಸಾಗಿ ಮತ್ತು ಸುಸೂತ್ರವಾಗಿ ನಿಭಾಯಿಸಿದ ಹಿರಿಮೆ ಇವರದ್ದು. ಸದಾ ತಮಗಿಂತ ಕಿರಿಯರಿಗೆ ಆದರ, ಆಶ್ರಯ, ಅವಕಾಶಗಳನ್ನು ನೀಡುತ್ತಾ, ಶ್ರೇಯಸ್ಸನ್ನು ಹಾರೈಸುತ್ತಾ, ಹಿರಿತನದ ಸಿರಿ-ಸಿಹಿಗಳನ್ನು ಸಮನಾಗಿ ಸರ್ವರಿಗೂ ಹಂಚಿದವರು. ದೀರ್ಘಕಾಲದಿಂದ ಕೆಲ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅಗತ್ಯದ ಕಾಯಕ-ಕರ್ಮಗಳು ಯಥಾವತ್ತಾಗಿ ನೇರವೇರುವಂತೆ ನೋಡಿಕೊಂಡು, ಬದುಕಿನ ಕೊನೆಯವರೆಗೂ ಅಪಾರ ಬದ್ಧತೆಯನ್ನು ಮೆರೆದು ಮಾದರಿಯಾಗಿದ್ದಾರೆ.

    ಬದುಕಿನ ಸಂಧ್ಯಾಕಾಲದಲ್ಲೂ ಸದಾ ಚಟುವಟಿಕೆಯಿಂದಿದ್ದು ಯಾವ ಹಂತದಲ್ಲೂ ಜೀವನೋತ್ಸಾಹವನ್ನು ಕಳೆದುಕೊಂಡವರಲ್ಲ. ಸರಳತೆ, ಸಜ್ಜನಿಕೆ, ಸುಪಥಗಳಿಂದ ಕೂಡಿದ ಸಾರ್ಥಕವಾದ ಸುದೀರ್ಘ ಬದುಕಿನ ಪುಟಕ್ಕೆ ಇಂದು ಪೂರ್ಣವಿರಾಮ ಬಿದ್ದರೂ, ಶ್ರೀನಿವಾಸ ಚಾತ್ರರು ಬಿಟ್ಟುಹೋದ ನೆನಪು-ಆದರ್ಶಗಳು ಅಮರತ್ವವನ್ನು ಹೊಂದಲಿವೆ.

    – ಮುಷ್ತಾಕ್ ಹೆನ್ನಾಬೈಲ್

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

    06/09/2024

    ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

    01/02/2023

    ಉದ್ಯೋಗ ಸಂದರ್ಶನದ ತಯಾರಿಗೆ ಒಂದಿಷ್ಟು ಟಿಪ್ಸ್

    01/01/2023
    Leave A Reply Cancel Reply

    nine − four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.