Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತ ಶೈಕ್ಷಣಿಕ ವ್ಯವಸ್ಥೆ: ಪ್ರೋ. ಕರುಣಾಕರ್ ಕೊಟೇಗಾರ್
    ಊರ್ಮನೆ ಸಮಾಚಾರ

    ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತ ಶೈಕ್ಷಣಿಕ ವ್ಯವಸ್ಥೆ: ಪ್ರೋ. ಕರುಣಾಕರ್ ಕೊಟೇಗಾರ್

    Updated:16/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರಾಷ್ಟ್ರೀಯ ಶಿಕ್ಷಣ ನೀತಿ – 2020 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ ಮೂಲಕ ಆಸಕ್ತಿ-ಕೌಶಲ್ಯ ಆಧಾರಿತ ಕಲಿಕೆ ಹಾಗೂ ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ನಿಜಾರ್ಥದಲ್ಲಿ ಆಗಲಿದೆ ಎಂದು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಪ್ರೋ. ಕರುಣಾಕರ ಕೊಟೇಗಾರ್ ಹೇಳಿದರು.

    Click Here

    Call us

    Click Here

    ಅವರು ಗುರುವಾರ ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟೀಯ ಶಿಕ್ಷಣ ನೀತಿ ಕುರಿತು ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣ ವ್ಯವಸ್ಥೆ ಸರಿಯಿದ್ದಲ್ಲಿ ದೇಶ ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂಶಯವಿಲ್ಲ. ಎಳು ದಶಕಗಳ ಹಳೆಯದಾದ ಪಾಶ್ಚಾತ್ಯರ ಪಳೆಯುಳಿಕೆಯಂತಿರುವ ಶಿಕ್ಷಣ ನೀತಿಯು ಭಾರತೀಯರ ವ್ಯಕ್ತಿತ್ವನ್ನು ರೂಪಿಸಲು ಸಾಧ್ಯವಿಲ್ಲ. ಹಾಗಾಗಿಯೇ ದೇಶದಲ್ಲಿ ನೂತನ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ ಎಂದರು.

    ಅಂಕ ಗಳಿಸುವುದಕ್ಕಾಗಿ ಪಡೆಯುವ ಶಿಕ್ಷಣಕ್ಕೂ, ಅಂತಹ ಶಿಕ್ಷಣದ ಹೊರತಾಗಿ ಪಡೆಯುವ ಕೌಶಲ್ಯಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಈಗಿನ ಶಿಕ್ಷಣ ಪದ್ದತಿಯಲ್ಲಿ ವಿದ್ಯಾರ್ಥಿಗಳನ್ನು ಅಂಕಗಳಿಸುವ ಸರಕನ್ನಾಗಿ ರೂಪಿಸಲಾಗುತ್ತಿದೆ. ವಿದ್ಯಾವಂತರಾಗುತ್ತಲೇ ಜೀವನ ಕೌಶಲ್ಯ ಕಲಿಸುವುದು ಅತಿ ಮುಖ್ಯವಾಗಿದ್ದು, ಬಾಲ್ಯದಿಂದಲ್ಲೇ ವಿದ್ಯಾರ್ಥಿಯ ಆಸ್ತಕಿಯನ್ನು ಹಾಗೂ ಕಡ್ಡಾಯವಾಗಿ ಕಲಿಯಬೇಕಾದ ಅಂಶವನ್ನು ಗುರುತಿಸಿ ಕಲಿಸುವ ವ್ಯವಸ್ಥೆ ನೂತನ ಶಿಕ್ಷಣ ನೀತಿಯಲ್ಲಿ ಇರಲಿದೆ ಎಂದರು.

    ಕಾಲೇಜಿನ ಪ್ರಾಂಶಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಪ್ರಭಾ ಅಕಾಡೆಮಿಯ ಮುಖ್ಯಸ್ಥರಾದ ಭರತ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಕಾಲೇಜಿನ 11 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರೋ. ಕರುಣಾಕರ ಕೋಟೆಗಾರ್ ಹಾಗೂ ಭರತ್ ಶೆಟ್ಟಿ ಅವರನ್ನು ಗೌರವಿಸಲಾಯಿತು.

    ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇಂಟರ್ನಲ್ ಕ್ವಾಲಿಟಿ ಅಸೆಸ್ಮೆಂಟ್ ಸೆಲ್ ಕೋ-ಆರ್ಡಿನೇಟರ್ ಅವಿತಾ ಕೊರಿಯಾ ಉಪನ್ಯಾಸಕರನ್ನು ಪರಿಚಯಿಸಿದರು. ಉಪನ್ಯಾಸಕ ಸುಧಾಕರ ಪರಂಪಳ್ಳಿ ಸ್ವಾಗತಿಸಿದರು. ವಿಭಾಗದ ಉಪನ್ಯಾಸಕ ಪ್ರವೀಣ್ ಮೊಗವೀರ ವಂದಿಸಿದರು. ಉಪನ್ಯಾಸಕಿ ಆಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    • ಚಿತ್ರಗಳು: ಛಾಯಾ ಸ್ಟುಡಿಯೋ ಕುಂದಾಪುರ
    ಪ್ರೋ. ಕರುಣಾಕರ ಕೋಟೇಗಾರ್ ಅವರ ರಾಷ್ಟ್ರೀಯ ಶಿಕ್ಷಣ ನೀತಿ ಬಗೆಗಿನ ವೀಡಿಯೋ ಸರಣಿ
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    4 × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.