Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಂಗಿನ ಬೆಳೆಗೆ ಮಂಗನ ಕಾಟ; ರೈತರಿಗೆ ಸಂಕಟ
    ವಿಶೇಷ ವರದಿ

    ತೆಂಗಿನ ಬೆಳೆಗೆ ಮಂಗನ ಕಾಟ; ರೈತರಿಗೆ ಸಂಕಟ

    Updated:18/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಬೈಂದೂರು ಹಾಗೂ ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಂಬೆ-ಶಿರೂರು ಭಾಗದ ಜನರಿಗೆ ಮಂಗಗಳ ಉಪಟಳ ಬಾರಿ ಹೆಚ್ಚಾಗಿದ್ದು, ಗುಂಪು ಗುಂಪಾಗಿ ತೆಂಗಿನ ಮರಗಳ ತೋಟಕ್ಕೆ ಲಗ್ಗೆ ಇಟ್ಟು ಎಗ್ಗಿಲ್ಲದೇ ಎಳನೀರು ಕುಡಿದು ಎಸೆಯುತಿರುವುದು ರೈತಜನರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳಿದ್ದು, ಅವರು ತೋಟಗಳಿಲ್ಲಿ ಬೆಳೆದ ಸಿಯಾಳವನ್ನು ಸಾಲು ಸಾಲಾಗಿ ಲಗ್ಗೆ ಇಟ್ಟು ತಿಂದು ಎಲ್ಲೆಂದರಲ್ಲಿ ಎಸೆಯುತ್ತಿರುವುದಲ್ಲದೇ, ಓಡಿಸಲು ಹೊದರೆ ಮನುಷ್ಯರಿಗೆ ಹೆದರಿಸುತ್ತಿವೆ.

    Click Here

    Call us

    Click Here

    ದೊಂಬೆಯ ಕಾವೇರಿ ಎಂಬುವವರ ಮನೆಯ ತೋಟವೊಂದರಲ್ಲಿಯೇ 2 ತಿಂಗಳಿನಲ್ಲಿ ಸುಮಾರು 1,000ಕ್ಕೂ ಹೆಚ್ಚು ಎಳನೀರನ್ನು ಮಂಗಗಳು ಕುಡಿದು ಎಸೆದಿವೆ. ಮರದ ಕೆಳಗೆ ನಿಂತು ಓಡಿಸಲು ಹೋದರೆ ಮನೆಯವರನ್ನು ಗದರಿಸುವುದಲ್ಲದೇ ಹಲ್ಲೆಗೂ ಮುಂದಾಗುತ್ತವೆ. ಹೀಗಾಗಿ ಮಂಗಗಳು ತೆಂಗಿನ ಮರಗಳಿಗೆ ಲಗ್ಗೆ ಇಟ್ಟಾಗ ಮನೆಯಿಂದ ಹೊರಬಂದು ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಮನೆಯವರು ಹೆದರುತ್ತಿದ್ದಾರೆ. 2 ತಿಂಗಳಿನಿಂದಲೂ ಇಲ್ಲಿನ ಮನೆಗಳಿಗಳಲ್ಲಿ ಇದು ನಿರಂತರವಾಗಿ ಸಾಗಿದೆ. ಈಗ ತೆಂಗು ಬೆಳೆ ನಾಶಪಡಿಸುತ್ತಿರುವ ಮಂಗಗಳು ಗದ್ದೆಗಳಲ್ಲಿ ಪೈರು ಬೆಳೆದು ನಿಲ್ಲುತ್ತಿದ್ದಂತೆ ಅಲ್ಲಿಗೂ ಲಗ್ಗೆ ಇಡುತ್ತವೆ.

    ಅರಣ್ಯ ಇಲಾಖೆಗೆ ಏನೂ ಮಾಡಲಾಗದಂತೆ!
    ಸಮಸ್ಯೆ ಇಷ್ಟು ಗಂಭೀರವಾಗಿದ್ದರೂ ಈ ಭಾಗದ ಜನಪ್ರತಿನಿಧಿಗಳಾಗಲೀ, ಬೈಂದೂರು ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾಗಲೀ ಒಂದಿಷ್ಟು ತಲೆಕೆಡಿಸಿಕೊಂಡಂತಿಲ್ಲ. ಇಲ್ಲಿನ ಜನರೆಲ್ಲ ಒಟ್ಟಾಗಿ ಇಲಾಖೆಗೆ ದೂರು ಕೊಂಡೊಯ್ದರೇ ನಮಗೇನೂ ಮಾಡಲು ಸಾಧ್ಯವಿಲ್ಲ ನಿಮ್ಮ ಮಂತ್ರಿಗಳಿಗೆ ಹೇಳಿ ಎಂಬ ಹಾರಿಕೆಯ ಉತ್ತರ ನೀಡಿದ್ದಾರೆ. ಮನವಿಯನ್ನು ಸ್ವೀಕರಿಸದೇ ಹಿಂದೆ ಕಳುಹಿಸಿದ್ದಾರೆ. ಇದರಿಂದಾಗಿ ಜನರೂ ಈ ಕಪಿಚೇಷ್ಟೆಯಿಂದಾಗಿ ದಾರಿ ಕಾಣದೆ ಕಂಗೆಟ್ಟಿದ್ದಾರೆ.

    ದುಡಿಮೆ ಕಸಿದುಕೊಂಡಿದೆ:
    ಈ ಭಾಗದ ಕೆಲವು ಮನೆಗಳಲ್ಲಿ ಜೀವನೋಪಾಯಕ್ಕಾಗಿ ತೆಂಗಿನಕಾಯಿ ಮಾರಿಕೊಂಡು ಒಂದಿಷ್ಟು ಸಂಪಾದಿಸುತ್ತಿದ್ದರು. ಈ ಮಂಗಗಳ ಕಾಟದಿಂದಾಗಿ ಈಗ ಅದೂ ಕೂಡ ಸಾಧ್ಯವಾಗುತ್ತಿಲ್ಲ. ತೆಂಗಿನ ಮರದ ಎಳೆಯ ಬೊಂಡಗಳನ್ನೇ ಮಂಗಗಳು ತಿಂದು ಎಸೆಯುತ್ತಿರುವುದರಿಂದ ಕಾಯಿಯಾಗುವವರೆಗೆ ಕಾಯುವುದು ದೂರದ ಮಾತಾಗಿದೆ. ಇನ್ನಾದರೂ ಸಂಬಂಧಪಟ್ಟವರು ಈ ಭಾಗದ ಜನರ ಸಮಸ್ಯೆಗೊಂದು ಪರಿಹಾರ ದೊರಕಿಸಿಕೊಡಬೇಕಿದೆ.

    ಮಡಾಮಕ್ಕಿಯಿಂದ-ಸಿದ್ಧಾಪುರದ ವರೆಗೂ ವಾನರ ಸೇನೆ:
    ಅತ್ತ ಅಮಾಸೆಬೈಲು, ಮಡಾಮಕ್ಕಿ, ಶಂಕರನಾರಾಯಣ, ಗೋಳಿಯಂಗಡಿ, ಹಾಲಾಡಿ, ಸಿದ್ಧಾಪುರ, ಶೇಡಿಮನೆಯ ಸುತ್ತಿಲಿನ ಪ್ರದೇಶಗಳಲ್ಲಿ ಮಂಗಗಳ ಕಾಟ ಹೆಚ್ಚಾಗಿದೆ. ಇಲ್ಲಿನ ತೆಂಗು, ಬಾಳೆ ತೋಟಗಳಿಗೆ ಲಗ್ಗೆ ಇಡುತ್ತಿರುವ ಮಂಗಗಳು ಅಪಾರ ಕೃಷಿ ಸಂಪತ್ತನ್ನು ನಾಶ ಮಾಡುತ್ತಿವೆ. ಇಷ್ಟೇಕ್ಕೆ ಮುಗಿಯದೆ ಇಲ್ಲಿನ ಮನೆಗಳಿಗೂ ಭಯವಿಲ್ಲದೇ ನುಗ್ಗುತ್ತಿದೆ. ಗುಂಪು ಗುಂಪಾಗಿ ಲಗ್ಗೆ ಇಡುವ ಮಂಗಗಳು ಬೆಳೆ ನಾಶಪಡಿಸುವುದಲ್ಲದೇ ಓಡಿಸಲು ಹೋಗುವವರ ಮೇಲೆ ದಾಳಿಗೂ ಮುಂದಾಗುತ್ತದೆ. ಇದರಿಂದಾಗಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಹೆದರಿ ಸಂಚರಿಸುವಂತಾಗಿದೆ.

    Click here

    Click here

    Click here

    Call us

    Call us

    ಎಲ್ಲಿಂದ ಬಂದವು ಈ ಮಂಗಗಳು:
    ಬೇರೆಡೆಯೂ ಹೀಗೆಯೇ ಉಪಟಳ ನೀಡುವ ಮಂಗಗಳನ್ನು ಹಿಡಿದು ಯಾರೋ ಈ ಭಾಗಗಳಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಸ್ಥಳೀಯರು ಆರೋಪ. ಅವು ವಲಸೆ ಬರುವ ಬದಲಿಗೆ ಒಮ್ಮೆಲೇ ಈ ಭಾಗದಲ್ಲಿ ಕಾಣಿಸಿಕೊಂಡದ್ದರಿಂದ ಅವರು ಹೀಗೆ ಹೇಳುತ್ತಿದ್ದಾರೆ. ಕಾಡು ನಾಶವಾಗುತ್ತಿರುವುದರಿಂದ ಮಂಗಗಳು ಊರಿಗೆ ಲಗ್ಗೆ ಇಡುವುದು ಇತ್ತಿಚಿಗೆ ತೀರಾ ಸಾಮಾನ್ಯವೆನಿಸಿವೆ.

    ನಮ್ಮ ತೋಟದ ತೆಂಗಿನ ಮರದಿಂದ 2 ತಿಂಗಳಿನಲ್ಲಿ ಒಂದು ಸಾವಿರಲ್ಲೂ ಅಧಿಕ ಬೊಂಡಗಳನ್ನು ಮಂಗಗಳು ತಿಂದು ಎಸೆದಿವೆ. ಓಡಿಸಲು ಹೋದರೆ ನಮ್ಮನ್ನೇ ಬೆದರಿಸುತ್ತವೆ. ಎಲ್ಲೆಂದರಲ್ಲಿ ಬೊಂಡಗಳನ್ನು ಬಿಸಾಡುತ್ತಲಿದೆ. ಮೊನ್ನೆ ಮೊನ್ನೆ ಮಂಗವನ್ನು ಓಡಿಸಲು ಹೋದ ನನ್ನ ತಂಗಿಯ ಮೇಲೆಯೇ ಹಲ್ಲೆ ನಡೆಸಿತ್ತು. ಇವುಗಳ ಕಾಟದಿಂದಾಗಿ ಮನೆಯ ಹೊರಗಡೆ ನಿಲ್ಲುವುದೇ ಕಷ್ಟವೆಂಬಂತಾಗಿದೆ. -ಕಾವೇರಿ, ದೊಂಬೆ ನಿವಾಸಿ

    ಚಿತ್ರ ವರದಿ: ಸುನಿಲ್ ಹೆಚ್. ಜಿ. ಬೈಂದೂರು

    _MG_8493 _MG_8494 _MG_8500 Kundapra.com _MG_8531

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d