Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ ಪ.ಪೂ ಕಾಲೇಜಿನಲ್ಲಿ ಹಿಂದಿ ದಿನಾಚರಣೆ
    ಕುಂದಾಪುರ

    ಹೆಮ್ಮಾಡಿ ಪ.ಪೂ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಭಾಷೆಯೊಂದಿಗೆ ಸಂಸ್ಕೃತಿ ಉಳಿಸಿ ರಾಷ್ಟ್ರ ಪ್ರೇಮ ಮೊಳಗಲಿ-ಕೆ.ಆರ್. ಹೆಬ್ಬಾರ್

    Click Here

    Call us

    Click Here

    ಕುಂದಾಪುರ: ದೇಶದಲ್ಲಿ 1800 ಕ್ಕೂ ಹೆಚ್ಚು ಭಾಷೆಗಳಿವೆ. ಕೇವಲ 22 ಭಾಷೆಗಳು ಮಾತ್ರ ಸಂವಿಧಾನದಿಂದ ಮಾನ್ಯತೆ ಪಡೆದಿದೆ. ಅಲ್ಲಲ್ಲಿ ಸ್ವಾರ್ಥ ಭಾವದಿಂದ ಹಿಂದಿ ಭಾಷೆಯ ಬೆಳವಣಿಗೆಯ ಬಗ್ಗೆ ಅಪಸ್ವರದಿಂದ ದೇಶದ ಐಕ್ಯತೆ, ಭಾವಕೈಕ್ಯತೆಯ ಸಹಭಾಳ್ವೆಗೆ ಮಾರಕವಾಗಿದೆ ಎಂದು ನಿವೃತ್ತ ಹಿರಿಯ ಹಿಂದಿ ಶಿಕ್ಷಕ ಕೆ.ಆರ್.ಹೆಬ್ಬಾರ್ ಹೇಳಿದರು.

    ಅವರು ಹೆಮ್ಮಾಡಿ ಜನತಾ ಪ.ಪೂ.ಕಾಲೇಜಿನಲ್ಲಿ ಭಾರತ ಸರ್ಕಾರದ ಯುವ ಕಾರ್ಯ, ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಉಡುಪಿ, ಜನತಾ ಪ.ಪೂ,ಕಾಲೇಜು ಹೆಮ್ಮಾಡಿ ಹಾಗೂ ಹರೆಗೋಡು ಮಹಾ ವಿಷ್ಣು ಯುವಕ ಮಂಡಲ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹಿಂದಿ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.

    ಇಂಗ್ಲೀಷ್ ಇಲ್ಲದಿದ್ದರೆ ವೈಜ್ಞಾನಿಕ ಬೆಳವಣಿಗೆ ಇಲ್ಲ ಎಂಬ ಮಾತು ಸುಳ್ಳು, ಬೇರೆ ಬೇರೆ ರಾಷ್ಟ್ರಗಳು ತಮ್ಮ ರಾಷ್ಟ್ರ ಭಾಷೆಯಿಂದಲೇ ಅಭಿವೃದ್ಧಿ ಹೊಂದಿದ ರಾಷ್ಟ್ರಗಳನ್ನು ಮೀರಿ ಸಾಧನೆ ಮಾಡಿದ್ದು ದೃಷ್ಟಾಂತ ಇದೆ. ಭಾಷೆಯ ಉಳಿವಿಗಾಗಿ ಇತ್ತೀಚಿನ ದಿನಗಳಲ್ಲಿ ಯುವ ಜನರನ್ನು ದಾರಿ ತಪ್ಪಿಸುವ ಪ್ರೇಮಿಗಳ ದಿನಾಚರಣೆ, ಕಾಲಹರಣದ ಚಳುವಳಿ ಮತ್ತು ಹೋರಾಟದಿಂದ ನಮ್ಮ ಮೂಲ ಸಂಸ್ಕೃತಿಗೆ ಧಕ್ಕೆ ಉಂಟಾಗಿ ರಾಷ್ಟ್ರ ಪ್ರೇಮ ದೂರವಾಗುತ್ತಿದೆ ಎಂದು ಖೇಧ ವ್ಯಕ್ತ ಪಡಿಸಿದರು.

    ಹೆಮ್ಮಾಡಿ ಗ್ರಾಮ ಪಂ ಅಧ್ಯಕ್ಷೆ ಜ್ಯೋತಿ ಹರೀಶ್ ಭಂಡಾರಿ ಮತ್ತು ಅನುಸೂಯ ಆಚಾರ್ಯ ಜಂಟಿಯಾಗಿ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹೆಮ್ಮಾಡಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬಿ.ಮೋಹನ ದಾಸ ಶೆಟ್ಟಿ, ಹರೆಗೋಡು ಮಹಾವಿಷ್ಣು ಯುವಕ ಮಂಡಲದ ಅಧ್ಯಕ್ಷ ರವೀಶ್.ಡಿ.ಎಚ್ ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಜಿಲ್ಲಾ ಸಲಹೆಗಾರ ನರಸಿಂಹ ಗಾಣಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಜೆಸ್ಸಿ ಡಿಸಿಲ್ವ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ ಚಂದನ ನೆಂಪು ಕಾರ್ಯಕ್ರಮ ನಿರೂಪಿಸಿದರು. ಗಣಕ ಶಾಸ್ತ್ರ ಉಪನ್ಯಾಸಕ ಹರೀಶ್ ಕಾಂಚನ್ ವಂದಿಸಿದರು

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    eighteen − 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.