Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಗಂಡನನ್ನು ಕೊಲೆಗೈದ ಪತ್ನಿ ಸೇರಿ ಐವರ ಬಂಧನ
    ಅಪಘಾತ-ಅಪರಾಧ ಸುದ್ದಿ

    ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಗಂಡನನ್ನು ಕೊಲೆಗೈದ ಪತ್ನಿ ಸೇರಿ ಐವರ ಬಂಧನ

    Updated:22/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಅ.22:
    ತಾಲೂಕಿನ ಅಂಪಾರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನಾಗರಾಜ (36) ಎಂಬುವವರ ಸಾವಿನ ಪ್ರಕರಣಕ್ಕೆ ತಿರುವು ದೊರಕಿದ್ದು ಪತ್ನಿ, ಸಂಬಂಧಿ ಹಾಗೂ ನೆರಮನೆಯಾತ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

    Click Here

    Call us

    Click Here

    ಪ್ರಕರಣದಲ್ಲಿ ಆರೋಪಿಗಳಾದ ಪತ್ನಿ ಮಮತಾ (34), ಆಕೆಯ ಭಾವ ಕುಮಾರ್, ಪಕ್ಕದ ಮನೆಯ ಯುವಕ ದಿನಕರ ಮತ್ತು ಕುಮಾರ್ ಅವರ ಇಬ್ಬರು ಮಕ್ಕಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಬಾಲಕರನ್ನು ರೀಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಒಂದು ವರ್ಷದಿಂದ ಸಂಚು, ಕೊಲೆ ಮಾಡಿ ಸುಳ್ಳು ಪ್ರಕರಣ ದಾಖಲು:
    ಸಾಗರ ತಾಲೂಕಿನವರಾದ ನಾಗರಾಜ ಹಾಗೂ ಮಮತಾ ಕಳೆದ ಹತ್ತು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು ಅವರಿಗೆ ಮೂವರು ಮಕ್ಕಳಿದ್ದಾರೆ. ಅಂಪಾರು ಮೂಡುಬಗೆಯ ವಿವೇಕ ನಗರದಲ್ಲಿ ವಾಸವಾಗಿದ್ದ ನಾಗರಾಜ್ ವಿಪರೀತ ಕುಡಿತದ ಚಟ ಹೊಂದಿದ್ದು ಮನೆಯಲ್ಲಿ ಪ್ರತಿದಿನ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಹೊರಗಿನವರೊಂದಿಗೂ ಜಗಳವಾಡುವುದು, ಖ್ಯಾತೆ ತೆಗೆಯುವುದು ಮಾಡುತ್ತಿದ್ದು, ಪಕ್ಕದ ಮನೆಯ ದಿನಕರ ಎಂಬಾತನೊಂದಿಗೂ ಆಗಾಗ್ಗೆ ಜಗಳವಾಡುತ್ತಿದ್ದರು ಎನ್ನಲಾಗಿದೆ.

    ಪತಿಯ ಕಿರುಕುಳದಿಂದ ಬೇಸತ್ತಿದ್ದ ಪತ್ನಿ ಮಮತಾ, ಪಕ್ಕದ ಮನೆಯ ಯುವಕ ಹಾಗೂ ತನ್ನ ಭಾವನೊಂದಿಗೆ ಸೇರಿ ಕಳೆದ ಒಂದು ವರ್ಷದಿಂದ ಆತನ ಕೊಲೆಗೆ ಸಂಚು ರೂಪಿಸಿದ್ದಾರೆ. ಅ.18ರ ಸೋಮವಾರ ರಾತ್ರಿ ಎಂದಿನಂತೆ ಕುಡಿದು ಬಂದಿದ್ದ ನಾಗರಾಜ್ ತನ್ನ ಪತ್ನಿಗೆ ಹೊಡೆದು ಮನೆಯಿಂದ ಹೊರಕ್ಕೆ ಕಳುಹಿಸಿ, ಮಲಗಿಕೊಂಡಿದ್ದಾನೆ. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಪತ್ನಿ, ಕುಮಾರ್ ಹಾಗೂ ಆತನ ಇಬ್ಬರು ಮಕ್ಕಳು ಮತ್ತು ದಿನಕರ್ ಎಂಬಾತನ ಜೊತೆ ಸೇರಿಕೊಂಡು ಮಲಗಿದ್ದ ನಾಗರಾಜನ ಕುತ್ತಿಗೆ ನೇಣು ಬಿಗಿದ ಕೊಲೆ ಮಾಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಮರುದಿನ ಬೆಳಿಗ್ಗೆ ಏನೂ ತಿಳಿಯದವರಂತೆ ನಟಿಸಿದ್ದ ಪತ್ನಿ, ಸ್ಥಳೀಯರು ಹಾಗೂ ಪೊಲೀಸರಿಗೂ ಮೊದಲು ಸುಳ್ಳು ಹೇಳಿದ್ದರು. ನಾಗರಾಜ್ ವಿಪರೀತ ಕುಡಿತದ ಚಟ ಹೊಂದಿದ್ದರಿಂದಲೇ ಜಿಗುಪ್ಸೆಗೊಂಡು ಸಾವನ್ನಪ್ಪಿರುವುದಾಗಿಯೂ ಠಾಣೆಯಲ್ಲಿ ದೂರು ನೀಡಿದ್ದರು.

    Click here

    Click here

    Click here

    Click Here

    Call us

    Call us

    ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯ ಶಂಕೆ ದೃಢವಾಗಿತ್ತು. ಮರಳಿ ಪೊಲೀಸರು ಮೃತ ನಾಗರಾಜನ ಮನೆಗೆ ಬರುತ್ತಿದ್ದಂತೆ ಪತ್ನಿ ಎಲ್ಲವನ್ನೂ ಬಾಯಿಬಿಟ್ಟಿದ್ದಾಳೆ. ಕೊಲೆಯತ್ನ ನಡೆದಿರುವ ಬಗ್ಗೆ ನಾಗರಾಜನ ಸಹೋದರಿಯೂ ದೂರು ದಾಖಲಿಸಿದ್ದರು. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧನಕ್ಕೊಳಪಡಿಸಿ ಹೆಚ್ಚಿನ ತನಿಕೆ ನಡೆಸಲಾಗಿದೆ/ ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    6 − three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.