Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ ಅವಧಿಯಲ್ಲಿ ಮಕ್ಕಳ ಮೇಲಿನ ದುಷ್ಪರಿಣಾಮಗಳಿಗೆ ಸೂಕ್ತ ನೆರವು: ನ್ಯಾ. ಶರ್ಮಿಳಾ
    ಉಡುಪಿ ಜಿಲ್ಲೆ

    ಕೋವಿಡ್ ಅವಧಿಯಲ್ಲಿ ಮಕ್ಕಳ ಮೇಲಿನ ದುಷ್ಪರಿಣಾಮಗಳಿಗೆ ಸೂಕ್ತ ನೆರವು: ನ್ಯಾ. ಶರ್ಮಿಳಾ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ವಿವಿಧ ದುಷ್ಪರಿಣಾಮಗಳ ಕುರಿತು, ಮಕ್ಕಳ ಮೂಲಕವೇ ತಿಳಿದು, ಅವುಗಳಿಗೆ ಸೂಕ್ತ ನೆರವು ಹಾಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯುನಿಸೆಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ, ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತ ಮಕ್ಕಳ ಸಾರ್ವಜನಿಕ ಅಹವಾಲು ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸುಮಾರು 1.5 ವರ್ಷಕ್ಕೂ ಅಧಿಕ ಅವಧಿಯ ಕೋವಿಡ್-19 ಪಿಡುಗು, ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಂಡಿತ್ತು. ಈ ಅವಧಿಯಲ್ಲಿ ಮಕ್ಕಳು ಶಾಲೆಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಂದ ಹೊರಗುಳಿದಿದ್ದರು. ಮೊಬೈಲ್ ಮೂಲಕವೇ ಆನ್ಲೈನ್ ತರಗತಿಗಳಿಗೆ ಹಾಜರಾಗಿದ್ದರು. ಮಕ್ಕಳು ಹೆಚ್ಚು ಕಾಲ ಮೊಬೈಲ್ ಬಳಸುವುದರ ಕುರಿತಂತೆ ಪೋಷಕರು ಪರಿಶೀಲಿಸಬೇಕು. ಕೋವಿಡ್-19 ನ ಸಮಯದಲ್ಲಿ ಮಕ್ಕಳು, ವೈಯಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕವಾಗಿ ಎದುರಿಸಿರುವ ಸಮಸ್ಯೆಗಳ ಕುರಿತಂತೆ ಮಕ್ಕಳ ಮೂಲಕವೇ ಅಹವಾಲು ಸ್ವೀಕರಿಸಿ, ಸಂಬAದಪಟ್ಟ ಅಧಿಕಾರಿಗಳ ಮೂಲಕ, ಸಮಸ್ಯೆಗಳಿಗೆ ಸೂಕ್ತ ನೆರವು ಒದಗಿಸಲಾಗುವುದು ಎಂದು ನ್ಯಾ.ಶರ್ಮಿಳಾ ಹೇಳಿದರು.

    ಡಿವೈಎಸ್ಪಿ ಸುಧಾಕರ್ ಮಾತನಾಡಿ, ಪೊಲೀಸ್ ಇಲಾಖೆ ಈಗ ಜನಸ್ನೇಹಿ ಮತ್ತು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳು ತಮ್ಮ ಸಮಸ್ಯೆಗಳನ್ನು ಯಾವುದೇ ಭಯ, ಅಂಜಿಕೆಯಿಲ್ಲದೇ ತಿಳಿಸಬೇಕು ಹಾಗೂ ಪೊಲೀಸ್ ಇಲಾಖೆಯಿಂದ ಯಾವುದೇ ಸಮಯದಲ್ಲಿ ಅಗತ್ಯ ಸಹಾಯ ಕೋರಿದಲ್ಲಿ, ಎಲ್ಲಾ ರೀತಿಯ ಸಹಾಯ ನೀಡುವ ಭರವಸೆ ನೀಡಿದರು.

    ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ.ಶಂಕರಪ್ಪ ಮಾತನಾಡಿ, ಕೋವಿಡ್-19 ಅವಧಿಯಲ್ಲಿ ಮಕ್ಕಳು ಮನೆಯಲ್ಲಿಯೇ ಇರಬೇಕಾಗಿದ್ದರಿಂದ ಮಕ್ಕಳ ಮೇಲೆ ವಿವಿಧ ಬಗೆಯ ದೌರ್ಜನ್ಯಗಳು, ಬಾಲ ಕಾರ್ಮಿಕರಾಗಿ ಬಳಸಿಕೊಂಡಿರುವುದು, ಮಕ್ಕಳ ಹಕ್ಕುಗಳ ಉಲ್ಲಂಘನೆಗಳು ನಡೆದಿರುವ ಸಾಧ್ಯತೆಗಳಿವೆ. ಮಕ್ಕಳು ಈ ಅಹವಾಲು ಸ್ವೀಕಾರ ಸಮಯದಲ್ಲಿ, ತಮ್ಮ ಸಮಸ್ಯೆಗಳ ಬಗ್ಗೆ ತಿಳಿಸಿದಲ್ಲಿ, ಜಿಲ್ಲಾ ಹಂತದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳ ಬಗ್ಗೆ ಸಂಬದಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಜಿಲ್ಲಾ ಹಂತದಲ್ಲಿ ಬಗೆಹರಿಸಲಾಗುವುದು. ಇಲ್ಲಿ ಬಗೆಹರಿಸಲು ಸಾಧ್ಯವಾಗದ ಸಮಸ್ಯೆಗಳನ್ನು ರಾಜ್ಯ ಹಂತದಲ್ಲಿ ಮತ್ತು ನ್ಯಾಯಾಲಯದ ಮೂಲಕ ಇತ್ಯರ್ಥಪಡಿಸಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಾರ್ಯೋನ್ಮುಖವಾಗಲಿದೆ ಎಂದರು.

    Click here

    Click here

    Click here

    Click Here

    Call us

    Call us

    ಮಕ್ಕಳ ಹಕ್ಕುಗಳ ಕುರಿತ ಅರಿವು ಮೂಡಿಸುವ ಕರಪತ್ರ, ಪೋಸ್ಟರ್, ಕಿರುಹೊತ್ತಿಗೆ ಬಿಡುಗಡೆಗೊಳಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ಶೇಷಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೋನಾಲ್ಡ್ ಬಿ ಫುಟಾರ್ಡೋ ಉಪಸ್ಥಿತರಿದ್ದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ ಸ್ವಾಗತಿಸಿದರು. ಕೃಷ್ಣ ನಿರೂಪಿಸಿ, ವಂದಿಸಿದರು.

    ಶಾಲೆಯಲ್ಲಿ ಆಟದ ಮೈದಾನ ಇಲ್ಲದಿರುವ ಬಗ್ಗೆ, ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಕೋವಿಡ್-19 ಸಮಯದಲ್ಲಿ ಆನ್ಲೈನ್ ಪಾಠಗಳನ್ನು ಕೇಳಿ ತಲೆನೋವು, ಕಣ್ಣು ನೋವು ಬಂದಿರುವ ಬಗ್ಗೆ, ಮೊಬೈಲ್ ಸುಲಭವಾಗಿ ಸಿಕ್ಕ ಕಾರಣ ಇತರೆ ವಿದ್ಯಾರ್ಥಿಗಳು ಅದರ ದುರ್ಬಳಕೆ ಮಾಡುತ್ತಿರುವ ಹಾಗೂ ಅಪಾಯಕಾರಿ ಗೇಮ್ಗಳನ್ನು ಆಡುವ ಬಗ್ಗೆ ಮತ್ತು ಪ್ರಸ್ತುತ ಶಾಲೆ ಆರಂಭಗೊಂಡ ನಂತರ ಹಳ್ಳಿ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ದೊರೆಯದೇ ಇರುವುದು ಮುಂತಾದ ಸಮಸ್ಯೆಗಳ ಬಗ್ಗೆ ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳು ಅಹವಾಲುಗಳನ್ನು ಸಲ್ಲಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    7 + thirteen =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.