Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಬಿಲ್ಲವ ವಧು ವರಾನ್ವೇಷಣೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಉಪ್ಪುಂದ: ಬಿಲ್ಲವ ವಧು ವರಾನ್ವೇಷಣೆ ಕಾರ್ಯಕ್ರಮ

    Updated:29/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬಿಲ್ಲವ ಅಸೋಸಿಯೇಷನ್ ರಿ. ಬೆಂಗಳೂರು ಹಾಗೂ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬೈಂದೂರು ಇವರ ಸಹಯೋಗದೊಂದಿಗೆ ಬಿಲ್ಲವ ವಧುವರರ ಮುಖಾಮುಖಿ ಕಾರ್ಯಕ್ರಮ ನಂದನವನ ದೇವಕಿ ಬಿ. ಆರ್. ಆಡಿಟೋರಿಯಂ (ಪರಿಚಯ) ನಡೆಯಿತು.

    Click Here

    Call us

    Click Here

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಇವರು ನಡೆಸಿಕೊಂಡು ಬರುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ಈ ವಧುವರಾನ್ವೇಷಣೆ ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿದ್ದು, ತಾಲ್ಲೂಕಿನ ಸಮಾಜದ ಎಲ್ಲಾ ವಧು ವರ ಆಕಾಂಕ್ಷಿಗಳು ಇದರ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು. ಬೈಂದೂರು ತಾಲ್ಲೂಕು ಬಿಲ್ಲವ ಸಂಘಕ್ಕೆ ಸಮುದಾಯ ಭವನದ ಅಗತ್ಯವಿದ್ದು, ಇದರ ನಿರ್ಮಾಣದಲ್ಲಿ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

    ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅದ್ಯಕ್ಷ ಎಂ. ವೇದಕುಮಾರ ಮಾತನಾಡಿ , ಸಮಾಜದ ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದ ಅವರು ರಾಜಕೀಯವಾಗಿ ನಾವು ನಮ್ಮ ಸಮಾಜದ ನಾಯಕರನ್ನು ಆಯ್ಕೆ ಮಾಡುವಲ್ಲಿ ಪಕ್ಷಭೇದ ಮರೆತು ಹೋರಾಡಬೇಕಾಗಿದೆ ಎಂದು ಕರೆ ನೀಡಿದರು. ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಬಡಮಕ್ಕಳ ವಿದ್ಯಾಭ್ಯಾಸದ ನಿಟ್ಟಿನಲ್ಲಿ ನೀಡುತ್ತಿರುವ ಸವಲತ್ತುಗಳು ಹಾಗೂ ಶೈಕ್ಷಣಿಕ ಸಹಾಯದ ಬಗ್ಗೆ ತಿಳಿಸಿದರು .ನಮ್ಮ ಸಮಾಜದ ಕಡುಬಡತನದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ವೆಚ್ಚಗಳನ್ನು ಸಂಘವೇ ಭರಿಸುವ ಬಗ್ಗೆ ತಿಳಿಸಿದರು.

    ಬೈಂದೂರು ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಗಣೇಶ್ ಎಲ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನವರು ಪ್ರತಿ ತಾಲ್ಲೂಕು ಮಟ್ಟದಲ್ಲಿ ನಡೆಸಿಕೊಂಡು ಬರುತ್ತಿರುವ ವಧು ವರಾನ್ವೇಷಣೆ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಬೈಂದೂರಿನಲ್ಲಿ ಬಿಲ್ಲವ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

    ಬೆಂಗಳೂರು ಬಿಲ್ಲವ ಅಸೋಸಿಯೇಶನ್ ವಧುವರ ಅನ್ವೇಷಣೆ ಸಮಿತಿಯ ಅಧ್ಯಕ್ಷೆ ಹರಿಣಿ ಎಸ್.ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸಮಾಜದ ಬಂಧುಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಕೋರಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭ ಮುಖ್ಯ ಅತಿಥಿಯಾಗಿ ಬೆಂಗಳೂರು ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಬೆಂಗಳೂರು ಬಿಲ್ಲವರ ಅಸೋಸಿಯೇಶನ್ ಹಿರಿಯ ಉಪಾಧ್ಯಕ್ಷರಾದ ಕೇಶವ ಪೂಜಾರಿ, ಉಪಾಧ್ಯಕ್ಷರಾದ ಬಿ ಎಂ ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪೂಜಾರಿ , ಸಂಘದ ಕೋಶಾಧಿಕಾರಿ ವಿ.ಗೋಪಾಲ, ಸಂಘಟನಾ ಕಾರ್ಯದರ್ಶಿ ಜೆ.ನಾರಾಯಣ ಪೂಜಾರಿ, ಸೇವಾದಳ ಅಧ್ಯಕ್ಷ ಶಿವಾನಂದ ಸಾಲಿಯನ್, ಮಹಿಳಾ ಘಟಕದ ಅಧ್ಯಕ್ಷೆ ಜಲಜಾ ಶೇಖರ್, ಬೈಂದೂರು ತಾಲ್ಲೂಕು ಬಿಲ್ಲವ ಘಟಕದ ಉಪಾಧ್ಯಕ್ಷರಾದ ಶೇಖರ್ ಪೂಜಾರಿ , ಶಂಕರ ಪೂಜಾರಿ, ಯುವ ಘಟಕದ ಅಧ್ಯಕ್ಷರಾದ ಶೇಖರ್ ಪೂಜಾರಿ ಉಪ್ಪುಂದ , ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ವಾಸುದೇವ ಪೂಜಾರಿ ಉಪಸ್ಥಿತರಿದ್ದರು. ಸುಮಾರು ನೂರಕ್ಕೂ ಹೆಚ್ಚು ವಧುವರ ಆಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಂಗಳೂರು ಬಿಲ್ಲವ ಅಸೋಸಿಯೇಶನ್ ವಧುವರ ಸಮಿತಿಯ ಸದಸ್ಯೆ ಶರ್ಮಿಳಾ ಎಚ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    eighteen − 4 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.