Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೀನುಗಾರ ಮಹಿಳೆಯರ ಸಾಲಮನ್ನ ಸಂಪೂರ್ಣ ಅನುಷ್ಠಾನಗೊಳಿಸಿ, ನಾಡದೋಣಿಗೆ ಹೆಚ್ಚಿನ ಸೀಮೆಎಣ್ಣೆ ನೀಡಿ: ಬಿ. ನಾಗೇಶ್ ಖಾರ್ವಿ
    ಊರ್ಮನೆ ಸಮಾಚಾರ

    ಮೀನುಗಾರ ಮಹಿಳೆಯರ ಸಾಲಮನ್ನ ಸಂಪೂರ್ಣ ಅನುಷ್ಠಾನಗೊಳಿಸಿ, ನಾಡದೋಣಿಗೆ ಹೆಚ್ಚಿನ ಸೀಮೆಎಣ್ಣೆ ನೀಡಿ: ಬಿ. ನಾಗೇಶ್ ಖಾರ್ವಿ

    Updated:12/01/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ರಾಜ್ಯ ಸರಕಾರ ಮೀನುಗಾರ ಮಹಿಳೆಯರ ಸಾಲ ಮನ್ನಾ ಘೋಷಣೆ ಮಾಡಿ ಈತನಕ ಸಂಪೂರ್ಣ ಸಾಲ ಮನ್ನಾ ಮಾಡದಿರುವುದರಿಂದ ಮರುಪಾವತಿಸುವಂತೆ ಬ್ಯಾಂಕುಗಳು ಒತ್ತಡ ಹೇರುತ್ತಿವೆ. ನಾಡದೋಣಿ ಮೀನುಗಾರಿಕೆಗೆ ಹೆಚ್ಚಿನ ಸೀಮೆಎಣ್ಣೆ ಒದಗಿಸುವ ಬಗ್ಗೆ ನೀಡದ ಭರವಸೆ ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಸರಕಾರ ಘೋಷಿಸಿದಂತೆ ಮೀನುಗಾರ ಮಹಿಳೆಯರ ಸಂಪೂರ್ಣ ಮನ್ನಾ ಮಾಡಿ ಮೊದಲಿನಂತೆ ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ಒದಗಿಸಲು ಹಾಗೂ ನಾಡದೋಣಿ ಮೀನುಗಾರಿಕೆಗೆ ಭರವಸೆ ನೀಡಿದಂತೆ ಹೆಚ್ಚಿನ ಸೀಮೆಎಣ್ಣೆಯನ್ನು ನಿಗದಿತವಾಗಿ ನೀಡುವ ಬಗ್ಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರ ಸಮಿತಿ ಅಧ್ಯಕ್ಷ ಬಿ. ನಾಗೇಶ್ ಖಾರ್ವಿ ಆಗ್ರಹಿಸಿದ್ದಾರೆ.

    Click Here

    Call us

    Click Here

    ರಾಜ್ಯ ಬಿಜೆಪಿ ಸರಕಾರ ಮೀನುಗಾರ ಮಹಿಳೆಯರ ಸಾಲ ಮನ್ನಾ ಎಂದು ಘೋಷಣೆ ಮಾಡಿ ಸಂಪೂರ್ಣ ಸಾಲ ಮನ್ನಾ ಮಾಡದೇ ಇರುವುದರಿಂದ ಮೀನುಗಾರ ಮಹಿಳೆಯರಿಗೆ ಸಾಲ ಮರುಪಾವತಿಸುವಂತೆ ಬಾಂಕು ಹೇರುತ್ತಿದೆ ಆದ್ದರಿಂದ ಬಾಕಿ ಉಳಿಸಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಮೊದಲಿನಂತೆ ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ಒದಗಿಸಬೇಕು. ಒಂದು ವೇಳೆ, ಮೀನುಗಾರ ಮಹಿಳೆಯರ ಸಾಲಮನ್ನಾ ಮಾಡದೇ ಇದ್ದಲ್ಲಿ ಹಾಗೂ ಶೂನ್ಯ ಬಡ್ಡಿದರದಲ್ಲಿ ಪುನಃ ಸಾಲ ಒದಗಿಸದೇ ಇದ್ದಲ್ಲಿ ಸಮಸ್ತ ಮೀನುಗಾರ ಮಹಿಳೆಯರು ಸೇರಿ ಉಗ್ರ ಹೋರಾಟವನ್ನು ನಡೆಸಲಿದ್ದಾರೆ. ಅಲ್ಲದೇ, ಈ ಭಾಗದ ಶಾಸಕರು, ಮೀನುಗಾರಿಕಾ ಮಂತ್ರಿಗಳು ಕರಾವಳಿಗೆ, ಮೀನುಗಾರಿಕಾ ಬಂದರುಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮೀನುಗಾರ ಮಹಿಳೆಯರು ಸೇರಿ ಖಾಅ ಮೀನಿನ ಬುಟ್ಟಿ ಹಿಡಿದು ಪ್ರತಿಭಟನೆ ಮಾಡಲಿದ್ದಾರೆ ಎಂದವರು ಎಚ್ಚರಿಸಿದ್ದರೆ.

    ಸರಕಾರ ಔಟ್ಬೋರ್ಡ ಇಂಜಿನ್ ಅಳವಡಿಸಿ, ಮೀನುಗಾರಿಕೆ ಮಾಡುವ ಸಾಂಪ್ರದಾಯಿಕ ನಾಡದೋಣಿಗಳಿಗೆ ಒದಗಿಸುತ್ತಿದ್ದ ಮಾಸಿಕ ತಲಾ 150 ಲೀಟರ್ ಸೀಮೆಎಣ್ಣೆ ಪ್ರಮಾಣವನ್ನು 300 ಅಟರ್ ಗೆ ಏರಿಸಿದ್ದರೂ, ಆ ಪ್ರಮಾಣದ ಸೀಮೆಎಣ್ಣೆಯನ್ನು ಹಂಚಿಕೆ ಮಾಡದೇ ಕೇವಲ ತಲಾ 150 ರಿಂದ 160 ಅಟರ್ ಸೀಮೆಎಣ್ಣೆ ಮಾತ್ರ ಪ್ರತಿ ತಿಂಗಳಿಗೆ ನಿಗದಿಪಡಿಸಿದೆ. ಆದರೆ 2021 ನೇ ನವೆಂಬರ್ ತನಕ ದೋಣಿಗಳಿಗೆ ಸೀಮೆ ಎಣ್ಣೆ ಹಂಚಿಕೆಯಾಗಿದೆ. 2021 ನೇ ಸಾಲನ ಡಿಸೆಂಬರ್ ನಿಂದ 2022 ರ ಮಾರ್ಚ ತನಕ ಕೇಂದ್ರದಿಂದ 5,115 ಕಿ.ಅಟರ್ (5,15,000 ಅಟರ್) ಸೀಮೆಎಣ್ಣೆ ಬಡುಗಡೆಯಾಗಬೇಕಾಗಿದ್ದು, ಇನ್ನೂ ಪೂರೈಕೆಯಾಗಿಲ್ಲ. ನಾಡದೋಣಿಗಳಿಗೆ ಕೇವಲ 9 ತಿಂಗಳು ಕ್ರಮವತ್ತಾಗಿ ಸೀಮೆಎಣ್ಣೆ ಹಂಚಿಕೆ ಮಾಡದೇ, ಅಷ್ಟೊ-ಇಷ್ಟೇ ಸೀಮೆಎಣ್ಣೆ ಹಂಚಿಕೆ ಮಾಡುತ್ತಿದ್ದಾರೆ. ಬೈಂದೂರು ಭಾಗದಲ್ಲಿ ಜಾಸ್ತಿ ಸಂಖ್ಯೆಯಲ್ಲಿ ಮೀನುಗಾರರು ನಾಡದೋಣಿಯಲ್ಲಿಯೇ ಮೀನುಗಾರಿಕೆ ಮಾಡಿಕೊಂಡು ಸೀಮೆಎಣ್ಣಿ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ.

    ಚುನಾವಣಾ ಸಮಯದಲ್ಲಿ ಬಿಜೆಪಿಯವರು ಕೇಂದ್ರದಲ್ಲಿ, ರಾಜ್ಯದಲ್ಲಿ ಒಂದೇ ಪಕ್ಷದ ಸರಕಾರ (ಡಬ್ಬಲ್ ಇಂಜನ್ ಸರಕಾರ ) ಇದ್ದರೆ, ಮೀನುಗಾರರಿಗೆ ಹೆಚ್ಚಿನ ಸೌಲಭ್ಯ ಸಿಗುತ್ತದೆ, ಮತ್ತು 300 ಅಟರ್ ವರೆಗೂ ಸೀಮೆಎಣ್ಣೆ ಕೊಡಿಸುತ್ತೇವೆ ಎಂದು ಘೋಷಣೆ ಮಾಡಿದ್ದು ಬಿಟ್ಟರೆ, ನಮ್ಮ ದೋಣಿಯ ಇಂಜನ್ ಗೆ ಸೀಮೆಎಣ್ಣೆ ದೊರಕಿಸಿಲ್ಲ. ಕರಾವಳಿ ಶಾಸಕರು, ಮೀನುಗಾರಿಕಾ ಮಂತ್ರಿಗಳು ಈ ಬಗ್ಗೆ ಮುತುವರ್ಜಿ ವಹಿಸಿ ಸರಕಾರಕ್ಕೆ ಸೀಮೆಎಣ್ಣೆ ಬಗ್ಗೆ ಮನದಟ್ಟು ಮಾಡಿ ಸರಕಾರದಿಂದ ಕ್ರಮವಾಗಿ ಪ್ರತಿ ತಿಂಗಳು ನಿಗದಿಯಾದ ಸೀಮೆಎಣ್ಣೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವ ಬದಲು ವಿಳಂಬ ನೀತಿ ಅನುಸರಿಸುತ್ತಿದೆ.

    ನಾಡದೋಣಿ ಮೀನುಗಾರರ ಸೀಮೆಎಣ್ಣೆ ಸಮಸ್ಯೆ ಬಗ್ಗೆ ಸರಕಾರ ಸ್ಪಂದಿಸದಿದ್ದರೆ, ಈ ಭಾಗದ ಶಾಸಕರು ಮೀನುಗಾರಿಕಾ ಮಂತ್ರಿಗಳೊಂದಿಗೆ ಕರಾವಳಿ ಭಾಗಕ್ಕೆ, ಮೀನುಗಾರಿಕಾ ಬಂದರುಗಳಿಗೆ, ಸಭೆ-ಸಮಾರಂಭಗಳಿಗೆ ಆಗಮಿಸುವ ವೇಳೆ, ಸಾವಿರಾರು ಮೀನುಗಾರರು ಸೇರಿ ಪ್ರತಿಭಟನೆ ನಡೆಸಬೇಕಾದಿತು. ಈ ಬಗ್ಗೆ ಜಿಲ್ಲಾಧಿಕಾರಿ ಕಛೇರಿ ಎದುರು ಸಮಸ್ತ ಮೀನುಗಾರರು ಸೇರಿ ನಮ್ಮ ಮೀನುಗಾರಿಕಾ ಉದ್ಯೋಗಕ್ಕೆ ಧಕ್ಕೆಯಾದ ಬಗ್ಗೆ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಬಿ. ನಾಗೇಶ್ ಖಾರ್ವಿ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌

    17/12/2025

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.