Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ಕುಂಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸೊಬಗು ಹೆಚ್ಚಿಸಿದ ಕನ್ನಡ ಮನಸುಗಳು ಯುವ ತಂಡ
    Uncategorized

    ಕರ್ಕುಂಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸೊಬಗು ಹೆಚ್ಚಿಸಿದ ಕನ್ನಡ ಮನಸುಗಳು ಯುವ ತಂಡ

    Updated:30/01/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : ಕನ್ನಡ ಮನಸುಗಳು ಸಂಸ್ಥೆಯಿಂದ ಹಮ್ಮಿಕೊಂಡ ‘ಸರಕಾರಿ ಶಾಲೆ ಉಳಿಸಿ ಅಭಿಯಾನ’ದ ಭಾಗವಾಗಿ ಯುವ ತಂಡವೊಂದು ಶ್ರಮದಾನದ ಮೂಲಕ ಕರ್ಕುಂಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ ಬಣ್ಣ ಮಾಡಿ ಶಾಲೆಯ ಮೆರಗು ಹೆಚ್ಚಿಸಿದ್ದಾರೆ. ಜೊತೆಗೆ ಶಾಲೆಗೆ ಆಧುನಿಕ ಕಲಿಕಾ ಪರಿಕರ, ವಾಟರ್ ಫಿಲ್ಟರ್, ಫ್ಯಾನ್ ಮೊದಲಾದ ಅಗತ್ಯ ವಸ್ತುಗಳು, ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ನು, ಮಾಸ್ಕ್ ದೇಣಿಗೆಯಾಗಿ ನೀಡಿ ಸೇವಾ ಸಾರ್ಥಕ್ಯ ಮೆರೆದಿದ್ದಾರೆ.

    Click Here

    Call us

    Click Here

    ವಿವಿಧೆಡೆ ನೌಕರರಾಗಿರುವ ತಂಡದ ಸದಸ್ಯರು ವೀಕೇಂಡ್ ರಜೆಯನ್ನು ಸದುಪಯೋಗಪಡಿಸಿಕೊಂಡು ಕನ್ನಡ ಶಾಲೆ ಉಳಿಸಿ ಅಭಿಯಾನ ನಡೆಸುತ್ತಿದೆ. ಅದರಂತೆ ಅದರಂತೆ ಕರ್ಕುಂಜೆ ಶಾಲೆಯ ಹಳೆ ವಿದ್ಯಾರ್ಥಿ ಗಣೇಶ್ ಕೊಡ್ಲಾಡಿ ಅವರ ಮನವಿ ಮೇರೆಗೆ ಕುಂದಾಪುರ ತಾಲೂಕಿನ ಕರ್ಕುಂಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೂಡಿಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ 50ಕ್ಕೂ ಹೆಚ್ಚು ಮಂದಿಯ ತಂಡ ಶನಿವಾರ ಕರ್ಕುಂಜೆ ಶಾಲೆಯಲ್ಲಿ ಅಭಿಯಾನ ನಡೆಸಿತು. ಭಾನುವಾರದಂದು ಕೂಡಿಗೆ ಶಾಲೆಯಲ್ಲಿ ಅಭಿಯಾನ ಮುಂದವರಿಸಿದೆ. ಬೆಂಗಳೂರಿನಲ್ಲಿನ ದಾನಿಗಳು ಈ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

    ಕರ್ಕುಂಜೆ ಶಾಲೆ ಕಾಂಪೌಂಡ್ ಗೋಡೆಗೆ ವಾರ್ಲಿ ಆರ್ಟ್, ಒಳಭಾಗದಲ್ಲಿ ಶಾಲೆ ಗೋಡೆಗಳಿಗೆ ಸುಣ್ಣಬಣ್ಣ, ಮುಖ್ಯ ರಸ್ತೆಗೆ ಕಾಣುವ ಹಾಗಿರುವ ಕೊಠಡಿಯ ಗೋಡೆಯಲ್ಲಿ ಪೇಂಟಿಂಗ್ ಮೂಲಕ ಯಕ್ಷಗಾನದ ಕಲಾಕೃತಿ, ಪಿಲ್ಲರ್ಗಳಿಗೆ ಬಣ್ಣ, ಧ್ವಜಸ್ತಂಭಕ್ಕೆ ಬಣ್ಣ ಬಳಿಯಲಾಯಿತು. ಕನ್ನಡ ಚಿತ್ರನಟಿ ನೀತು ಶೆಟ್ಟಿ ಸೇರಿದಂತೆ ಕರ್ಜುಂಜೆ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಕೈಜೋಡಿಸಿದರು.

    ರಾಜ್ಯದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ದಾನಿಗಳ ಸಹಕಾರದೊಂದಿಗೆ ಲಕ್ಷಗಟ್ಟಲೇ ವೆಚ್ಚದಲ್ಲಿ ಸುಣ್ಣ ಬಣ್ಣ ಮತ್ತು ಅಗತ್ಯವಿರುವ ವಸ್ತುಗಳನ್ನು ನೀಡುವ ವ್ಯವಸ್ಥೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯಾದ್ಯಂತ ಈವರೆಗೆ 10 ಸರ್ಕಾರಿ ಶಾಲೆಗಳಿಗೆ ಬಣ್ಣ ಬಳಿದು, ಆಯಾ ಶಾಲೆಗಳಿಗೆ ಅಗತ್ಯವಿರುವ ನೀರು, ಟಾಯ್ಲೆಟ್ ಸೇರಿ ವಿವಿಧ ಮೂಲ ಸೌಕರ್ಯಗಳನ್ನು ಒದಗಿಸಿದ್ದಾರೆ. ಈಗಾಗಾಲೇ ಕಾಸರಗೋಡು, ಬೆಂಗಳೂರು, ದಕ್ಷಿಣಕನ್ನಡದ ಸುಳ್ಯ, ಉಡುಪಿ, ರಾಮನಗರ, ಹಾಸನ, ಮಂಡ್ಯ, ಶಿವಮೊಗ್ಗ ಜಿಲ್ಲೆಯ ಶಾಲೆಗಳಲ್ಲಿ ಈ ಅಭಿಯಾನ ನಡೆದಿದೆ.

    ಕನ್ನಡ ನಾಡು, ನುಡಿ, ನೆಲ, ಜಲ ಹೀಗೆ ಕನ್ನಡ ಪರ ಕೆಲಸಗಳನ್ನು ಮಾಡುತ್ತಾ ಒಂದಷ್ಟು ಯುವಕ ಯುವತಿಯರು ಒಂದಾಗಿ ‘ಕನ್ನಡ ಮನಸುಗಳು’ತಂಡ ಹುಟ್ಟಿಕೊಂಡಿದೆ. ಇಲ್ಲಿ ಸರಕಾರಿ ನೌಕರಿ ಖಾಸಗಿ ವೃತ್ತಿಯಲ್ಲಿ ತೊಡಗಿಕೊಂಡವರಿದ್ದಾರೆ. ತಂಡದ ಬಹುತೇಕರು ಕರ್ನಾಟಕದ ಗ್ರಾಮೀಣ ಭಾಗದ ಶಾಲೆಗಳಲ್ಲಿ ಕಲಿತು, ಬಳಿಕ ವಿವಿಧ ಕ್ಷೇತ್ರಗಳಲ್ಲಿ ಪದವಿ, ಉನ್ನತ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದಿದ್ದೇವೆ. ತಾವು ಕಲಿತ ಗ್ರಾಮೀಣ ಭಾಗದ ಶಾಲೆಗಳ ಬಗ್ಗೆ ಅದೇ ಕಾಳಜಿ, ಅಭಿಮಾನ ಮತ್ತು ಪ್ರೀತಿಯನ್ನು ಈಗಲೂ ಇಟ್ಟುಕೊಂಡಿದ್ದೇವೆ. ಇಂತಹ ಶಾಲೆಗಳಿಗೆ ತಮ್ಮ ಕೈಲಾದಷ್ಟು ಒಳಿತು ಮಾಡಬೇಕು ಎಂಬ ಆಸೆಯೊಂದಿಗೆ ಒಂದಾಗಿ ಶುರು ಮಾಡಿದ ಕನ್ನಡ ಶಾಲೆ ಉಳಿಸಿ ಅಭಿಯಾನ ರಾಜ್ಯದ ವಿವಿಧೆಡೆಯ ಹಲವು ಸರ್ಕಾರಿ ಶಾಲೆಗಳನ್ನು ಆಧುನಿಕಗೊಳಿಸಿದೆ ಮತ್ತು ಅಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಹೊಸ ಹುರುಪು, ಉತ್ಸಾಹ ಮೂಡಿಸುವ ವಾತಾವರಣವನ್ನು ರೂಪಿಸಿಕೊಟ್ಟಿದೆ. ಸರಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರಕಾರಿ ಶಾಲೆಗಳ ಪೋಷಣೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. – ಪವನ್, ತಂಡದ ಪ್ರಮುಖ

    Click here

    Click here

    Click here

    Click Here

    Call us

    Call us

    ಶಾಲೆಯಲ್ಲಿ ಶ್ರಮದಾನದ ಜೊತೆಗೆ ವಿವಿಧ ಪರಿಕರಗಳನ್ನು ದೇಣಿಗೆ ನೀಡಿರುವುದು ಸಂತೋಷದ ವಿಚಾರ. ರಾಜ್ಯ ವಿವಿಧೆಡೆಗಳಿಂದ ಶಾಲೆಯ ಬಂದು ತೋರಿದ ಕಾಳಜಿಗೆ ಕನ್ನಡ ಮನಸುಗಳು ತಂಡವನ್ನು ಈ ಊರು, ಶಾಲೆಯವರು ಬಹುಕಾಲ ನೆನೆಯಲಿದೆ. – ಮೋತಿಲಾಲ್ ಲಮಾಣಿ, ಮುಖ್ಯ ಶಿಕ್ಷಕರು ಕರ್ಕುಂಜೆ ಶಾಲೆ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    10 − 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.