Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೇಂದ್ರ ಸರ್ಕಾರದ್ದು ಜನವಿರೋಧಿ ಬಜೆಟ್: ಕುಂದಾಪುರ, ಬೈಂದೂರಿನಲ್ಲಿ ಸಿಐಟಿಯು ಪ್ರತಿಭಟನೆ
    ಊರ್ಮನೆ ಸಮಾಚಾರ

    ಕೇಂದ್ರ ಸರ್ಕಾರದ್ದು ಜನವಿರೋಧಿ ಬಜೆಟ್: ಕುಂದಾಪುರ, ಬೈಂದೂರಿನಲ್ಲಿ ಸಿಐಟಿಯು ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಫೆ.06:
    ಕೇಂದ್ರ ಸರ್ಕಾರದ ಜನ ವಿರೋಧಿ ಬಜೆಟ್ ವಿರುದ್ದ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಸಿಐಟಿಯು ಸಂಚಲನ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

    Click Here

    Call us

    Click Here

    ಸಿಐಟಿಯು ಸಂಚಾಲಕ ಎಚ್. ನರಸಿಂಹ ಮಾತನಾಡಿ, ಏಷ್ಯಾದ ಮೂರನೇ ದೊಡ್ಡ ಬಜೆಟ್ ಎಂದು ಬಣ್ಣಿಸಿ ಜನ ಸಾಮಾನ್ಯರಿಗೆ ಕೊಡಮಾಡುವ ಎಲ್ಲಾ ಹಣಕಾಸು ಕಡಿತ ಮಾಡಲಾಗಿದೆ. ಬಂಡವಾಳ ಹೂಡಿಕೆ ನೆಪದಲ್ಲಿ ದೇಶದ ಜನರ ಆಸ್ತಿ ಮಾರಾಟ ಮಾಡಿ ಕಾರ್ಪೋರೇಟ್ ಲೂಟಿಗೆ ಬಜೆಟ್ ಮಂಡಿಸಿರುವುದು ಸ್ಪಷ್ಟವಾಗಿದೆ. ರಸಗೊಬ್ಬರ, ಆಹಾರ, ಉದ್ಯೋಗ ಖಾತ್ರಿ, ಕೃಷಿಗೆ ಸಂಬಂಧಿಸಿದಂತೆ ಇರುವ ಎಲ್ಲಾ ಹಣ ಕಡಿತ ಮಾಡಿದ ಜನ ದ್ರೋಹಿ ಬಜೆಟ್ ಎಂದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಮಹಾಬಲ ವಡೇರಹೋಬಳಿ,ಬಲ್ಕೀಸ್, ಪ್ರಕಾಶ್ ಕೋಣಿ,ಲಕ್ಷ್ಮಣ ನೇತೃತ್ವವ ವಹಿಸಿದ್ದರು. ಚಂದ್ರಶೇಖರ ವಿ. ಸ್ವಾಗತಿಸಿದರು. ರಾಜು ದೇವಾಡಿಗ ವಂದಿಸಿದರು.

    ಬಜೆಟ್ ವಿರೋಧಿಸಿ ಕೃಷಿಕೂಲಿಕಾರರ ಪ್ರತಿಭಟನೆ:
    ಬೈಂದೂರು: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ,ಕನಿಷ್ಟ ನೂರು ದಿನ ಉದ್ಯೋಗ ನೀಡಲು ರೂಪಾಯಿ 2.64 ಲಕ್ಷ ಕೋಟಿ ಹಣ ಈ ವರ್ಷದ ಬಜೆಟ್ ನಲ್ಲಿ ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ ರೂಪಾಯಿ 73,000 ಕೋಟಿ. ಬಜೆಟ್ ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ ಮಾಡುತ್ತಿರುವುದರಿಂದ ಕೂಲಿಕಾರರು ಊರು ತೊರೆದು ನಗರ ಪ್ರದೇಶಕ್ಕೆ ವಲಸೆ ಹೋಗುವ ಸನ್ನಿವೇಶ ನಿರ್ಮಾಣ ವಾಗುತ್ತಿದೆ.ಒಮ್ಮೆ ಕೆಲಸ ಪಡೆದು ಕೊಂಡವರು ಮತ್ತೊಮ್ಮೆ ಅರ್ಜಿ ಕೊಟ್ಟರೆ ಪಂಚಾಯತ್ ನವರ ಹುಬ್ಬು ಮೇಲೆರುತ್ತದೆ.ಕೆಲಸಕ್ಕಾಗಿ ತಿಂಗಳಾನುಗಟ್ಟಲೆ ಕಾಯಬೇಕು ಎಂದು ಅಖಿಲ ಭಾರತ ಕೃಷಿಕೂಲಿಕಾರರ ಸಂಘ(AIAWU)ದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಆತಂಕ ವ್ಯಕ್ತಪಡಿಸಿದರು.

    ಬೈಂದೂರು ತಾಲುಕು ಕೆರ್ಗಾಲ್ ಗ್ರಾಮದ ಉದ್ಯೋಗ ಖಾತ್ರಿ ಕೆಲಸಗಾರರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ದಿನಾಂಕ:05=02=2022 ರಂದು ಅವರು ಮಾತನಾಡಿದರುಬೈಂದೂರು ತಾಲೂಕು ಡಿವೈಎಫ್ಐ ಮುಖಂಡರಾದ ಹರೀಶ್ ಬೈಂದೂರು ಹೋರಾಟ ಬೆಂಬಲಿಸಿ ಮಾತನಾಡಿದರು. ಬಿಜೂರು ಗ್ರಾಮದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಮಂಜುನಾಥ ದೇವಾಡಿಗ ಇವರು ಉಪಸ್ಥಿತರಿದ್ದರು. ಕೃಷಿಕೂಲಿಕಾರರ ಸಂಘದ ಸ್ಥಳೀಯ ಮುಖಂಡರಾದ ಭಗವತಿ ಧನ್ಯವಾದ ನೀಡಿದರು.

    Click here

    Click here

    Click here

    Call us

    Call us

      Share. Facebook Twitter Pinterest LinkedIn Tumblr Telegram Email
      ನ್ಯೂಸ್ ಬ್ಯೂರೋ
      • Website
      • Tumblr

      Related Posts

      ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

      20/12/2025

      ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

      20/12/2025

      ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

      20/12/2025
      Leave A Reply Cancel Reply

      Call us

      Click Here

      Call us

      Call us

      Call us
      Highest Viewed Recently
      • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
      • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
      • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
      • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
      • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

      © 2025 ThemeSphere. Designed by ThemeSphere.
      • About portal
      • Our team
      • Privacy policy

      Type above and press Enter to search. Press Esc to cancel.