Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪುರಸಭೆ ಸಾಮಾನ್ಯ ಸಭೆ ಗದ್ದಲದ ಗೂಡು
    ಉಡುಪಿ ಜಿಲ್ಲೆ

    ಕುಂದಾಪುರ ಪುರಸಭೆ ಸಾಮಾನ್ಯ ಸಭೆ ಗದ್ದಲದ ಗೂಡು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಪುರಸಭೆಯ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ಕುಂದಾಪುರ ಪುರಸಭೆ ಸಾಮಾನ್ಯ ಸಭೆ ಜರುಗಿತು. ಸಾಮಾನ್ಯ ಸಭೆಯಲ್ಲಿ ಪುರಸಭೆ ಅಭಿವೃದ್ಧಿ ಚರ್ಚೆ – ಸಮಸ್ಯೆಗಳ ಪರಿಹಾರಕ್ಕಿಂತ, ಗಲಾಟೆಯಲ್ಲಿ ಕಾಲಹರಣವಾಗಿದೆ.

    Click Here

    Call us

    Click Here

    ವಿರೋಧ ಪಕ್ಷದ ಸದಸ್ಯೆ ದೇವಕಿ ಪಿ. ಸಣ್ಣಯ್ಯ ಮಾತನಾಡಿ ಸ್ಥಾಯಿ ಸಮಿತಿ ಆಯ್ಕೆ, ಟೆಂಡರ್ ಕರೆಯದೆ ಕಾಮಗಾರಿ ನಡೆಸಿರುವ ಬಗ್ಗೆ ಡಿಸಿಗೆ ದೂರು ನೀಡಲಾಗಿದ್ದು, ನಗರಾಭಿವೃದ್ಧಿ ಕೋಶದ ಪಿಡಿ ತನಿಖೆ ಮಾಡಿ ನೀಡಿದ ವರದಿ ಪ್ರತಿಗೆ ಒತ್ತಾಯಿಸಿದ್ದು, ಆಡಳಿತ ವಿರೋಧಿ ಸದಸ್ಯರ ನಡುವೆ ಗಲಾಟಿಗೆ ಕಾರಣವಾಯಿತು.

    ಸ್ಥಾಯಿ ಸಮಿತಿ ಆಯ್ಕೆ ಹಿನ್ನೆಲೆಯಲ್ಲಿ ಸಣ್ಣಪುಟ್ಟ ದೋಷಗಳಿದ್ದು, ಸರಿಪಡಿಸಿಕೊಂಡು ಹೋಗುವ ನಿರ್ಣಯ ಕೂಡಾ ಆಗಿದ್ದು, ಅದನ್ನು ದೊಡ್ಡ ಸಂಗತಿ ಮಾಡದೆ ಪುರಸಭೆ ಅಭಿವೃದ್ಧಿಗೆ ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮನವಿ ಮಾಡಿದರೂ ಸದಸ್ಯರ ಗಲಾಟೆ ಶಾಂತವಾಗಲಿಲ್ಲ. ವಿರೋಧ ಸದಸ್ಯ ಚಂದ್ರಶೇಖರ್ ಖಾರ್ವಿ ಪ್ರತಿಕ್ರಿಯಿಸಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ನಮ್ಮ ವಿರೋಧವಿಲ್ಲ. ಸಮಿತಿ ನೇಮಕ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಲಾಗಿದೆ ಎಂದರು. ಈ ನಡುವೆ ಸದಸ್ಯರಾದ ಶ್ರೀಧರ್, ನಿತ್ಯಾನಂದ ಕೆ.ಜೆ. ಆಡಳಿತ ಸದಸ್ಯರಾದ ಪ್ರಭಾಕರ ವಿ, ರಾಘವೇಂದ್ರ ಖಾರ್ವಿ, ಆಶ್ವಿನಿ, ವಿನಿತಾ, ಶ್ವೇತಾ ರೋಹಿಣಿ ವಿರೋಧಿ ಸದಸ್ಯರ ಹೇಳಿಕೆ ಖಂಡಿಸಿದರು.

    ನಾಮನಿರ್ದೇಶಕ ಸದಸ್ಯರಿಗೆ ದೇವಕಿ ಸಣ್ಣಯ್ಯ ಏಕವಚನದಲ್ಲಿ ಮಾತನಾಡಿದ್ದು ಅಲ್ಲದೆ, ಸಭೆಯಲ್ಲಿ ಚರ್ಚಿಸಲಿಕ್ಕೆ ನೀವ್ಯಾರ ಎಂದು ಕೇಳಿದ್ದಾರೆ. ಸಭೆಯಲ್ಲಿ ನಮಗೆ ಚರ್ಚಿಸುಲು ಅವಕಾಶ ಇದೆಯಾ ಇಲ್ಲವಾ? ನಾವು ಸುಮ್ಮನೆ ಚಾ ಕುಡಿಯುವುದಕ್ಕೆ ಬರಬೇಕು. ನಮ್ಮನ್ನು ಏಕವಚನದಲ್ಲಿ ಸಂಬೋಧನೆ ಮಾಡಿದ್ದು ಹಿಂದಕ್ಕೆ ಪಡೆದು ಕ್ಷಮೆ ಕೇಳಬೇಕು. ಅಲ್ಲಿಯ ತನಕ ಸಭೆಯಲ್ಲಿ ನಿಂತು ಪ್ರತಿಭಟನೆ ಮಾಡುತ್ತೇವೆ ಎಂದು ನಾಮನಿರ್ದೇಶಕರ ಸದಸ್ಯರಾದ ಪುಷ್ಪಾ ಶೇಟ್, ದಿವಾಕರ ಕೊಡ್ಗಿ, ನಾಗರಾಜ ಕಾಂಚನ್, ಪ್ರಕಾಶ್ ಖಾರ್ವಿ, ರತ್ನಾಕರ ಶೇರೆಗಾರ್ ಪ್ರತಿಭಟನೆ ನಡೆಸಿದ ನಂತರ ನಾಮನಿರ್ದೇಶಕ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಸಣ್ಣಪುಟ್ಟ ಲೋಪದೇಷಗಳ ಸರಿಪಡಿಸಿಕೊಂಡು ಪುರಸಭೆ ಅಭಿವೃದ್ಧಿಗೆ ಒತ್ತುಕೊಡೋಣ. ಎಲ್ಲರೂ ಸಹಕಾರಿ ನೀಡಿದರೆ ಮಾತ್ರ ಕೆಲಸ ಮಾಡಲು ಸಾಧ್ಯ ಎಂದು ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಸಲಹೆ ನಂತರ ಸಭೆ ಮುಂದುರಿಯಿತು.

    ವಿರೋಧ ಸದಸ್ಯೆ 50 ಲಕ್ಷ ರೂ ಕಾಮಗಾರಿ ಟೆಂಡರ್ ಕರೆಯದ ನಡಲಾಗಿದೆ ಎಂಬ ಪತ್ರಿಕಾ ಹೇಳಿಕೆ ಮತ್ತೊಮ್ಮೆ ಗಲಾಟೆಗೆ ವೇದಿಕೆ ಆಗಿದ್ದು, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ದೇವಾಡಿಗ ವೇದಿಕೆಯಿಂದ ಇಳಿದ ಹೇಳಿಕೆ ಖಂಡಿಸಿದರು.

    Click here

    Click here

    Click here

    Click Here

    Call us

    Call us

    ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಉಪಾದ್ಯಕ್ಷ ಸಂದೀಪ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ದೇವಾಡಿಗ, ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    nineteen − 14 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.