Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಣಾತ್ಮಕ ಶಿಕ್ಷಣದ ಗುರಿ, ಶೈಕ್ಷಣಿಕ ಸಾಧನೆಗೆ ರಹದಾರಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು
    ಊರ್ಮನೆ ಸಮಾಚಾರ

    ಗುಣಾತ್ಮಕ ಶಿಕ್ಷಣದ ಗುರಿ, ಶೈಕ್ಷಣಿಕ ಸಾಧನೆಗೆ ರಹದಾರಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು

    Updated:07/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ | ಕಾಲೇಜು ಪ್ರಕಟಣೆ
    ಯುವ ಪೀಳಿಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿನ ವೇಗದೊಂದಿಗೆ ಹೆಜ್ಜೆಯಿರಿಸಲು, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಬಹುಮುಖ್ಯ. ಕಾಲದ ಅವಶ್ಯಕತೆಯನ್ನು ಅರಿತು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿಯೊಂದಿಗೆ, ರೂಪುಗೊಂಡ ದಕ್ಷ ತಂಡ ವರ್ಷದಿಂದ ಸಮರ್ಪಣಾ ಎಜುಕೇಶನ್ ಟ್ರಸ್ಟ್ (ರಿ) ಎಂಬ ಸಂಸ್ಥೆಯ ಮೂಲಕ ಜೊತೆಸೇರಿದೆ.

    Click Here

    Call us

    Click Here

    ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಪ್ರಸಕ್ತ ಸಾಲಿನಿಂದ ಸಮರ್ಪಣಾ ಎಜುಕೇಶನ್ ಟ್ರಸ್ಟ್ ನೇತೃತ್ವಲ್ಲಿ ಮುನ್ನಡೆಯುತ್ತಿದ್ದು; ದಕ್ಷ ಆಡಳಿತ ಮಂಡಳಿ, ಅನುಭವಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದ ನೇತೃತ್ವದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಮುನ್ನುಡಿ ಬರೆಯಲು ಸಜ್ಜಾಗಿದೆ.

    ಆಡಳಿತ ಮಂಡಳಿ:
    ಅನುಭವಿ ಹಾಗೂ ಬೋಧನೆಯಲ್ಲಿ ಪ್ರಸಿದ್ಧಿ ಪಡೆದಿರುವ ನಾಲ್ವರು ಉಪನ್ಯಾಸಕರು ಸೇರಿ ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ಸದಾಶಯದೊಂದಿಗೆ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ರಚಿಸಿ ಆ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಪಣತೊಟ್ಟಿದ್ದಾರೆ. ಅದರಂತೆ ವಿ.ವಿ.ವಿ. ಮಂಡಳಿ 2007-08ರಲ್ಲಿ ಆರಂಭಿಸಿದ ಜನತಾ ಸ್ವತಂತ್ರ ಪಿಯು ಕಾಲೇಜನ್ನು ಪ್ರಸಕ್ತ ಸಾಲಿನಿಂದ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ಮುನ್ನಡೆಸಲಿದೆ.

    ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷ ಸೇವೆ ಸಲ್ಲಿಸಿರುವ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶಕರಾಗಿದ್ದ ಹಿರಿಯ ಚಿತ್ರಾ ಕಾರಂತ್ ಅವರು ಈ ಸಂಸ್ಥೆಯ ಮಾರ್ಗದರ್ಶಕರಾಗಿದ್ದಾರೆ. ಹಲವು ವರ್ಷಗಳ ಶೈಕ್ಷಣಿಕ ಹಾಗೂ ನಿರ್ವಹಣೆಯ ಅನುಭವ ಹೊಂದಿರುವ ಗಣೇಶ್ ಮೊಗವೀರ ಅವರು ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಡಾ. ಮಂಜುನಾಥ ಗಾಣಿಗ, ಕಾರ್ಯದರ್ಶಿಯಾಗಿ ಸುನಿಲ್ ಚಿತ್ತಾಲ್, ಕೋಶಾಧಿಕಾರಿ ಕಾರ್ತಿಕೇಯ ಎಮ್. ಎಸ್. ಹಾಗೂ ಆಡಳಿತ ಅಧಿಕಾರಿ – ದೈಹಿಕ ಶಿಕ್ಷಣ ನಿರ್ದೇಶಕರು ಪ್ರದೀಪ್ ಶೆಟ್ಟಿ ಯವರು ಕಾರ್ಯ ನಿರ್ವಹಿಸುತ್ತಿದ್ದಾರೆ.

    ನಿರಂತರ ಬದ್ಧತೆಯೊಂದಿಗೆ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಆರಂಭವಾದ ಕಾಲೇಜು, ಪದವಿಪೂರ್ವ ಹಂತದಲ್ಲಿ 2022-23ನೇ ಶೈಕ್ಷಣಿಕ ವರ್ಷದಿಂದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಶಿಕ್ಷಣ ನೀಡಲು ಸಜ್ಜಾಗಿದೆ. ವಿಜ್ಞಾನ ವಿಭಾಗದಲ್ಲಿ PCMB, PCMC, PCMS, ಹಾಗೂ ವಾಣಿಜ್ಯ ವಿಭಾಗದಲ್ಲಿ CEBA, SEBA ಹಾಗೂ BEBA ಪಠ್ಯಕ್ರಮ ವಿಭಾಗಗಳನ್ನು ಹೊಂದಿದೆ. ಶಿಸ್ತು, ಅಚ್ಚುಕಟ್ಟುತನ, ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಮಕ್ಕಳ ಆಂತರ್ಯದಲ್ಲಿ ಬಿತ್ತುವ ಮೂಲಕ ಸ್ಪರ್ಧಾತ್ಮಕ ಯುಗಕ್ಕೆ ಅನುಗುಣವಾಗಿ ಶಿಕ್ಷಣ ನೀಡಲು ಸಜ್ಜಾಗಿದೆ.

    Click here

    Click here

    Click here

    Call us

    Call us

    ಮೌಲ್ಯಯುತ ಶಿಕ್ಷಣವನ್ನು ನೀಡುವುದರ ಜೊತೆ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯ ಉದ್ದೇಶವನ್ನಿಟ್ಟುಕೊಂಡು ಅನೇಕ ಸೃಜನಶೀಲ ಚಟುವಟಿಕೆಗಳನ್ನು ಆಯೋಜನೆ ಮಾಡುವ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿಗಳ ಚಿತ್ತ ಭಿತ್ತಿಯಲ್ಲಿ ಚಿಗುರೊಡೆಯುವ ಆಲೋಚನೆಗಳಿಗೆ ಪುಷ್ಟಿ ನೀಡಿ ಬಲಪಡಿಸುವ ಉದ್ದೇಶದಿಂದ, ಕೇವಲ ಓದಿಗಷ್ಟೆ ಸೀಮಿತವಾಗಿರದೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಇಂದಿನ ಯುವ ಪೀಳಿಗೆಗೆ ವಿಶೇಷ ತರಬೇತಿಗಳ ಅಗತ್ಯವಿರುವುದನ್ನು ಮನಗೊಂಡು ಭವಿಷ್ಯದಲ್ಲಿ ವಿವಿಧ ಉದ್ಯೋಗಗಳನ್ನು ಪಡೆಯಲು ಬೇಕಾಗಿರುವ ಸಂದರ್ಶನಗಳನ್ನು ಎದುರಿಸುವಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆಂಗ್ಲ ಭಾಷಾ ಕೌಶಲ್ಯವನ್ನು ಹೆಚ್ಚಿಸುವ ಸಲುವಾಗಿ ವಿವಿಧ ಚಟುವಟಿಕೆ ಆಧಾರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳ ವೈಕ್ತಿತ್ವದ ಬೆಳವಣಿಗೆಗಾಗಿ ವೈಕ್ತಿತ್ವ ವಿಕಸನದಂತಹ ತರಬೇತಿ ಹಾಗೂ ವಿದ್ಯಾರ್ಥಿಗಳ ಮನೋವಿಕಾಸಕ್ಕಾಗಿ ವಿದ್ಯಾರ್ಥಿ ಕೌನ್ಸಲಿಂಗ್ ನಡೆಸಲಾಗುತ್ತದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ವರ್ಷದುದ್ದಕ್ಕೂ ಆಯೋಜನೆ ಮಾಡುವುದರ ಮೂಲಕ ಕ್ರೀಡೆ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ವಿದ್ಯಾರ್ಥಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತದೆ.

    2022-2023ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ (ವಿಜ್ಞಾನ ಹಾಗೂ ವಾಣಿಜ್ಯ ವಿಭಾಗ) ದಾಖಲಾತಿ ಆರಂಭಗೊಂಡಿದೆ.
    ಸಂಪರ್ಕಕ್ಕಾಗಿ ದೂರವಾಣಿ ಸಂಖ್ಯೆಗಳು: 8951371853, 9731488501, 6360574596, 9739789488, 9743289565

    Admission Open for 1st & 2nd PUC ( Science, Commerce ) at Janatha Independent PU College Hemmady

    ವಿಶೇಷ ಸೌಲಭ್ಯಗಳು:

    • ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವವಿರುವ ಉತ್ತಮ ಉಪನ್ಯಾಸಕ ವೃಂದ
    • ಸ್ಪರ್ಧಾತ್ಮಕ ಪರೀಕ್ಷೆ ಗಳಾದ CET, NEET, JEE-M, IIT, KVPY, NATA, NDA, CA, CS ತರಗತಿಗಳು CMA ಹಾಗೂ Banking Foundation Courseಗಳಿಗೆ ಅನುಭವಿ ಉಪನ್ಯಾಸಕರಿಂದ ಉತ್ತಮ ತರಬೇತಿ.
    • ವಿಜ್ಞಾನ ವಿಭಾಗವನ್ನು ಆರಿಸಿಕೊಂಡು ಸಂಶೋಧನಾ ಕ್ಷೇತ್ರಕ್ಕೆ ಹೋಗ ಬಯಸುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ Indian Institute of Science ಹಮ್ಮಿಕೊಂಡಿರುವ KVPY (Kishor Vaigyanic Protsahan Yojana) Fellowship Award 2022-23ರ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಉತ್ತಮ ಫಲಿತಾಂಶವನ್ನು ಪಡೆಯುವ ಯೋಜನೆ
    • ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತರಗತಿ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನಕ್ಕಾಗಿ Business Day, industrial Visit ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
    • ಕ್ರೀಡಾ ಹಾಗೂ ಸಾಂಸ್ಕ್ರತಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಉತ್ತೇಜನಕ್ಕಾಗಿ ನಮ್ಮ ಕಾಲೇಜಿನಲ್ಲಿ ಉಚಿತ ಪ್ರವೇಶವನ್ನು ನೀಡಲಾಗುವುದು.
    • ಕಲಿಕೆಯಲ್ಲಿ ಹಿಂದುಳಿದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಸಂಜೆ 5 ರಿಂದ 6 ಗಂಟೆಯವರೆಗೆ ಉಚಿತ ವಿಶೇಷ ತರಗತಿ
    • ಮಧ್ಯಾಹ್ನದ ಭೋಜನದ ವ್ಯವಸ್ಥೆ
    • ದೂರದ ಊರುಗಳಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗಾಗಿ ಸುರಕ್ಷಿತ ಬಸ್ ವ್ಯವಸ್ಥೆ. ( ಶಿರೂರು, ಬೈಂದೂರು, ಕೊಲ್ಲೂರು, ಕಮಲಶಿಲೆ, ಆಜ್ರಿ, ನೇರಳಕಟ್ಟೆ, ಮಾವಿನಕಟ್ಟೆ, ಕರ್ಕಿ, ಹಟ್ಟಿಯಂಗಡಿ, ಹೊಸಂಗಡಿ, ಸಿದ್ಧಾಪುರ, ಅಂಪಾರು, ಬಸ್ರೂರು, ಬ್ರಹ್ಮಾವರ ಹಾಗೂ ಕುಂದಾಪುರ ಶಾಸ್ತ್ರೀ ವ್ರತ್ತದಿಂದ – ಕಾಲೇಜಿನ ಕ್ಯಾಂಪಸ್ ತನಕ ಬಸ್ ವ್ಯವಸ್ಥೆ)
    • ಕಾಲೇಜು ವಿಭಾಗದ ವಿವಿಧ ಕ್ರೀಡೆಗಳಿಗೆ ಉತ್ತಮ ರೀತಿಯ ತರಬೇತಿ ನೀಡಿ ಸ್ಪರ್ಧಾತ್ಮಕವಾಗಿ ವಿದ್ಯಾರ್ಥಿಗಳನ್ನು ತಯಾರಿ ಮಾಡಲು ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರದೀಪ್ ಶೆಟ್ಟಿ ಹಾಗೂ ತಂಡದವರಿಂದದ ಸೂಕ್ತ ತರಬೇತಿ ನೀಡಿ ಕ್ರೀಡಾ ರಂಗದಲ್ಲಿಯು ವಿಶೇಷವಾಗಿ ಗುರುತಿಸಿಕೊಳ್ಳುವ ಕಾರ್ಯ
    • ಸಾಂಸ್ಕೃತಿಕ ಕ್ಷೇತ್ರಕ್ಕೆ ವಿಶೇಷ ಉತ್ತೇಜನ ನೀಡಲು ಆಸಕ್ತ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದ ಪ್ರಸಿದ್ಧ ಜಾದುಗಾರರಾದ ಸತೀಶ್ ಹೆಮ್ಮಾಡಿ ಇವರಿಂದ ಜಾದೂ ತರಬೇತಿ. ಪ್ರಸಿದ್ಧ ಭರತನಾಟ್ಯ ಕಲಾವಿದರಾದ ವಿದ್ವಾನ್ ಭವಾನಿ ಶಂಕರ್ ಇವರಿಂದ ಭರತನಾಟ್ಯ ತರಬೇತಿ .
    • ಪ್ರಸಿದ್ಧ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಇವರಿಂದ ಯಕ್ಷಗಾನ ತರಬೇತಿ ನೀಡಲಾಗುತ್ತದೆ.
    • ಸುಸಜ್ಜಿತವಾದ ಗ್ರಂಥಾಲಯ ವ್ಯವಸ್ಥೆ
    • ವಿದ್ಯಾರ್ಥಿಗಳ ದೈಹಿಕ ಕ್ರೀಡೆಗಳಿಗೆ ವಿಶೇಷ ಅವಕಾಶಗಳನ್ನು ಒದಗಿಸಲು ವಿಶಾಲವಾದ ಆಟದ ಮೈದಾನ
    • ವಿಜ್ಞಾನ ಕಲಿಕೆಗೆ ಪೂರಕವಾದ ಸುಸಜ್ಜಿತವಾದ ಹಾಗೂ ಆಕರ್ಷಕವಾದ ಪ್ರಯೋಗಾಲಯಗಳು
    • ವಿಶಾಲವಾದ ಹಾಗೂ ಅತ್ಯಾಧುನಿಕವಾದ ಗಣಕಯಂತ್ರ ಕೊಠಡಿ (Computer lab)
    • ಹುಡುಗರು ಹಾಗೂ ಹುಡುಗಿಯರಿಗಾಗಿ ಪ್ರತ್ಯೇಕವಾದ ಸುಸಜ್ಜಿತವಾದ ಹೋಸ್ಟೆಲ್ ವ್ಯವಸ್ಥೆ
    • ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಸಮರ್ಪಣಾ ಎಜುಕೇಶನ್ ಟ್ರಸ್ಟ್ ನ ಮೂಲಕ ವಿದ್ಯಾರ್ಥಿ ಪ್ರೋತ್ಸಾಹ ಧನ ನೀಡಲಾಗುವುದು.
    • ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ (ಸರ್ಕಾರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮೂಲಕ) ವಿದ್ಯಾರ್ಥಿ ವೇತನ.
    • ಕಾಲೇಜು ಆವರಣದಲ್ಲಿಯೇ ಸುಸಜ್ಜಿತವಾದ ಕ್ಯಾಂಟಿನ್ ವ್ಯವಸ್ಥೆ.

    ಇನ್ನಿತರ ಪ್ರಮುಖವಾದ ಸೌಲಭ್ಯಗಳೊಂದಿಗೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕ ವಾತಾವರಣ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಜ್ಞಾನಕೌಶಲ್ಯವನ್ನು ಗಟ್ಟಿಗೊಳಿಸಲು ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣವನ್ನು ನೀಡುವ ಹೊಂಗನಸು ನನಸಾಗಲೆಂಬುದು ಸಂಸ್ಥೆಯ ಆಡಳಿತ ಮಂಡಳಿಯವರ ಕನಸಿನೊಂದಿಗೆ, ಶೈಕ್ಷಣಿಕ ಮಾರ್ಗದರ್ಶಕರಾದ ಚಿತ್ರಾ ಕಾರಂತರವರ ಸೂಕ್ತ ಮಾರ್ಗದರ್ಶನದಲ್ಲಿ,ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರ ಉತ್ತಮ ನಾಯಕತ್ವ ಗುಣ, ಕಾಲೇಜು ಉಪನ್ಯಾಸಕರ ಕಠಿಣ ಪರಿಶ್ರಮದಿಂದ ಕಾಲೇಜನ್ನು ಉತ್ತಮ ಮಟ್ಟದಲ್ಲಿ ಮುನ್ನಡೆಯಲು ಯೋಜನೆಯನ್ನು ರೂಪಿಸಲಾಗಿದೆ.

    2022-2023ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ (ವಿಜ್ಞಾನ ಹಾಗೂ ವಾಣಿಜ್ಯ ವಿಭಾಗ) ದಾಖಲಾತಿ ಆರಂಭಗೊಂಡಿದೆ.
    ಸಂಪರ್ಕಕ್ಕಾಗಿ ದೂರವಾಣಿ ಸಂಖ್ಯೆಗಳು: 8951371853, 9731488501, 6360574596, 9739789488, 9743289565.

    Admission Open for 1st & 2nd PUC ( Science, Commerce ) at Janatha Independent PU College Hemmady

    ಈ ಮೇಲಿನ ವಿಷಯವನ್ನು ಕಾಲೇಜು ಆಡಳಿತ ಮಂಡಳಿಯ ಅಧೀಕೃತ ಪ್ರಕಟಣೆಯಂತೆ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಸಂಪರ್ಕಿಸುವುದು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d