Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕತಾರ್: ಕರ್ನಾಟಕ ಸಂಘದ ಅಧ್ಯಕ್ಷರಾಗಿ ಮಹೇಶ್ ಗೌಡ ಅವಿರೋಧವಾಗಿ ಆಯ್ಕೆ
    ಉಡುಪಿ ಜಿಲ್ಲೆ

    ಕತಾರ್: ಕರ್ನಾಟಕ ಸಂಘದ ಅಧ್ಯಕ್ಷರಾಗಿ ಮಹೇಶ್ ಗೌಡ ಅವಿರೋಧವಾಗಿ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ದೋಹಾ,ಎ.11:
    ಕರ್ನಾಟಕ ಸಂಘ ಕತಾರ್ (ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿನ ಭಾರತೀಯ ಸಾಂಸ್ಕ್ರತಿಕ ಕೇಂದ್ರದ ಅಂಗಸಂಸ್ಥೆ) 2022-23ನೇ ಸಾಲಿಗೆ ತನ್ನ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಿತು.

    Click Here

    Call us

    Click Here

    ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಕರ್ನಾಟಕ ಸಂಘ ಕತಾರ್ನ 13ನೇ ಅಧ್ಯಕ್ಷರಾಗಿ ಮಹೇಶ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು. ಮಹೇಶ್ ಗೌಡ ಅವರು ಮೂಲತಃ ಕರ್ನಾಟಕದ ಬೆಂಗಳೂರಿನವರು. ಕತಾರ್ನಲ್ಲಿರುವ ಭಾರತೀಯ ಸಮುದಾಯದ ಅತ್ಯಂತ ಸಕ್ರಿಯ ಸದಸ್ಯರಲ್ಲಿ ಒಬ್ಬರು. ವಿವಿಧ ಸಂಘಗಳ ಅಡಿಯಲ್ಲಿ ಕೆಲಸ ಮಾಡಿರುವ ಇವರು ಸಮುದಾಯ ಸೇವೆಯಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ. ಅವರು ಭಾರತೀಯ ಸಮುದಾಯದ ಬೆನೊವಾಲೆಟ್ ಫ್ಯೂರೋಮ್ ನಿಕಟಪೂರ್ವ ಉಪಾಧ್ಯಕ್ಷರಾಗಿದ್ದರು. ಕರ್ನಾಟಕ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಗಳಾಗಿ ಸಹ ಸೇವೆ ಸಲ್ಲಿಸಿದ್ದಾರೆ.

    2022-23ನೆ ಸಾಲಿನ ಸಮಿತಿಗೆ ಆಯ್ಕೆಯಾದ ಇತರ ಸದಸ್ಯರು:

    1. ಸಂದೀಪ್ ಡಿ ಎಸ್ -ಉಪಾಧ್ಯಕ್ಷರು
    2. ಪ್ರದೀಪ್ ಕುಮಾರ್ ದಿಲೀಪ್- ಪ್ರಧಾನ ಕಾರ್ಯದರ್ಶಿ
    3. ರಮೇಶ ಕೆ.ಎಸ್-ಖಜಾಂಚಿ
    4. ಸುಶೀಲಾ ಸುನಿಲ್ -ಸಾಂಸ್ಕೃತಿಕ ಕಾರ್ಯದರ್ಶಿ
    5. ಮಂಜೋತ್ ಸುರೇಶ್- ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ
    6. ಸೇವಿಯಸ್ ಎಸ್ ಕ್ರಾಸ್ತಾ-ಸದಸ್ಯತ್ವ ಮತ್ತು ಮಾಧ್ಯಮ ಸಂಯೋಜಕರು
    7. ನಿಲೀಶ ರಣದೇವಿ – ಕನ್ನಡ, ಪರಿಸರ ಮತ್ತು ಹಿತಚಿಂತಕ ಚಟುವಟಿಕೆಗಳು
    8. ಮೋಹನ್ ರಾವ್ – ಸಂಘಟನೆ ಮತ್ತು ಲಾಜಿಸ್ಟಿಕ್ಸ್ ಸಂಯೋಜಕರು
    9. ಜಖೀರ್ ಅಹ್ಮದ್ – ಕ್ರೀಡಾ ಸಂಯೋಜಕರು
    10. ಸಂಜನಾ ಜೀವನ್ – ಮಹಿಳೆಯರು ಮತ್ತು ಮಕ್ಕಳ ಚಟುವಟಿಕೆಗಳ ಸಂಯೋಜಕರು.

    ನಿಕಟಪೂರ್ವ ಅಧ್ಯಕ್ಷರಾದ ಡಾ. ಸಂಜಯ ಕುದ್ರಿಯವರು ಕಳೆದ ಸಮಿತಿಯ ಅಧಿಕಾರಾವಧಿಯಲ್ಲಿ ನೀಡಿದ ಬೆಂಬಲಕ್ಕಾಗಿ ಸಂಘದ ಎಲ್ಲಾ ಸದಸ್ಯರಿಗೆ, ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಮಹೇಶ್ ಗೌಡ ನೇತೃತ್ವದ ಹೊಸ ಸಮಿತಿಗೆ ತಮ್ಮ ಬೆಂಬಲವನ್ನು ಸೂಚಿಸಿದರು.

    ಹೊರಹೋಗುವ ಸಮಿತಿಯನ್ನು ಶ್ಲಾಘಿಸಿದ ಮಹೇಶ್ ಗೌಡ ಅವರು ಕೋವಿಡ್ ಸಮಯದಲ್ಲಿ ಕನ್ನಡಿಗರಿಗೆ ಸಹಾಯ ಮಾಡುವಲ್ಲಿ ಪೂರ್ವ ಸಮಿತಿಯು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. “ನಮ್ಮ ಸಂಘಕ್ಕೆ ಹೊಸ ಸದಸ್ಯರನ್ನು ನೊಂದಾಯಿಸುವ ಕೆಲಸ ಮತ್ತು ಇನ್ನೂ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ” ಎಂದು ತಮ್ಮ ಮುಂಬರುವ ಕೆಲಸಗಳ ರೂಪು ರೇಷೆಯನ್ನು ಕಿರಿದಾಗಿ ಪರಿಚಯಿಸಿದರು.

    Click here

    Click here

    Click here

    Click Here

    Call us

    Call us

    ಈ ವಾರ್ಷಿಕ ಮಹಾಸಭೆಯಲ್ಲಿ ಪ್ರಸ್ತುತ ಸಮುದಾಯದ ಮುಖಂಡರಾದ ಐಸಿಸಿ ಉಪಾಧ್ಯಕ್ಷರು ಸುಬ್ರಮಣ್ಯ ಹೆಬ್ಬಾಗಿಲು, ಕೆಎಸ್ಕ್ಯೂ ಮಾಜಿ ಅಧ್ಯಕ್ಷರು ಮತ್ತು ಸಲಹಾ ಮಂಡಳಿ ಸದಸ್ಯರು ವಿ ಎಸ್ ಮನ್ನಂಗಿ, ಕೆಎಸ್ಕ್ಯೂ ಮಾಜಿ ಅಧ್ಯಕ್ಷರು ಮತ್ತು ಸಲಹಾ ಮಂಡಳಿ ಸದಸ್ಯರು ದೀಪಕ್ ಶೆಟ್ಟಿ, ಕೆಎಸ್ಕ್ಯೂ ಮಾಜಿ ಉಪಾಧ್ಯಕ್ಷರು ರವಿಶೆಟ್ಟಿ, ಐ ಎಸ್ ಸಿ ಸಮಿತಿ ಸದಸ್ಯರು ಅನಿಲ್ ಬೋಳೂರು, ಐ ಸಿ ಬಿ ಫ್ ಸಮಿತಿ ಸದಸ್ಯರು ದಿನೇಶ್ ಗೌಡ, ತುಳು ಕೂಟದ ಅಧ್ಯಕ್ಷರು ಕಿರಣ್ ಆನಂದ್, ಉತ್ತರ ಕರ್ನಾಟಕ ಬಳಗದ ಅಧ್ಯಕ್ಷರು ಶಶಿಧರ್ ಹೆಬ್ಬಾಳ, ಎಸ್ ಕೆ ಮ್ ಡಬ್ಲ್ಯೂ ಮಾಜಿ ಅಧ್ಯಕ್ಷರು ಅಬ್ದುಲ್ಲಾ ಮೋನು, ಬಿಲವ ಕತಾರ್ ಉಪಾಧ್ಯಕ್ಷರು ಅಮಿತ್ ಪೂಜಾರಿ, ಐಸಿಸಿ ಸಮಿತಿ ಮಾಜಿ ಸದಸ್ಯರಾದ ರಾಮಚಂದ್ರ ಶೆಟ್ಟಿ ಮತ್ತು ಇತರ ಅನೇಕ ಮುಖಂಡರು ಮತ್ತು ಸಮುದಾಯದ ಹಾಗೂ ಕರ್ನಾಟಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

    ಕರ್ನಾಟಕ ಸಂಘ ಕತಾರ್ (ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿನ ಭಾರತೀಯ ಸಾಂಸ್ಕ್ರತಿಕ ಕೇಂದ್ರದ ಅಂಗಸಂಸ್ಥೆ) ಒಂದು ಸಾಮಾಜಿಕ ಸಾಂಸ್ಕ್ರತಿಕ ಸಂಸ್ಥೆ, ಕತಾರ್ ದೇಶದಲ್ಲಿ 1999 ರಿಂದ ಕನ್ನಡ ಸಂಸ್ಕ್ರತಿ, ಹಾಗು ಭಾಷೆಯನ್ನು ಉಳಿಸುವ, ಬೆಳೆಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತು ಬಂದಿದೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಮತ್ತು ಕತಾರ್ನಲ್ಲಿ ವಾಸಿಸುತ್ತಿರುವ ಕರ್ನಾಟಕದ ಜನರಿಗೆ ಸಹಾಯ ಹಸ್ತ ಚಾಚುವಲ್ಲಿ ಸಂಘ ಮುಂಚೂಣಿಯಲ್ಲಿದೆ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    two × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.