Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಡಚಾದ್ರಿ ರೋಪ್‌ವೇಗೆ ಅನುಮೋದನೆ, ಬೈಂದೂರು ಕ್ಷೇತ್ರದ ನೀರಾವರಿ ಯೋಜನೆಗಳು ಪ್ರಗತಿಯಲ್ಲಿ: ಸಂಸದ ಬಿ. ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    ಕೊಡಚಾದ್ರಿ ರೋಪ್‌ವೇಗೆ ಅನುಮೋದನೆ, ಬೈಂದೂರು ಕ್ಷೇತ್ರದ ನೀರಾವರಿ ಯೋಜನೆಗಳು ಪ್ರಗತಿಯಲ್ಲಿ: ಸಂಸದ ಬಿ. ವೈ. ರಾಘವೇಂದ್ರ

    Updated:11/05/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು :
    ಕೊಡಚಾದ್ರಿಗೆ ರೋಪ್ವೇ: ರಾಷ್ಟ್ರೀಯ ಪರ್ವತ್ ಮಾಲ್ ಯೋಜನೆಯಡಿಯಲ್ಲಿ ದೇಶದ ಪ್ರಮುಖ 10 ಪರ್ವತ ಪ್ರಧೇಶಗಳಿಗೆ ರೋಪ್ವೇ ನಿರ್ಮಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು. ಇದಕ್ಕಾಗಿ ಅರ್ಜಿ ಸಲ್ಲಿಸಿದ್ದ ರಾಜ್ಯದ 15 ಯೋಜನೆಗಳ ಪೈಕಿ ಅಂಜನಾದ್ರಿ ಬೆಟ್ಟ ಹಾಗೂ ಕೊಡಚಾದ್ರಿಗೆ ರೋಪ್ವೇ ನಿರ್ಮಾಣಕ್ಕೆ ಒಪ್ಪಿಗೆ ದೊರಕಿದ್ದು, ಶೀಘ್ರದಲ್ಲಿ ಆದೇಶ ಪತ್ರ ಸಿಗಲಿದೆ. ಇದರಿಂದ ಪ್ರವಾಸೋದ್ಯಮ ಅಭಿವೃಧ್ಧಿಯಾಗಲಿದೆ. ಕೊಡಚಾದ್ರಿಗೆ ಕ್ರಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಪ್ರಾಸ್ತಾಪವನ್ನು ಕೈಬಿಡಲಾಗಿದ್ದು, ಬೆಟ್ಟಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    https://youtu.be/i1ZOSCYB74g

    ಕೊಲ್ಲೂರು ಸಮೀಪದ ಹಾಲ್ಕಲ್ನಲ್ಲಿ ಬುಧವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಒಂದೇ ಸರ್ಕಾರದ ಅವಧಿಯಲ್ಲಿ ಸೌಕೂರು ನೀರಾವರಿ ಯೋಜನೆ ದಾಖಲೆಯ ಅವಧಿಯಲ್ಲಿ ಪೂರ್ಣಗೊಳ್ಳುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ 2.69 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲು 596 ಕೋಟಿ ರೂ. ವೆಚ್ಚದಲ್ಲಿ ರೂಪಿಸಿರುವ ಬಹುಗ್ರಾಮ ಯೋಜನೆಯ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದೆ. 100 ಕೋಟಿ ರೂ. ವೆಚ್ಚದಲ್ಲಿ ಹಳ್ಳಿಹೊಳೆ-ಕಬ್ಬಿನಾಲೆ ಸೇತುವೆ, 15.42 ಕೋಟಿ ರೂ. ವೆಚ್ಚದಲ್ಲಿ ಶಂಕರನಾರಾಯಣ-ಸೌಡ ಸೇತುವೆ ನಿರ್ಮಾಣದ ಕಾರ್ಯಗಳು ನಡೆಯಲಿದೆ. ಕೊಲ್ಲೂರಿನ 33/11 ಕೆ.ವಿ ಸಾಮರ್ಥ್ಯದ ಸಬ್ ಸ್ಟೇಷನ್ ತೊಡಕುಗಳು ನಿವಾರಣೆಯಾಗಿದ್ದು ಶೀಘ್ರದಲ್ಲಿ ಉದ್ಘಾಟನೆ ಕಾರ್ಯ ನಡೆಯಲಿದೆ ಎಂದರು.

    ಸೌಕೂರು ಹಾಗೂ ಸಿದ್ದಾಪುರದಲ್ಲಿ ಎರಡು ಪ್ರಮುಖ ನೀರಾವರಿ ಯೋಜನೆಗಳು ಕಾರ್ಯಗತವಾಗಲಿದ್ದು, ಸೌಕೂರು ನೀರಾವರಿ ಯೋಜನೆಯ ಬಹುತೇಕ ಕಾಮಗಾರಿಗಳು ಮುಗಿದಿದ್ದು, ಪ್ರಾಯೋಗಿಕ ನೆಲೆಯಲ್ಲಿ ನೀರು ಹರಿಸಲಾಗುತ್ತಿದ್ದು ಶೀಘ್ರದಲ್ಲ ಉದ್ದೇಶಿತ ಯೋಜನೆಗಳಿಗೆ ನಿರುಣಿಸಲಾಗುವುದು. 1,200 ಹೇಕ್ಟರ್ ಪ್ರದೇಶಗಳಿಗೆ ನೀರನ್ನು ಒದಗಿಸುವ 165 ಕೋಟಿ ರೂ. ವೆಚ್ಚದ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಸದ್ಯದಲ್ಲಿ ಡಿಪಿಆರ್ ಆಗಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ

    ಸೋಮೇಶ್ವರ ಹಾಗೂ ಮರವಂತೆ ಬೀಚ್ ಅಭಿವೃದ್ಧಿ ಯೋಜನೆಯ ಕಾಮಗಾರಿಗಳು ಕುಂಠಿತವಾಗಲು ಅಧಿಕಾರಿಗಳ ಇಚ್ಛಾ ಶಕ್ತಿಯ ಕೊರತೆಯೇ ಕಾರಣ. ರಾಷ್ಟ್ರೀಯ ಹೆದ್ದಾರಿ 66ರ ಸಮಸ್ಯೆಗಳ ಶೀಘ್ರವೇ ಬಗೆಹರಿಯುವ ವಿಶ್ವಾಸವಿದೆ. ನಿಟ್ಟೂರು-ಬೆಕ್ಕೋಡಿ-ಆಡುಗೋಡಿ ಮೂಲಕ ಹೊಸನಗರ ಮಾವಿನಕೊಪ್ಪಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಪ್ರಾಸ್ತಾಪ ಮಂಡಿಸಲಾಗಿದ್ದು, ಇದರಿಂದ ಹೊಸನಗರ ಮೂಲಕ ಶಿವಮೊಗ್ಗ ತಲುಪುವ ದೂರ ಹಾಗೂ ಸಮಯ ಉಳಿತಾಯವಾಗಲಿದೆ. ಶರಾವತಿ ನದಿಗೆ ಅಡ್ಡಲಾಗಿ ಹಸಿರುಮಕ್ಕಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯ ಕಾರ್ಯವೂ ಶೀಘ್ರದಲ್ಲಿ ಮುಕ್ತಾಯವಾಗಲಿದ್ದು, ಇದರಿಂದಲೂ ಕೊಲ್ಲೂರು, ಸಾಗರ, ಶಿವಮೊಗ್ಗ ಮಾರ್ಗದ ದೂರ ಕಡಿಮೆಯಾಗಲಿದೆ ಎಂದರು.

    ಅಮೃತ ಸರೋವರ ಯೋಜನೆ: ಸ್ವಾತಂತ್ರ್ಯ ದೊರೆತು 75 ವರ್ಷವಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 75 ಕೆರೆಗಳ ಅಭಿವೃದ್ಧಿಗಾಗಿ ಅಮೃತ ಸರೋವರ ಯೋಜನೆ ರೂಪಿಸಲಾಗಿದ್ದು, ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದೊಂದು ಕೆರೆಗಳ ಅಭಿವೃದ್ಧಿ ಕಾರ್ಯ ನಡೆಸಲಾಗುವುದು. ಇದಕ್ಕಾಗಿ ಸರ್ಕಾರ, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಎನ್ಆರ್ಐ ಹಾಗೂ ಸಾರ್ವಜನಿಕರ ಸಹಕಾರ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

    Click here

    Click here

    Click here

    Click Here

    Call us

    Call us

    ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 70 ವರ್ಷಗಳಲ್ಲಿ ಆಗದೆ ಇರುವಷ್ಟು ರಸ್ತೆಗಳು, ಸಂಪರ್ಕ ಸೇತುವೆಗಳು, ವೆಂಟೆಂಡ್ ಡ್ಯಾಂ, ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಇಲ್ಲಿನ ಸಮುದ್ರ ಕಿನಾರೆ ಹಾಗೂ ಮಲೆನಾಡು ಭಾಗಗಳು ಅಭಿವೃಧ್ಧಿಯಾದರೇ ಗೋವಾ ಮಾದರಿಯಲ್ಲಿ ಬೈಂದೂರು ಪ್ರವಾಸೋದ್ಯಮದ ಮೆಚ್ಚಿನ ತಾಣವಾಗುತ್ತದೆ ಎಂದ ಶಾಸಕರು, ಪ್ರತಿ 12 ವರ್ಷಗಳಿಗೊಮ್ಮೆ ದೇವಸ್ಥಾನಗಳ ಅಷ್ಟಬಂಧ ಮಹೂತ್ಸವ ನಡೆಯುವುದು ವಾಡಿಕೆ. 2002ರಲ್ಲಿ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದ ಅಷ್ಟಬಂಧ ನಡೆದಿತ್ತು. ಇದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ. ದೇವಸ್ಥಾನಕ್ಕೆ ಇದೀಗ ನೂತನ ವ್ಯವಸ್ಥಾಪನಾ ಸಮಿತಿ ಇದ್ದು, ಉತ್ತರಾಯಣದ ನಂತರ ಈ ಕಾರ್ಯವನ್ನು ಸಂಘಟಿಸುವ ಕುರಿತು ವಿಮರ್ಶೆ ಮಾಡಲಾಗುವುದು ಎಂದು ಶಾಸಕರು ಸ್ಪಷ್ಟನೆ ನೀಡಿದರು.

    ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ಕುಮಾರ ಶೆಟ್ಟಿ, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಎಸ್. ಎಚ್., ಉದ್ಯಮಿ ಕೆ. ವೆಂಕಟೇಶ್ ಕಿಣಿ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.