Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ.21ರಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಳ ರಾಜಗೋಪುರ ಸಮರ್ಪಣೆ: ಯು.ಬಿ. ಶೆಟ್ಟಿ
    ಊರ್ಮನೆ ಸಮಾಚಾರ

    ಮೇ.21ರಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಳ ರಾಜಗೋಪುರ ಸಮರ್ಪಣೆ: ಯು.ಬಿ. ಶೆಟ್ಟಿ

    Updated:16/05/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಕಾರಣಿಕ ಕ್ಷೇತ್ರ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ರಾಜಗೋಪುರ ಸಮರ್ಪಣಾ ಹಾಗೂ ಉದ್ಘಾಟನಾ ಸಮಾರಂಭ ಮೇ.21ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ಜರುಗಲಿದೆ ಎಂದು ಯು.ಬಿ.ಎಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಯು.ಬಿ. ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ವಿವೇಕಾನಂದ ಶಾಲಾ ಆವರಣದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಎಂಟು ವರ್ಷಗಳ ಹಿಂದೆ ತಾಯಿ ದುರ್ಗಾಪರಮೇಶ್ವರಿಗೆ ರಾಜಗೋಪುರ ನಿರ್ಮಾಣ ಮಾಡಬೇಕು ಎಂಬ ಕನಸು ಕಂಡಿದ್ದೆ. ಮೂರು ವರ್ಷದ ಹಿಂದೆ ಸಂಕಲ್ಪ ಮಾಡಿ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ರಾಜಗೋಪುರವನ್ನು ಉದ್ಘಾಟಿಸಲಿದ್ದಾರೆ ಎಂದರು.

    ಧಾರ್ಮಿಕ ಸಭಾ ಕಾರ್ಯಕ್ರಮ:
    ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ರಾಜಗೋಪುರವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭವನ್ನು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಬಸ್ರೂರು ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ಬಸ್ರೂರು ಅಪ್ಪಣ್ಣ ಹೆಗ್ಡೆ, ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀ ಖಾರ್ವಿ, ಬೈಂದೂರು ತಹಶೀಲ್ದಾರ್ ಹಾಗೂ ದೇವಳದ ಆಡಳಿತಾಧಿಕಾರಿ ಶೋಭಾಲಕ್ಷ್ಮೀ ಎಚ್. ಎಸ್. ಮೊದಲಾದವರು ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

    ಮೇ.18ರಿಂದ ಧಾರ್ಮಿಕ ಕಾರ್ಯಕ್ರಮ:
    ಮೇ.18ರಿಂದ ಪ್ರಧಾನ ಅರ್ಚಕರಾದ ಪ್ರಕಾಶ ಉಡುಪ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಮೇ.19ರಂದು ಗೋಪುರ ಸಂಬಂಧಿ ವಿವಿಧ ಪೂಜಾ ಕಾರ್ಯಗಳು, ಮೇ.20ರಂದು ಕಲಶ ಸ್ಥಾಪನೆ, ಶತಚಂಡಿಕಾ ಯಾಗ, ಶ್ರೀದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ. ಮೇ.21ರಂದು ರಾಜಗೋಪುರ ಲೋಕಾರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ, ಹಾಗೂ ಅಂದು ಮಹಾ ಅನ್ನಸಂತರ್ಪಣೆ ಜರುಗಲಿದೆ.

    ಭಕ್ತಿ ಗಾನ ವೈಭವ:
    ಮೇ.21ರ ಮಧ್ಯಾಹ್ನ ಅಂತರಾಷ್ಟ್ರೀಯ ಖ್ಯಾತಿಯ ಗಾಯಕಿ ನಂದಿನಿ ರಾವ್ ಗುಜರ್ ಪುಣೆ ಅವರಿಂದ ಭಕ್ತಿ ಗಾನ ವೈಭವ ಕಾರ್ಯಕ್ರಮ ಜರುಗಲಿದೆ.

    Click here

    Click here

    Click here

    Click Here

    Call us

    Call us

    ರಾಜಗೋಪುರ ಸಮರ್ಪಣಾ ಕಾರ್ಯದಲ್ಲಿ ಉಪ್ಪುಂದ ದುರ್ಗಾಪರಮೇಶ್ವರೀ ಭಕ್ತವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ವಿಶೇಷವಾಗಿ ಮೀನುಗಾರರು, ವಿವಿಧ ಸಂಘಸಂಸ್ಥೆಗಳು ಸ್ವಯಂಸೇವೆಯಲ್ಲಿ ತೊಡಗಿಕೊಲಿದ್ದಾರೆ. ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದವರು ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಬಸ್ರೂರು ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ಬಸ್ರೂರು ಅಪ್ಪಣ್ಣ ಹೆಗ್ಡೆ, ಯು.ಬಿ.ಎಸ್. ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಯಶಶ್ರೀ ಶೆಟ್ಟಿ, ಕಾನೂನು ಸಲಹೆಗಾರ ರಂಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ರಾಜಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ – https://kundapraa.com/?p=35146 .
    ► ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಪ್ರಗತಿಯಲ್ಲಿ ರಾಜಗೋಪುರ ನಿರ್ಮಾಣ ಕಾಮಗಾರಿ – https://kundapraa.com/?p=38713 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    7 + fourteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.