Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಲ್ನಡಿಗೆಯಲ್ಲಿ ಹಜ್ ಯಾತ್ರೆಗೆ ಹೊರಟ ಯುವಕನಿಗೆ ಕುಂದಾಪುರ, ತ್ರಾಸಿಯಲ್ಲಿ ಸ್ವಾಗತ
    ಊರ್ಮನೆ ಸಮಾಚಾರ

    ಕಾಲ್ನಡಿಗೆಯಲ್ಲಿ ಹಜ್ ಯಾತ್ರೆಗೆ ಹೊರಟ ಯುವಕನಿಗೆ ಕುಂದಾಪುರ, ತ್ರಾಸಿಯಲ್ಲಿ ಸ್ವಾಗತ

    Updated:13/06/20221 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜೂ.13:
    ಕೇರಳದ ಮಲಪ್ಪುರಂನಿಂದ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯುವಕ ಶಿಹಾಬ್ ಚೊಟೂರು (30) ಅವರನ್ನು ಕುಂದಾಪುರ ಹಾಗೂ ಗಂಗೊಳ್ಳಿ ಭಾಗದಲ್ಲಿ ಮಸ್ಜಿದ್ ಕಮಿಟಿ ಹಾಗೂ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸ್ವಾಗತಿಸಿಕೊಳ್ಳಲಾಯಿತು.

    Click Here

    Call us

    Click Here

    ಜೂನ್ 2 ರಂದು ಶಿಹಾಬ್ ಮಲಪ್ಪುರಂನಿಂದ ಕಾಲ್ನಡಿಗೆಯಲ್ಲಿ ಹೊರಟ ಯುವಕ ಭಾನುವಾರ ಉಡುಪಿ ಮಸೀದಿ ತಲುಪಿದ್ದರು. ಬೆಳಿಗ್ಗೆ ಅಲ್ಲಿಂದ ಕಾಲ್ನಡಿಗೆಯಲ್ಲಿ ಹೊರಟು ಮದ್ಯಾಹ್ನ ಕೋಟ ಜಾಮಿಯಾ ಮಸೀದಿಯಲ್ಲಿ ಉಪಹಾರ ಸೇವಿಸಿ ಹೊರಟು ರಾತ್ರಿ ಕುಂದಾಪುರದ ಹಂಗಳೂರು ಮಸೀದಿಯಲ್ಲಿ ತಂಗಿದ್ದರು.

    ಸೋಮವಾರ ಬೆಳಿಗ್ಗೆ ಕುಂದಾಪುರದಿಂದ ಕಾಲ್ನಡಿಗೆಯಲ್ಲಿ ಹೊರಟು ಬೆಳಿಗ್ಗೆ ಗಂಗೊಳ್ಳಿ ಪ್ರಾಂತ್ಯದ ತ್ರಾಸಿ ಮಸೀದಿಗೆ ತಲುಪಿದ್ದರು. ತ್ರಾಸಿ ಮಸೀದಿಯಲ್ಲಿ ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ಶಾಲು ಹೊದಿಸಿ ಸನ್ಮಾನಿಸಿದರು. ಮುಂದೆ ನಾವುಂದ ಮಸೀದಿ ವ್ಯಾಪ್ತಿಯಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದಾರೆ. ಎಲ್ಲಾ ಭಾಗದಲ್ಲಿಯೂ ಅವರನ್ನು ಸ್ವಾಗತಿಸಿಕೊಳ್ಳಲಾಗುತ್ತಿದೆ.

    ಶಿಹಾಬ್ ಚೊಟೂರು ಅವರು ಕೇರಳ ರಾಜ್ಯದಿಂದ ಪ್ರಾರಂಭಿಸಿ ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ತಾನ್, ಹರಿಯಾಣ, ಪಂಜಾಬ್, ವಾಘಾ ಗಡಿ ಮೂಲಕ ಪಾಕಿಸ್ತಾನ, ಇರಾಕ್, ಇರಾನ್, ಕುವೈಟ್ ಮತ್ತು ಸೌದಿ ಅರೇಬಿಯಾ ತೆರಳಲಿದ್ದಾರೆ. ಆಯಾ ವಿವಿಧ ದೇಶಗಳ ಗಡಿ ದಾಟಲು ವೀಸಾ ಹಾಗೂ ರಾಯಭಾರ ಕಚೇರಿಗಳಿಂದ ಅನುಮತಿ ಪತ್ರಗಳನ್ನು ಪಡೆದುಕೊಂಡಿದ್ದಾರೆ. ಪಾದಯಾತ್ರೆ ಮೂಲಕ ಪವಿತ್ರ ಹಜ್ ಯಾತ್ರೆಗೆ ಹೊರಡಬೇಕೆಂದು ಸುಮಾರು 8 ತಿಂಗಳಿಂದ ಸಿದ್ಧತೆ ಮಾಡಿಕೊಂಡ ಶಿಹಾಬ್ಗೆ ವಿದೇಶಾಂಗ ವ್ಯವಹಾರ ಸಚಿವಾಲಯದಿಂದ ಎಲ್ಲ ಅನುಮತಿ ಪಡೆದುಕೊಳ್ಳಲು ಕೇಂದ್ರ ಸಚಿವ ವಿ. ಮುರುಳೀಧರನ್ ಸಹಿತ ಹಲವರು ಮಹನೀಯರು ನೆರವಾಗಿದ್ದಾರೆ. ಒಟ್ಟು 8640 ಕಿ.ಮೀ ಹಾದಿಯನ್ನು 280 ದಿನಗಳಲ್ಲಿ ತಲುಪುವ ಗುರಿ ಹೊಂದಿದ್ದಾರೆ. 2023ನೇ ಸಾಲಿನ ಪವಿತ್ರ ಹಜ್ಗೆ ಅರ್ಜಿ ಹಾಕಿ ಮಕ್ಕಾಗೆ ತೆರಳುವುದು ನನ್ನ ಉದ್ದೇಶ. ಇದಕ್ಕೆ ನನ್ನ ಕುಟುಂಬ, ಗೆಳೆಯರ ಸಹಕಾರವಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಇನ್ನು ಯುವಕನ ಪಾದಯಾತ್ರೆಗೆ ಎಲ್ಲೆಡೆಯೂ ಸ್ವಾಗತ ದೊರೆಯುತ್ತಿದ್ದು ಊಟ, ಉಪಹಾರ, ವಸತಿ ವ್ಯವಸ್ಥೆಯಲ್ಲಿ ಕಲ್ಪಿಸಿಕೊಡಲಾಗುತ್ತಿದೆ. ನೂರಾರು ಮುಸ್ಲಿಂ ಸಮುದಾಯದ ಯುವಕರು ಸ್ಥಳೀಯವಾಗಿ ಪಾದಯಾತ್ರೆಗೆ ಸಾಥ್ ನೀಡುತ್ತಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ

    24/12/2025

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    24/12/2025

    ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ

    24/12/2025

    1 Comment

    1. Sachin on 13/06/2022 8:06 pm

      ಹುಷಾರಾಗಿ ಹೋಗಿ ಬನ್ನಿ ಸರ್

      Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ
    • ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    • ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ
    • ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು
    • ವಲಯ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.