Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇಗುಲ ಜೀರ್ಣೋದ್ಧಾರದಲ್ಲಿ ಕೈಜೋಡಿಸಿ: ಡಾ. ಯಡ್ತರೆ ರಾಜಮೋಹನ ಶೆಟ್ಟಿ ಮನವಿ
    Uncategorized

    ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇಗುಲ ಜೀರ್ಣೋದ್ಧಾರದಲ್ಲಿ ಕೈಜೋಡಿಸಿ: ಡಾ. ಯಡ್ತರೆ ರಾಜಮೋಹನ ಶೆಟ್ಟಿ ಮನವಿ

    Updated:20/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇತಿಹಾಸ ಪ್ರಸಿದ್ಧ ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಗಳು ಆರಂಭಗೊಂಡಿದ್ದು ಭಕ್ತವರ್ಗದ ಸಹಕಾರದಿಂದ ಸುಂದರ ದೇವಾಲಯ ಮರುನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ದೇವಳದ ಅನುವಂಶಿಯ ಆಡಳಿತ ಮೊಕ್ತೇಸರ ಡಾ. ಯಡ್ತರೆ ರಾಜಮೋಹನ ಶೆಟ್ಟಿ ಅವರು ಹೇಳಿದರು.

    Click Here

    Call us

    Click Here

    Watch Video

    ಬೈಂದೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಒಂದು ಸಾವಿರ ವರ್ಷಕ್ಕೂ ಹೆಚ್ಚಿನ ಇತಿಹಾಸ ಹೊಂದಿದೆ. ರಾಷ್ಟ್ರಕೂಟರು, ವಿಜಯನಗರದ ಅರಸರು ಹಾಗೂ ಕೆಳದಿ ಸಂಸ್ಥಾನದ ಅರಸರು ಈ ದೇವಸ್ಥಾನಕ್ಕೆ ರಾಜಾಶ್ರಯ ನೀಡಿದ್ದರು. ಕೆಳದಿ ಸಂಸ್ಥಾನ ಅರಸರ ಶಿಲ್ಪಕಲೆಯನ್ನು ಈ ದೇವಸ್ಥಾನ ಹೊಂದಿದ್ದು, ಇಲ್ಲಿನ ದೇವರ ಮೂರ್ತಿಗಳು, ನಂದಿ ಮೊದಲಾದವುಗಳಿಗೆ ಹಾಗೂ ಕೆಳದಿ ರಾಜರು ಕಟ್ಟಿಸಿದ ಬೇರೆ ದೇವಾಲಯದಕ್ಕೂ ಸಾಮ್ಯತೆ ಕಂಡುಬಂದಿದೆ ಎಂದರು.

    ರಾಜಾಶ್ರಯ ತಪ್ಪಿದ ಬಳಿಕ ಜೀರ್ಣಾವಸ್ಥೆಯಲ್ಲಿದ್ದ ಹಾಗೂ ಪರಕೀಯರ ದಾಳಿಯಿಂದ ಹಾನಿಗೊಳಗಾಗಿದ್ದ ದೇವಸ್ಥಾನವನ್ನು ಬಹಳ ವರ್ಷದ ಹಿಂದೆ ದುಗ್ಗಪ್ಪ ಶೆಟ್ಟಿ ಎನ್ನುವವರು ಪುನರ್ ನಿರ್ಮಾಣ ಮಾಡಿದ್ದರು ಎನ್ನಲಾಗುತ್ತದೆ. ಈಗ ದೇವಾಲಯ ಶಿಥೀಲಾವಸ್ಥೆ ತಲುಪಿರುವುದರಿಂದ ಮತ್ತೆ ಪುನರ್ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

    ಪದ್ಮನಾಭ ಶರ್ಮ ಹಿರಿಂಜಾಲಕೂಡ ಅವರ ಅಷ್ಟಮಂಗಲ ಪ್ರಶ್ನೆಯನ್ನು ಕಂಡುಬಂದಂತೆ ಅವರ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಸಲಾಗುತ್ತಿದೆ. ಯಕ್ಷಿ ಪ್ರತಿಷ್ಠೆ, ನಾಗ ದೇವರ ಪ್ರತಿಷ್ಠೆ ಈಗಾಗಲೇ ಆಗಿದೆ. ಮಹಾಲಿಂಗೇಶ್ವರನ ಗರ್ಭಗುಡಿ, ಮಹಿಷಮರ್ಧಿನಿ ಗರ್ಭಗುಡಿ ಹಾಗೂ ನಂದಿ ಮಂಟಪವನ್ನು ಮೊದಲ ಹಂತದಲ್ಲಿ ನಿರ್ಮಾಣಗೊಳ್ಳಲಿದ್ದು, ನಂತರ ಸುತ್ತು ಪೌಳಿ ನಿರ್ಮಾಣ ಆಗಲಿದೆ ಎಂದರು.

    ವಿಶಿಷ್ಟ ದೇಗುಲು:
    ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವರ ಗರ್ಭಗುಡಿ 23×23 ಫೀಟ್ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿದ್ದು ದಕ್ಷಿಣ ಭಾರತದಲ್ಲಿ ಇಷ್ಟು ದೊಡ್ಡ ಗರ್ಭಗುಡಿ ಯಾವುದೇ ದೇವಾಲಯದಲ್ಲಿ ಇಲ್ಲ ಎನ್ನಲಾಗುತ್ತಿದೆ. ದೇವಸ್ಥಾನದಲ್ಲಿರುವ ಉತ್ಸವ ಮೂರ್ತಿ ಎಡಗೈಯಲ್ಲಿ ಅಭಯ ಮಾಡುತ್ತಿರುವುದು ಕಂಡುಬರುತ್ತದೆ ಇದು ಅಪರೂಪದ್ದಾಗಿದೆ. ದೇವಸ್ಥಾನ ಜೀರ್ಣೋದ್ಧಾರಗೊಂಡ ಬಳಿಕವೂ ಶಿವರಾತ್ರಿಯಂದು ಲಿಂಗ ಸ್ವರ್ಶ ಪೂಜೆ ನಡೆಯಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ದೇಗುಲ ಪುರಾತನ ದೇವರ ವಿಗ್ರಹಗಳು ಹಾಗೂ ಪುಷ್ಕರಣಿ ಮನಮೋಹಕವಾಗಿದೆ.

    Click here

    Click here

    Click here

    Click Here

    Call us

    Call us

    ದೇವಳದ ಜೀರ್ಣೋದ್ಧಾರಕ್ಕೆ ಅಂದಾಜು 3.33 ಕೋಟಿ ವೆಚ್ಚವಾಗಲಿದ್ದು, ಸಾರ್ವಜನಿಕರು, ಭಕ್ತಾದಿಗಳು ದೇಣಿಗೆ ಒದಗಿಸುವಂತೆ ದೇವಳದ ಅನುವಂಶಿಯ ಆಡಳಿತ ಮೊಕ್ತೇಸರ ಡಾ. ಯಡ್ತರೆ ರಾಜಮೋಹನ ಶೆಟ್ಟಿ ಅವರು ಮನವಿ ಮಾಡಿಕೊಂಡಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಯಡ್ತರೆ ಮನೆ ಕುಟುಂಬಿಕರಾದ ಅರ್ಜುನ್ ಶೆಟ್ಟಿ, ಡಾ. ತಿಲಕ್ ಶೆಟ್ಟಿ, ಡಾ. ಮಿಥುನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    nineteen − 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.