Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಪೊಲೀಸರ ಚುರುಕಿನ ಕಾರ್ಯಚರಣೆ: 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ದರೋಡೆಕೋರರ ಬಂಧನ
    ಊರ್ಮನೆ ಸಮಾಚಾರ

    ಬೈಂದೂರು ಪೊಲೀಸರ ಚುರುಕಿನ ಕಾರ್ಯಚರಣೆ: 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ದರೋಡೆಕೋರರ ಬಂಧನ

    Updated:23/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ಜೂ.23:
    ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ದರೋಡೆಕೋರರನ್ನು ಬೆನ್ನಟ್ಟಿದ ಬೈಂದೂರು ಪೊಲೀಸರು ಕೆಲವೇ ದಿನಗಳಲ್ಲಿ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ಆರೋಪಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Click Here

    Call us

    Click Here

    ಬೈಂದೂರಿನಿಂದ ದೂರದ ಮಧ್ಯಪ್ರದೇಶದ ತನಕ ಆರೋಪಿಗಳನ್ನು ಬೆನ್ನಟ್ಟಿ ಒಟ್ಟು 466.90 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡ ಬೈಂದೂರು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಆರೋಪಿಗಳಾದ ಆಲಿಬಾನ್ (31), ಆಮ್ಜಲ್ಖಾನ್ (35) ಇಕ್ರಾರ್ (30) ಹಾಗೂ ಗೋಪಾಲ್ ಆಮ್ಲವರ್ (35) ಎಂಬ ನಾಲ್ವರನ್ನು ಬಂಧಿಸಿ ನ್ಯಾಯಾಲಯ ಹಾಜರುಪಡಿಸಿದ್ದು, ನ್ಯಾಯಾಲಯವು ಐದು ದಿನದ ಪೊಲೀಸ್ ಕಸ್ಟಡಿಗೆ ನೀಡಿದೆ.

    ಪ್ರಕರಣದ ಹಿನ್ನೆಲೆ:
    ಮಹಾರಾಷ್ಟ್ರದ ಥಾಣೆ ನಿವಾಸಿ ಈಶ್ವರ್ ದಲಿಚಂದ್ ಮುಂಬೈನಲ್ಲಿ ಚಿನ್ನ ಖರೀದಿಸಿ ಉಡುಪಿ, ಮಂಗಳೂರು ಮೊದಲಾದೆಡೆ ಮಾರಾಟ ಮಾಡುವ ವ್ಯವಹಾರ ನಡೆಸುತ್ತಿದ್ದರು. ಮುಂಬೈನಿಂದ ಬಸ್ಸಿನಲ್ಲಿ ಹೊರಟು ಜೂನ್ 16 ರಂದು ಶಿರೂರು ನೀರ್ಗದ್ದೆಯ ಹೋಟೆಲಿನಲ್ಲಿ ಉಪಹಾರಕ್ಕೆಂದು ನಿಲ್ಲಿಸಿದಾಗ ಅಪರಿಚಿತ ತಂಡವೊಂದು 466.90 ಗ್ರಾಂ ಒಟ್ಟು 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿಯಾಗಿದ್ದರು. ಈ ಬಗ್ಗೆ ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ದೂರು ದಾಖಲಾಗುತ್ತಿದ್ದಂತೆ ಡಿವೈಎಸ್ಪಿ ಶ್ರೀಕಾಂತ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚಿಸಲಾಗಿತ್ತು. ಬೈಂದೂರು ಠಾಣಾಧಿಕಾರಿ ಪವನ್ ನಾಯಕ್ ಮತ್ತು ಗಂಗೊಳ್ಳಿ ಠಾಣಾಧಿಕಾರಿ ವಿನಯ್ ಮುಂದಾಳತ್ವದ ಪ್ರತ್ಯೇಕ ತಂಡಗಳು ರಚಿಸಿ ಒಂದು ತಂಡ ಬೆಂಗಳೂರಿಗೆ ಹಾಗೂ ಇನ್ನೊಂದು ತಂಡ ಮುಂಬೈ ಕಡೆಗೆ ಕಳುಹಿಸಲಾಗಿತ್ತು.

    ಚಿನ್ನಾಭರಣ ದರೋಡೆಗೈದ ತಂಡ ಮಾರುತಿ ಬ್ರಿಝಾ ಕಾರಿನ ನಂಬರ್ ಬದಲಿಸಿ ಶಿವಮೊಗ್ಗ ಕಡೆಗೆ ಪರಾರಿಯಾಗಿದ್ದರು. ಸಾಗರದಲ್ಲಿ ತೆಲಂಗಾಣ, ಬೆಂಗಳೂರು ನಂಬರ್ ಪ್ಲೇಟ್ ಬಳಸಿದರೆ ಶಿವಮೊಗ್ಗದಲ್ಲಿ ವಾಹನದ ನಿಜವಾದ ನಂಬರ್ ಪ್ಲೇಟ್ ಬಳಸಿದ್ದರು.ವಿವಿಧ ಟೋಲ್ಗೇಟ್ ಸಂಪರ್ಕಿಸಿ ಫಾಸ್ಟ್ಯಾಗ್ ಮೂಲಕ ವಾಹನ ಸಾಗಿದ ಮಾರ್ಗವನ್ನು ಕಂಡು ಹಿಡಿದ ಪೊಲೀಸರು 4 ಗಂಟೆಯಲ್ಲಿ 250 ಕಿ.ಮೀ ಕ್ರಮಿಸಿದ್ದರು. ಬೆಂಗಳೂರಿನ ತೆಲಂಗಾಣ ಗಡಿಭಾಗಕ್ಕೆ ತೆರಳಿ ಬಳಿಕ ಮಹಾರಾಷ್ಟ್ರದಿಂದ ಮದ್ಯಪ್ರದೇಶಕ್ಕೆ ತೆರಳುವ ಮಾಹಿತಿ ಪಡೆದ ಪೊಲೀಸರು ಮಹಾರಾಷ್ಟ್ರ ಪೊಲೀಸರ ಸಹಕಾರ ಪಡೆದು ಮಹಾರಾಷ್ಟ್ರದ ದುಬೆ ಜಿಲ್ಲೆಯ ಸೋನಗಿರ್ ಎನ್ನುವ ಟೋಲ್ಗೇಟ್ ಬಳಿ ವಾಹನ ತಡೆದಿದ್ದಾರೆ. ಈ ವೇಳೆ ದರೋಡೆಕೋರರು ಪೊಲೀಸರ ಮೇಲೆ ವಾಹನ ಹಾಯಿಸಿ ಹಲ್ಲೆ ಮಾಡಲು ಮುಂದಾಗಿದ್ದರು. ಅಂತಿಮವಾಗಿ ಎಲ್ಲಾ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

    Click here

    Click here

    Click here

    Click Here

    Call us

    Call us

    ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ

    ಬೈಂದೂರು ವೃತ್ತ ನಿರೀಕ್ಷಕರ ಕಾರ್ಯಾಚರಣೆಗೆ ಮೆಚ್ಚುಗೆ:
    ಕೇವಲ ನಾಲ್ಕು ದಿನದಲ್ಲಿ ಕಳವುಗೈದ ಸಂಪೂರ್ಣ ಚಿನ್ನ ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಆನಂದ ಕಾಯ್ಕಿಣಿ ಅವರ ಪಾತ್ರ ದೊಡ್ಡದಿದೆ ಎನ್ನಲಾಗಿದೆ. ತಕ್ಷಣ ವಿವಿಧ ಟೋಲ್ಗೇಟ್ ಸಂಪರ್ಕ ಸಾಧಿಸಿ ಎಲ್ಲಾ ವಾಹನಗಳ ವಿವರ ಪಡೆದು ಕಳವಿಗೆ ಬಳಸಿದ ವಾಹನದ ನಿಖರತೆ ಪತ್ತೆ ಹಚ್ಚಿ ಮಹಾರಾಷ್ಟ್ರ ಕ್ರೈಮ್ ಪೊಲೀಸ್ ಸಂಜೀವ ಪಾಟೀಲ್ ತಂಡದ ಸಹಕಾರದೊಂದಿಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕೆಲವೆ ದಿನಗಳ ಹಿಂದೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಎಲ್ಲೂರು ಬಳಿ ಚಿನ್ನಾಭರಣ ಕದ್ದು ಪರಾರಿಯಾದ ಆರೋಪಿಯನ್ನು ಮಹಾರಾಷ್ಟ್ರದಿಂದ ಬಂಧಿಸಿ ಕರೆತರಲಾಗಿತ್ತು.

    ಪಿಎಸ್ಐ ಪವನ್ ನಾಯಕ್ & ವಿನಯ್ ಕೊರ್ಲಹಳ್ಳಿ

    ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ, ಬೈಂದೂರು ಪಿಸ್ಐ ಪವನ್ ನಾಯಕ್, ಗಂಗೊಳ್ಳಿ ಪಿಎಸ್ಐ ವಿನಯ್, ಆರಕ್ಷಕರಾದ ಮೋಹನ್ ಪೂಜಾರಿ ಶಿರೂರು, ನಾಗೇಂದ್ರ ಬೈಂದೂರು, ಶ್ರೀಧರ, ನಾಗೇಶ್ ಗೌಡ, ಸುಜೀತ್ ಕುಮಾರ್, ಶ್ರೀನಿವಾಸ ಉಪ್ಪುಂದ, ಪ್ರಿನ್ಸ್ ಶಿರೂರು, ಚಂದ್ರ ಮುಂತಾದವರು ಭಾಗಿಯಾಗಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four × 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.