Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರಂತ ಥೀಂ ಪಾರ್ಕ್: ಹುಟ್ಟೂರಿನಲ್ಲಿ ಕಾರಂತಜ್ಜನ ನೆನಪು ಸದಾ ಹಸಿರು
    ವಿಶೇಷ ವರದಿ

    ಕಾರಂತ ಥೀಂ ಪಾರ್ಕ್: ಹುಟ್ಟೂರಿನಲ್ಲಿ ಕಾರಂತಜ್ಜನ ನೆನಪು ಸದಾ ಹಸಿರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತದ ಹುಟ್ಟೂರಲ್ಲಿ ಅವರ ನೆನಪಿಗಾಗಿ ನಿರ್ಮಾಣಗೊಂಡಿರುವ ಸ್ಮಾರಕ ಭವನ ನಿಜಾರ್ಥದಲ್ಲಿ ಸಾರ್ಥಕ್ಯವನ್ನು ಕಾಣುತ್ತಿದೆ. ಪ್ರತಿ ವಾರವೂ ಭವನದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಸುವ ಮೂಲಕ ಉಡುಪಿ ಜಿಲ್ಲೆಯಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿರುವ ಕಾರಂತ ಭವವೀಗ (ಕಾರಂತ ಥೀಂ ಪಾರ್ಕ) ಸಾಂಸ್ಕೃತಿಕ ಕೇಂದ್ರವಾಗಿ ಮಾರ್ಪಟ್ಟಿದೆ. ಇದರೊಂದಿಗೆ ಅಕ್ಟೋಬರ್ 1ರಿಂದ ಅಕ್ಟೋಬರ್ 10ರ ವರೆಗೆ ನಡೆಯುತ್ತಿರುವ ವಿವಿಧ ವಿಚಾರಗಳ ‘ಚಿತ್ತಾರ’ ಭವನದ ನಿರ್ಮಾಣದ ಆಶಯಕ್ಕೆ ರೆಕ್ಕೆ ನೀಡಿದೆ.

    Click Here

    Call us

    Click Here

    [quote bgcolor=”#ffffff” arrow=”yes” align=”right”]ಅಕ್ಟೋಬರ್ 1ರಿಂದ 10ರ ವರೆಗೆ ಕಾರಂತ ಥೀಂ ಪಾರ್ಕನಲ್ಲಿ ಚಿತ್ತಾರ ಮಾತಿನಾಚೆಯ ಗುರುತು ಕಾರ್ಯಕ್ರಮ ನಡೆಯುತ್ತಲಿದೆ. ಖ್ಯಾತ ರಂಗಕರ್ಮಿ ಛಾಯಾಗ್ರಾಹಕ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಸದಾನಂದ ಸುವರ್ಣ ಅವರಿಗೆ ಅಕ್ಟೋಬರ್ 10ರಂದು ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಟೂನ್ ಹಬ್ಬ ಮತ್ತ ಸಾಂಸ್ಕೃತಿಕ ಸುಗ್ಗಿ 10 ದಿನಗಳ ಕಾಲವೂ ನಡೆಯಲಿದೆ.[/quote]

    2011ರಲ್ಲಿ ಕೋಟ ಶಿವರಾಮ ಕಾರಂತ ಕಲಾಭವನವನ್ನು ಕಾರಂತರು ಹುಟ್ಟಿ, ನಲಿದಾಡಿದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳ್ಕೆರೆಯಲ್ಲಿ ನಿರ್ಮಿಸಲಾಗಿದೆ. ಕಾರಂತರಿಗೆ ಹುಟ್ಟೂರಿನಲ್ಲಿಯೇ ಅವಿಸ್ಮರಣೀಯ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಿಗಳ ಹಾರೈಕೆ ಮತ್ತು ಡಾ.ಶಿವರಾಮ ಕಾರಂತರ ಅಪ್ಪಟ ಅಭಿಮಾನಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ಶ್ರಮ ಇಲ್ಲಿ ಕಾರ್ಯರೂಪಕ್ಕಿಳಿದದ್ದು ಇತಿಹಾಸ.

    ಇತ್ತೀಚೆಗಷ್ಟೆ ಕಾರಂತ ಥೀಂ ಪಾರ್ಕ್‌ನಲ್ಲಿ ನೂತನವಾಗಿ ಅಳವಡಿಸಲಾಧ ಕಲ್ಲಿನ ಉಯ್ಯಾಲೆ, ಕಲ್ಲಿನ ಕಾರಂಜಿ, ಕಲ್ಲು ಬೆಂಚುಗಳು ಮತ್ತು ಕಾರಂತರ ಫೈಬರ್ ಮೂರ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಗೊಳಿಸಿದ್ದಾರೆ. ಇದರೊಂದಿಗೆ ಕಾರಂತರ ಕೃತಿ ಮತ್ತು ಇಲ್ಲಿನ ಸಿರಿ ಸೊಬಗುಗಳು ಲಭ್ಯವಿರುವ ಕಾರಂತರ ಸಿರಿ ಉತ್ಪನ್ಯಗಳ ಮಳಿಗೆಯನ್ನು ಕೂಡ ನೂತನವಾಗಿ ಆರಂಭಿಸಲಾಗಿದೆ.

    ಕಾರಂತರ ಹುಟ್ಟೂರಿನಲ್ಲಿ ಅವರ ನೆನಪನ್ನು ಹಸಿರಾಗಿಸಿರಬೇಕೆಂಬ ಉದ್ದೇಶದೊಂದಿಗೆ ಹುಟ್ಟಿಕೊಂಡ ‘ಕಾರಂತ ಹುಟ್ಟೂರ ಪ್ರಶಸ್ತಿ’ಯನ್ನು ಪ್ರತಿವರ್ಷ ವಿಶೇಷ ಸಾಧಕರಿಗೆ ನೀಡುತ್ತಾ ಬರಲಾಗುತ್ತಿದೆ. ಈ ಪ್ರಶಸ್ತಿಯನ್ನು ನೀಡಲು ಆರಂಭಿಸಿ ಕಾರಂತರಿಗೆ ನಮನ ಸಲ್ಲಿಸುವುದರ ಜೊತೆಗೆ ಮುತುವರ್ಜಿಯಿಂದ ಈ ಕಲಾಭವನ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಕೋಟತಟ್ಟು ಗ್ರಾಮಪಂಚಾಯಿತಿ ಕಾರಂತರನ್ನು ವಿಶೇಷವಾಗಿ ಸ್ಮರಿಸುತ್ತಿದೆ.

    Click here

    Click here

    Click here

    Click Here

    Call us

    Call us

    Karantha theme park kota1

    Karantha Theme park Kota
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

    20/05/2026

    ಪಂಚವರ್ಣದಿಂದ ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ತೆರವು – ಹರ್ಷ ಪೂಜಾರಿ ಪ್ರಶಂಸೆ

    20/04/2026
    Leave A Reply Cancel Reply

    nineteen − one =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.