Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದೂ ಅಭ್ಯುದಯ ಸಂಘದ ‘ಶ್ರಾವಣ ಸಂಧ್ಯಾ’ ಕಾರ್ಯಕ್ರಮ ಸಂಪನ್ನ
    ಊರ್ಮನೆ ಸಮಾಚಾರ

    ಹಿಂದೂ ಅಭ್ಯುದಯ ಸಂಘದ ‘ಶ್ರಾವಣ ಸಂಧ್ಯಾ’ ಕಾರ್ಯಕ್ರಮ ಸಂಪನ್ನ

    Updated:11/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನಾವುಂದದ ಹಿಂದೂ ಅಭ್ಯುದಯ ಸಂಘದ ಆಶ್ರಯದಲ್ಲಿ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಶ್ರಾವಣ ಸಂಧ್ಯಾ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಯಳಜಿತದ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

    ಪ್ರಾರಂಭದಲ್ಲಿ ಯಳಜಿತದ ಶ್ರೀ ರಾಮಕೃಷ್ಣ ಕುಟೀರದ ಮಕ್ಕಳು ಚಂಡಿಕಾ ಪಾರಾಯಣದಲ್ಲಿ ಬರುವ ದೇವಿ ಸ್ತುತಿಗಳನ್ನು, ಸ್ಫುಟವಾಗಿ ಪಠಿಸಿದರು. ನಂತರ ಕಮಲಶಿಲೆಯ ಪೂರ್ಣಿಮಾ ಎನ್. ಭಟ್ ಅವರು ಹಿಂದೂ ಧಾರ್ಮಿಕ ಆಚರಣೆಗಳು ಮತ್ತು ಅವುಗಳ ಮಹತ್ವ ದ ಬಗ್ಗೆ ಸಂಪ್ರದಾಯಿಕ ಹಾಡುಗಳನ್ನು ಹೇಳುತ್ತಾ ಸವಿವರವಾಗಿ ಮಾತನಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಯಳಜಿತದ ಶ್ರೀ ರಾಮಕೃಷ್ಣ ಕುಟೀರದ ವಿದ್ಯಾರ್ಥಿಗಳಿಂದ ಸುಮಧುರವಾದ ಭಕ್ತಿ ರಸಮಂಜರಿ ಕಾರ್ಯಕ್ರಮ, ಆಗಮಿಸಿದ ಎಲ್ಲರನ್ನು ಮಂತ್ರ ಮುಗ್ಧಗೊಳಿಸಿತು, ರೋಮಾಂಚನಗೊಳಿಸಿತು.

    ಕುಟುಂಬ ಸಮೇತ ಭಾಗವಹಿಸಿದ್ದ ಸಾರ್ವಜನಿಕರಲ್ಲಿ ಮೂರು ಕುಟುಂಬಗಳನ್ನು, ಅದೃಷ್ಟ ಚೀಟಿ ಎತ್ತುವುದರ ಮೂಲಕ ಆಯ್ಕೆಮಾಡಿ, ಅಭಿನಂದಿಸಲಾಯಿತು. ವಾಸುದೇವ ಗಾಣಿಗ, ಸುಬ್ಬಯ್ಯ ದೇವಾಡಿಗ ಮತ್ತು ಪ್ರಶಾಂತ ಗಾಣಿಗ ದಂಪತಿಗಳೇ ಆ ಮೂರು ಅದೃಷ್ಟಶಾಲಿಗಳು. ಈ ಸಂದರ್ಭದಲ್ಲಿ ಆಗಮಿಸಿದ ಎಲ್ಲಾ ಮಹಿಳೆಯರಿಗೆ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರ ಪತ್ನಿಯಂದಿರು, ಮಂಗಳ ಸಂಕೇತದ ಅರಶಿನ, ಕುಂಕುಮ, ಹೂ, ಬಳೆ ಮತ್ತು ರವಿಕೆ ಕಣಗಳನ್ನು ನೀಡಿ, ಸತ್ಕರಿಸಿದರು.

    ಸಂಘದ ಅಧ್ಯಕ್ಷರಾದ ಶಶಿಧರ ಎಂ. ಶೆಟ್ಟಿ ಸ್ವಾಗತಿಸಿದರೆ, ಉಪಾಧ್ಯಕ್ಷ ಮನೋಹರ ಎನ್. ಕೆ. ವಂದಿಸಿದರು.

    Click here

    Click here

    Click here

    Call us

    Call us

    ಕಾರ್ಯದರ್ಶಿ ಎ. ಶಿವರಾಮ ಮಧ್ಯಸ್ಥ ಕಾರ್ಯಕ್ರಮ ನಿರೂಪಿಸಿದರೆ, ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಗಾಣಿಗ, ಅಭಿಷೇಕ್, ರತ್ನಾಕರ ಕೆ., ವಿಘ್ನೇಶ್ವರ ಕೆ., ವಿ.ಭಾಸ್ಕರ ಶೆಟ್ಟಿ, ಸುದರ್ಶನ ಗಾಣಿಗ, ಮಹೇಂದ್ರ ಪೂಜಾರಿ, ಶೀನ ಕೆ. ಪೂಜಾರಿ ಇವರುಗಳು ಕಾರ್ಯಕ್ರಮದ ವಿವಿಧ ಚಟುವಟಿಕೆಗಳನ್ನು ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ

    24/12/2025

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    24/12/2025

    ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ

    24/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ
    • ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    • ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ
    • ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು
    • ವಲಯ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.