Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರ್ಗಿ: ಹಲ್ಲೆ ನಡೆಸಿ ಮಹಿಳೆ ಆಭರಣ ದೋಚಿದ್ದ ಆರೋಪಿ ಬಂಧನ
    ಅಪಘಾತ-ಅಪರಾಧ ಸುದ್ದಿ

    ಕೊರ್ಗಿ: ಹಲ್ಲೆ ನಡೆಸಿ ಮಹಿಳೆ ಆಭರಣ ದೋಚಿದ್ದ ಆರೋಪಿ ಬಂಧನ

    Updated:12/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಅ.11:
    ತಾಲೂಕಿನ ಕೊರ್ಗಿ ಗ್ರಾಮದ ದಬ್ಬೆಕಟ್ಟೆ ಕಾಡಿನಬೇರೆ ಬಳಿ ಶಾಲೆಯಿಂದ ಬಸ್ಸಲ್ಲಿ ಬರುವ ಮಗಳನ್ನು ಮನೆಗೆ ಕರೆದೊಯ್ಯಲು ನಿಂತಿದ್ದ ಮಹಿಳೆ ತಲೆಗೆ ರಾಡಿನಲ್ಲಿ ಹೊಡೆದ ಆಭರಣ ದೋಚಿದ ಆರೋಪಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಹೊಸಾಡು ನಿವಾಸಿ ಪ್ರವೀಣ್ (24) ಬಂಧಿತ ಆರೋಪಿ

    Click Here

    Call us

    Click Here

    ಹಲ್ಲೆ ನಡೆಸಿ ದೋಚಿದ ಆಭರಣ ಗುಜ್ಜಾಡಿ ಸೊಸೈಟಿಯೊಂದರಲ್ಲಿ ಗಿರವಿ ಇಟ್ಟು 41 ಸಾವಿರ ನಗದು ಪಡೆದಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗುರುವಾರ ಸಂಜೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅಗಸ್ಟ್ 25ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ.

    ಅಗಸ್ಟ್ 5ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ದೇವಕಿ ಪೂಜಾರಿ ಎಂಬ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ತೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯಿಂದ ಚೇತರಿಸಿಕೊಂಡ ಮಹಿಳೆ ಇದೀಗ ಆಸ್ಪತ್ತೆಯಿಂದ ಬಿಡುಗಡೆ ಆಗಿದ್ದಾರೆ.

    ಕಂಡ್ಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಂಡ್ಕೂರು ಎಸ್ಸೈ ನಿರಂಜನ ಗೌಡ ಮತ್ತು ಸಿಬ್ಬಂದಿ ಆರೋಪಿ ಬಂಧಿಸಿದ್ದಾರೆ.

    ಕೃತ್ಯ ನಡೆಸುವ ಮೊದಲು ಆರೋಪಿ ಪ್ರವೀಣ್ ಎರಡು ಮೂರು ದಿನಗಳಿಂದ ಕೊರ್ಗಿ ಪರಿಸರಕ್ಕೆ ಬಂದು ಹೋಗುತ್ತಿದ್ದು, ದೇವಕಿಯವರ ಚಲನವಲನಗಳನ್ನು ಹತ್ತಿರದಿಂದಲೇ ಗಮನಿಸಿದ್ದ. ದೇವಕಿ ಅವರು ಮನೆಯಿಂದ ಹೊರಡುವ ಸಮಯ, ಶಾಲಾ ಬಸ್ ಬರುವ ಸಮಯ ಎಲ್ಲಾ ಮಾಹಿತಿಯನ್ನು ಕಲೆ ಹಾಕಿ ಸಾಕಷ್ಟು ಪೂರ್ವ ತಯಾರಿ ನಡೆಸಿಕೊಂಡಿದ್ದ. ಕೃತ್ಯ ನಡೆಸುವ ಸ್ಥಳದಿಂದ ಅನತಿ ದೂರದಲ್ಲಿ ಬೈಕ್ ಅನ್ನು ನಿಲ್ಲಿಸಿ ರಾಡ್ನಿಂದ ಹಲ್ಲೆ ನಡೆಸಿ ಚಿನ್ನಾಭರಣವನ್ನು ಎಗರಿಸಿ ಆ ಬಳಿಕ ಬೈಕ್ ಮೂಲಕ ವಾಪಾಸ್ಸಾಗಿದ್ದ. ಘಟನೆ ನಡೆಯುವ ಸ್ವಲ್ಪ ಸಮಯದ ಮುಂಚೆ ವ್ಯಕ್ತಿಯೋರ್ವ ಬೈಕಿನಲ್ಲಿ ಅನುಮಾನಾಸ್ಪದವಾಗಿ ತಿರುಗಾಡಿದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರ ಆಧಾರದಲ್ಲಿ ಅಂಗಡಿಯೊಂದರ ಸಿಸಿ ಟಿವಿ ಪರೀಕ್ಷಿಸಿದ್ದು ತನಿಕೆ ಮುಂದುವರಿಸಿದ್ದರು. ಕೃತ್ಯಕ್ಕೆ ಸ್ನೇಹಿತನ ಬೈಕ್ ಬಳಸಿಕೊಂಡಿದ್ದು, ಕೀ ಇಲ್ಲದ ಕಾರಣ ಯಾವ ಸಮಯದಲ್ಲಾದರೂ ಬೈಕ್ ಅನ್ನು ಪ್ರವೀಣ್ ತೆಗೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ.

    Click here

    Click here

    Click here

    Click Here

    Call us

    Call us

    ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್.ಕೆ. ಕುಂದಾಪುರ ಉಪವಿಭಾಗ ಹಾಗೂ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್.ರವರ ನೇತೃತ್ವದಲ್ಲಿ, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಿರಂಜನ್ ಗೌಡ ಬಿ. ಎಸ್, ಸಿಬ್ಬಂದಿಗಳಾದ ರಾಜು.ಬಿ, ಅನಿಲ್ ಕುಮಾರ್, ಚಿದಾನಂದ, ಜೀಪು ಚಾಲಕ ಆನಂದ, ಕುಂದಾಪುರ ಉಪವಿಭಾಗ ಅಪರಾಧ ಪತ್ತೆ ದಳದ ರಾಮು ಹೆಗ್ಡೆ ಮತ್ತು ರಾಘವೇಂದ್ರ ಉಪ್ಪುಂದ, ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ್ ಕಾರ್ಯಾಚರಣೆಯಲ್ಲಿ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    10 + 3 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.